ಶಕ್ತಿ ಯೋಜನೆಯಿಂದ ನಷ್ಟ; ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಆಟೊ ಚಾಲಕರ ಆಗ್ರಹ

ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಬೇಕು. ಈ ಮೂಲಕ ಆಟೋ ಚಾಲಕರ ಗುಂಪಿಗೆ ಸಹಾಯ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಕ್ತಿ ಯೋಜನೆಯಿಂದ ನಷ್ಟ; ತಿಂಗಳಿಗೆ 10 ಸಾವಿರ ರೂ. ಪರಿಹಾರಕ್ಕೆ ಆಟೊ ಚಾಲಕರ ಆಗ್ರಹ
ಸಾಂದರ್ಭಿಕ ಚಿತ್ರ

Updated on: Jul 13, 2023 | 7:30 PM

ಬೆಂಗಳೂರು: ಮಹಿಳೆಯರಿಗೆ ಸರಕಾರಿ ಬಸ್​​​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆ (Shakti Scheme) ಜಾರಿಯಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರಿನ ಆಟೋ ರಿಕ್ಷಾ (Auto Rikshaw) ಚಾಲಕರು ಸರಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಲವಾರು ಆಟೋ ಮತ್ತು ಟ್ಯಾಕ್ಸಿ ಚಾಲಕರು ತಮಗೆ ಆಗುತ್ತಿರುವ ನಷ್ಟದ ಬಗ್ಗೆ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದ್ದಾರೆ.

ಈಗಾಗಲೇ ತಮ್ಮ ಆದಾಯವನ್ನು ಬೈಕ್ ಟ್ಯಾಕ್ಸಿಗಳು ಕಬಳಿಸುತ್ತಿದ್ದು, ಈಗ ಶಕ್ತಿ ಯೋಜನೆ ಜಾರಿಯಿಂದ ತಮ್ಮ ಜೀವನ ನಿರ್ವಹಣೆಯೇ ದುಸ್ತರವಾಗಿದೆ ಎಂದು ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆಗಳಿಂದಾಗಿ ಅನೇಕ ಚಾಲಕರು ಮನೆ ಬಾಡಿಗೆ ಪಾವತಿಸಲು, ಸಾಲವನ್ನು ಮರುಪಾವತಿಸಲು ಮತ್ತು ತಮ್ಮ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Bengaluru Mysuru Expressway: ವಿರುದ್ಧ ಲೇನ್​​ನಲ್ಲಿ ಬಂದ ಆಟೊ ರಿಕ್ಷಾ; ತಪ್ಪಿದ ದುರಂತ

ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಬೇಕು. ಈ ಮೂಲಕ ಆಟೋ ಚಾಲಕರ ಗುಂಪಿಗೆ ಸಹಾಯ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಬೇಡಿಕೆಗಳಲ್ಲದೆ, ಅಸಂಘಟಿತ ವಾಣಿಜ್ಯ ಚಾಲಕರಿಗೆ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮತ್ತು ಸರ್ಕಾರದ ವಿವಿಧ ಅಭಿವೃದ್ಧಿ ಮಂಡಳಿಗಳ ಮೂಲಕ 2 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿದರದ ಸಾಲವನ್ನು ಒದಗಿಸುವಂತೆ ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us