AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Auto Rickshaw Offences: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ವಿವರ ಇಲ್ಲಿದೆ

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ಇಂತಹ ದುಬಾರಿ ಪ್ರಯಾಣ ದರಗಳ ಬಗ್ಗೆ ಸಂಚಾರಿ ಪೊಲೀಸ್​ ಅಧಿಕಾರಿಗಳಿಗೆ ತಿಳಿಸಬಹುದು ಎಂಬುದೇ ಅನೇಕರಿಗೆ ತಿಳಿದಿಲ್ಲ!

Auto Rickshaw Offences: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ವಿವರ ಇಲ್ಲಿದೆ
ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರು ಪ್ರಯಾಣಕ್ಕೆ ಹೆಚ್ಚಿನ ದರ ಕೇಳಿದರೆ ಏನು ಮಾಡಬೇಕು? ವಿವರ ಇಲ್ಲಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 03, 2022 | 3:13 PM

ಬೆಂಗಳೂರಿನಲ್ಲಿ ಆಟೋ ಡ್ರೈವರ್‌ಗಳು (auto drivers) ಕಡಿಮೆ ಪ್ರಯಾಣಕ್ಕಾಗಿ (short rides) ಪ್ರಯಾಣಿಕರಿಂದ ಹೆಚ್ಚು ಹೆಚ್ಚು ದರಗಳನ್ನು ಕೇಳಿದಾಗ ಅನ್ಯಮಾರ್ಗ ಕಾಣದೆ ನೀವು ಆಗಾಗ್ಗೆ ಅವರೊಂದಿಗೆ ವಾಗ್ವಾದಕ್ಕೆ (argument) ಇಳಿಯುತ್ತೀರಿ. ಬಹುತೇಕ ವೇಳೆ, ಪ್ರಯಾಣಿಕರು ತಮ್ಮ ಗಮ್ಯಸ್ಥಾನವನ್ನು ತಲುಪುವ ಆತುರದಲ್ಲಿರುವಾಗ ಯಾವುದೇ ಆಯ್ಕೆಯಿಲ್ಲದೆ ಹೆಚ್ಚು ದುಡ್ಡು ತೆತ್ತು ಬಿಟ್ಟು ಬಿಡುತ್ತಾರೆ. ಆದರೆ ಇದನ್ನು ತಪ್ಪಿಸಬಹುದು.ಇದಕ್ಕೆ ಹೌದಾ ಎಂದು ನೀವು ಆಶ್ಚರ್ಯಪಡಬೇಕಾಗಿಲ್ಲ! ಏಕೆಂದರೆ ಅಂತಹ ವ್ಯವಸ್ಥೆಯೊಂದು ಬೆಂಗಳೂರು ಸಂಚಾರಿ ಪೊಲೀಸರು (Bengaluru Police) ಅಂದಿನಿಂದಲೂ ಕೊಡಮಾಡುತ್ತಾ ಬಂದಿದ್ದಾರೆ. ಇಂತಹ ಅಧಿಕ ದರಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಬಹುದು ಎಂದು ಅನೇಕರಿಗೆ ತಿಳಿದಿಲ್ಲ.

ಅಂತಹ ಆಟೋ ಚಾಲಕರ ಬಗ್ಗೆ ತಮಗೆ ವರದಿ ಮಾಡಲು/ ದೂರು ನೀಡಲು (Auto Rickshaw Offences) ಬೆಂಗಳೂರು ಪೊಲೀಸರು ಮಾರ್ಗದರ್ಶಿಯಪೊಂದನ್ನು ಟ್ವೀಟ್ ಮಾಡಿದ್ದಾರೆ. ಅಂತಹ ಪ್ರಕರಣ ವರದಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಭರವಸೆ ನೀಡಿದ್ದಾರೆ. ಹೆಚ್ಚಿನ ದರಕ್ಕೆ ಬೇಡಿಕೆಯಿಡುವ ಆಟೋ ಚಾಲಕನ ಬಗ್ಗೆ ಬಳಕೆದಾರರು ದೂರು ನೀಡಬಹುದು ಎಂದು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿನ ಪೋಸ್ಟ್ ಕೆಳಗಿನಂತೆ ಪೋಸ್ಟ್ ಮಾಡಿ, ಪ್ರಯಾಣಿಕರ ​ನೆರವಿಗೆ ಬಂದಿದ್ದಾರೆ:

ದೂರುಗಳನ್ನು ಸಲ್ಲಿಸಲು ನೀವು ನಮ್ಮ ಸ್ವಯಂಚಾಲಿತ IVRS ಗೆ ಕರೆ ಮಾಡಬಹುದು. ದಯವಿಟ್ಟು 080-2286 8550/ 2286 8444 ಗೆ ಕರೆ ಮಾಡಿ ಮತ್ತು ಆಟೋ ರಿಕ್ಷಾದ ನೋಂದಣಿ ಸಂಖ್ಯೆ, ಸ್ಥಳ, ಸಮಯ ಮತ್ತು ದಿನಾಂಕವನ್ನು ನಮೂದಿಸಿ. ಆಟೋ ಅಪರಾಧಗಳ ವಿರುದ್ಧ ದೂರುಗಳನ್ನು ಬುಕ್ ಮಾಡಲು ದಯವಿಟ್ಟು ನಮ್ಮ IVRS ಅನ್ನು ಬಳಸಿ. ಅಷ್ಟೇ ಅಲ್ಲ ಆಟೋ ಚಾಲಕರು ತಮ್ಮ ಕರ್ತವ್ಯದ ಸಮಯದಲ್ಲಿ ಪ್ರಯಾಣಿಉಕರು ಕೇಳುವ ಸ್ಥಳಕ್ಕೆ ಬರಲು ನಿರಾಕರಿಸಿದರೆ ಸಹ ದೂರು ದಾಖಲಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, IVRS ದೂರುಗಳನ್ನು ದಾಖಲಿಸದೆಯೇ, ಪ್ರಯಾಣಿಕರು ಸುಮ್ಮನೆ ದೂರು ಹೇಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾರೆ. ಆದರೆ ಹಾಗೆ ಮಾಡುವ ಮೊದಲು ಪೊಲೀಸರಿಗೆ ದೂರು ಸಲ್ಲಿಸುವುದು ಸಮಂಜಸವಾದೀತು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ನವೆಂಬರ್‌ನಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಆಟೋ ಮೀಟರ್ ದರವನ್ನು ಹೆಚ್ಚಿಸಿತ್ತು. ಮೊದಲ ಎರಡು ಕಿಲೋಮೀಟರ್‌ಗಳಿಗೆ 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆಯಾಗಿದೆ. ಮತ್ತು ಪ್ರತಿ ಕಿಲೋಮೀಟರ್‌ಗೆ ಮೂಲ ಬೆಲೆಯನ್ನು ₹ 13 ರಿಂದ 15 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು