AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಗ್ಯಾಸ್ ದರ ಹೆಚ್ಚಳ; ಆಟೋ ಮೀಟರ್ ಮಿನಿಮಮ್ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ

ಪ್ರತಿ ಮೂರು ವರ್ಷಕ್ಕೊಮ್ಮೆ ಆಟೋ ಮಿನಿಮಮ್ ದರ ಏರಿಕೆ ಮಾಡುವ ಅವಕಾಶವಿದೆ. ಆದರೆ ಸಾರಿಗೆ ಇಲಾಖೆ ಏರಿಕೆಗೆ ಅವಕಾಶ ನೀಡಿಲ್ಲ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಮನವಿಯಲ್ಲಿ ತಿಳಿಸಿದ್ದಾರೆ.

ಆಟೋ ಗ್ಯಾಸ್ ದರ ಹೆಚ್ಚಳ; ಆಟೋ ಮೀಟರ್ ಮಿನಿಮಮ್ ದರ ಹೆಚ್ಚಿಸಲು ಸರ್ಕಾರಕ್ಕೆ ಮನವಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 03, 2021 | 3:04 PM

Share

ಬೆಂಗಳೂರು: ಆಟೋ ಗ್ಯಾಸ್ ದರ ಏರಿಸಿರುವ ಸರ್ಕಾರದ ನಡೆಗೆ ಆಟೋ ಚಾಲಕರು ಮತ್ತು ಮಾಲೀಕರ ಅಸೋಸಿಯೇಷನ್‌ಗಳು ಖಂಡನೆ ವ್ಯಕ್ತಪಡಿಸಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು ಹೆಚ್ಚಿಸಲು ಆಗ್ರಹಿಸಿವೆ. ಆಟೋ ಗ್ಯಾಸ್ ದರ (Auto Gas Rate) ಏರಿಕೆ ಮಾಡಿರುವುದು ಹೊರೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ, ಆಟೋ ಮೀಟರ್ ಮಿನಿಮಮ್ ದರ ಏರಿಸಬೇಕು ಎಂದು ಸಹ ಅಸೋಸಿಯೇಶನ್ ಆಗ್ರಹಿಸಿದೆ. ಆಟೋ ಮೀಟರ್ ಕನಿಷ್ಠ ದರವನ್ನು 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡುವಂತೆ ಆಟೋ ಚಾಲಕರ ಅಸೋಸಿಯೇಷನ್​ಗಳು ಮನವಿ ಮಾಡಿವೆ.

ಜತೆಗೆ ಮಿನಿಮಮ್ ದರವನ್ನು ಪ್ರತಿ ಕಿ.ಮೀ.ಗೆ ₹ 16 ರಂತೆ ನಿಗದಿಪಡಿಸಬೇಕು ಎಂದು ಸಹ ಆಟೋ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಪ್ರತಿ ಲೀಟರ್ ಗ್ಯಾಸ್ ದರ ₹ 56 ಕ್ಕೆ ಮಾರಾಟವಾಗುತ್ತಿದ್ದು, ಆಟೋ ಗ್ಯಾಸ್ ದರ ಒಂದೇ ದಿನದಲ್ಲಿ ₹ 5.50 ಏರಿಕೆ ಕಂಡಿದೆ. ಹೀಗಾಗಿ ಆಟೋ ಪ್ರಯಾಣದ ಕನಿಷ್ಠ ದರವನ್ನು (Auto Meter Minimum Rate) ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ (Karnataka Government) ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಮನವಿ ಮಾಡಿದ್ದಾರೆ.

ಆಟೋ ಗ್ಯಾಸ್ ದರ ಏರಿಕೆಯಾಗಿರುವುದು ಆಟೋ ಚಾಲಕರ ಮತ್ತು ಮಾಲೀಕರ ಅಸೋಸಿಯೇಷನ್ ಗಳು ಸರ್ಕಾರದ ಮೇಲೆ ಅಸಮಾಧಾನಗೊಳ್ಳಲು ಕಾರಣವಾಗಿದೆ. ಕಳೆದ ಒಂಬತ್ತು ವರ್ಷಗಳ ಹಿಂದೆ ಆಟೋ ಕನಿಷ್ಠ ಮೀಟರ್ ದರ ಏರಿಕೆಯಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಆಟೋ ಮಿನಿಮಮ್ ದರ ಏರಿಕೆ ಮಾಡುವ ಅವಕಾಶವಿದೆ. ಆದರೆ ಸಾರಿಗೆ ಇಲಾಖೆ ಏರಿಕೆಗೆ ಅವಕಾಶ ನೀಡಿಲ್ಲ. ಆಟೋ ಎಲ್ ಪಿಜಿ ದರ ಏರಿಕೆ ಆದ ಹಿನ್ನೆಲೆಯಲ್ಲಿ ಆಟೋ ಮಿನಿಮಲ್ ದರವನ್ನು 30 ರೂಪಾಯಿಗೆ ಏರಿಕೆ ಮಾಡಲು ಅವಕಾಶ ನೀಡುವಂತೆ ಈಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಆಟೋ ಚಾಲಕರಿಗೆ ಬಿತ್ತು ಬರೆ; ಎಲ್​ಪಿಜಿ ಗ್ಯಾಸ್ ದರ ಏರಿಕೆ

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಏರಿಕೆ; ನಿಮ್ಮೂರಿನಲ್ಲಿ ಆಭರಣದ ಬೆಲೆ ಎಷ್ಟಿದೆ?

(Auto Gas Rate Increased Appeal to Karnataka Government to increase Auto Meter Minimum fare)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ