AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್ ಕಂಪನಿಗಳಿಗೆ ಸಡ್ಡು ಹೊಡೆಯಲು ಮುಂದಾದ ಆಟೋ ಚಾಲಕರು: ‘ನಮ್ಮ ಯಾತ್ರಿ’ ನೂತನ ಆ್ಯಪ್​ ರಚಿಸಿದ ಆಟೋ ಯೂನಿಯನ್

ಆಟೋ ಯೂನಿಯನ್​ನಿಂದ ನಮ್ಮ ಯಾತ್ರಿ ಆಟೋ ಬುಕ್ಕಿಂಗ್ ಆ್ಯಪ್​ನ್ನು ಸಿದ್ಧಪಡಿಸಲಾಗಿದೆ. ಓಲಾ ಊಬರ್ ಕಂಪನಿಗಳಿಗೆ ಸಡ್ಡು ಹೊಡೆಯಲು ಆಟೋ ಚಾಲಕರು ಮುಂದಾಗಿದ್ದಾರೆ.

ಓಲಾ, ಊಬರ್ ಕಂಪನಿಗಳಿಗೆ ಸಡ್ಡು ಹೊಡೆಯಲು ಮುಂದಾದ ಆಟೋ ಚಾಲಕರು: 'ನಮ್ಮ ಯಾತ್ರಿ' ನೂತನ ಆ್ಯಪ್​ ರಚಿಸಿದ ಆಟೋ ಯೂನಿಯನ್
ನಮ್ಮ ಯಾತ್ರಿ, ನೂತನ ಆ್ಯಪ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 09, 2022 | 3:42 PM

Share

ಬೆಂಗಳೂರು: ಓಲಾ ಊಬರ್ ಕಂಪನಿಗಳಿಗೆ ಸಡ್ಡು ಹೊಡೆಯಲು ಆಟೋ ಚಾಲಕರು ಮುಂದಾಗಿದ್ದು, ಆಟೋ ಯೂನಿಯನ್ (Auto Union) ​ನಿಂದ ನೂತನ ಆ್ಯಪ್​ ರಚಿಸಿದ್ದಾರೆ. ಒಂದು ಕಡೆ ಆಟೋ ಚಾಲಕರಿಗೆ ವಂಚನೆಯಾಗುತ್ತಿದ್ದು, ಮತ್ತೊಂದು ಕಡೆ ಗ್ರಾಹಕರಿಗೂ  ಓಲಾ ಊಬರ್ ವಂಚನೆ ಮಾಡುತ್ತಿವೆ ಎನ್ನಲಾಗುತ್ತಿದೆ. ಇದರಿಂದ ಬೇಸತ್ತು ಯಾವುದೇ ಮಧ್ಯವರ್ತಿ ಇಲ್ಲದೆ ನಮ್ಮ ಯಾತ್ರಿ (Namma Yatri) ಅನ್ನೋ ಆಟೋ ಬುಕ್ಕಿಂಗ್ ಆ್ಯಪ್​ನ್ನು ಸಿದ್ಧಪಡಿಸಿದ್ದು, ನವೆಂಬರ್ ತಿಂಗಳಲ್ಲಿ ಆಟೋ ಯುನಿಯನ್‌ ಆ್ಯಪ್ ಬಿಡುಗಡೆ ಮಾಡುತ್ತಿದೆ. ಸರ್ಕಾರ ನಿಗದಿ ಮಾಡಿರುವ ಹಣವಷ್ಟೇ ಚಾರ್ಜ್ ಮಾಡಲು ನಿರ್ಧಾರ ಮಾಡಲಾಗಿದೆ. 2 ಕಿಲೋಮೀಟರ್​ಗೆ ಕೇವಲ 30 ರೂಪಾಯಿ. ಬುಕ್ಕಿಂಗ್ ಚಾಚ್೯ 10 ರೂಪಾಯಿ ಸೇರಿ ಒಟ್ಟು 40 ರೂಪಾಯಿಯಲ್ಲಿ ನೀವು ಕರೆದ ಕಡೆ, ನಿಗದಿತ ಕಿಲೋಮೀಟರ್​ಗಿಂತ ದೂರ ಸಂಚಾರ ಮಾಡಬಹು. 1ಕಿಲೋಮೀಟರ್​ಗೆ 15 ರೂಪಾಯಿ ನಿಗದಿಯಾಗಿದ್ದು, ಆಟೋ ಯುನಿಯನ್‌ ಬಿಡುಗಡೆಯಾಗುತ್ತಿರುವ ಬಗ್ಗೆ ಆಟೋ ಚಾಲರಿಂದಲೂ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ಒಲಾ- ಒಬರ್ ಕಂಪನಿಗಳು ಮಾಡುತ್ತಿರುವ ತಪ್ಪಿಗೆ ಆಟೋ ಚಾಲಕರಿಗೆ ಕೆಟ್ಟ ಹೆಸರಿದೆ. ಹೆಚ್ಚು ಹಣ ತೆಗೆದುಕೊಳ್ಳುತ್ತಾರೆ ಅಂತ ಗ್ರಾಹಕರು ದೂರುತ್ತಾರೆ. ಇದೀಗಾ ನಮ್ಮದೇ ಯುನಿಯನ್ ಇಂದ ಆ್ಯಪ್ ಬಿಡುಗಡೆ ಮಾಡುತ್ತಿರುವುದು ಖಷಿ ಇದೆ. ಆಟೋ ಚಾಲಕರ ಸಮಸ್ಯೆ ಏನು ಅಂತ ಯುನಿಯನ್​ಗೆ ಗೊತ್ತಿದೆ. ನಮ್ಮ ಯಾತ್ರಿ ಆ್ಯಪ್​ಗೆ ಸಪೋರ್ಟ್ ಮಾಡುತ್ತೇವೆ ಎಂದು ಆಟೋ ಚಾಲಕರು ಹೇಳುತ್ತಿದ್ದಾರೆ.

ನೋಟಿಸ್ ಕೊಟ್ಟು ಮೂರು ದಿನವಾದ್ರು ಪ್ರತಿಕ್ರಿಯೆ ನೀಡದ ಕಂಪನಿಗಳು

ಬೆಂಗಳೂರಿನಲ್ಲಿ ಆಟೋ ಸೇವೆಗೆ ಮೀಡಿಯೇಟರ್ ಆಗಿರುವ ಓಲಾ-ಉಬರ್ ಸಂಸ್ಥೆಗಳು ಪ್ಲಾಟ್​ಫಾರ್ಮ್ ಹೆಸರಲ್ಲಿ ಗ್ರಾಹಕರ ಬಳಿ ಸುಲಿಗೆ ಮಾಡುತ್ತಿವೆ. ಸ್ವತಃ ಸಾರಿಗೆ ಇಲಾಖೆಯೇ ಆನ್​ಲೈನ್ ಆಟೋ ಸೇವೆ ಅಕ್ರಮ ಅಂತ ಹೇಳಿದೆ. ತಮ್ಮ ಸೇವೆ ನಿಲ್ಲಿಸುವಂತೆ ತಾಕೀತು ಮಾಡಿ ನೋಟಿಸ್ ನೀಡಿದೆ. ಆದರೆ ಓಲಾ, ಉಬರ್ ಸಂಸ್ಥೆಗಳು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಡೋಂಟ್ ಕೇರ್ ಅಂತಿವೆ. ಓಲಾ, ಉಬರ್, ರಾಪಿಡೋ ವಿರುದ್ಧ ಸಾಲು ಸಾಲು ದೂರುಗಳು ಕೇಳಿ ಬರ್ತಿವೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಇಷ್ಟು ವರ್ಷ ಸುಮ್ಮನೆ ಕುಳಿತಿದ್ದ ಅಧಿಕಾರಿಗಳು ಈಗ, ನಾವು ಕ್ಯಾಬ್ ಸೇವೆಗೆ ಮಾತ್ರ ಅನುಮತಿ ಕೊಟ್ಟಿರೋದು. ಆಟೋ ಸೇವೆ ನಿಲ್ಲಿಸಿ ಅಂತ ಓಲಾ, ಉಬರ್, ರ್ಯಾಪಿಡೋಗೆ ನೋಟಿಸ್ ನೀಡಿ 3 ದಿನ ಗಡುವು ನೀಡಿತ್ತು. ಆದ್ರೆ ಕೊಟ್ಟ ಕಾಲಾವಕಾಶ ಮುಗಿದ್ರೂ ಅಧಿಕಾರಿಗಳು ಯಾವುದೇ ನಿರ್ದಾಕ್ಷೀಣ್ಯ ಕ್ರಮ ಕೈಗೊಂಡಿಲ್ಲ.

ಓಲಾ, ಉಬರ್​ ಕಂಪನಿಗಳು ಕ್ಯಾಬ್ ಅಗ್ರಿಗೇಟರ್ ಪರವಾನಗಿ ಮಾತ್ರ ಹೊಂದಿವೆ. ಆದ್ರೆ ನಿಯಮ ಗಾಳಿಗೆ ತೂರಿ ಟ್ಯಾಕ್ಸಿ ಜೊತೆ ಆಟೋ ಸೇವೆ ನೀಡ್ತಿದೆ. ಸರ್ಕಾರ ಆಟೋ ಪ್ರಯಾಣಕ್ಕೆ ದರ ನಿಗದಿ ಮಾಡಿದೆ. ಆಟೋರಿಕ್ಷಾಗಳಿಗೆ ಮೊದಲ 2 ಕಿ.ಮೀ.ಗಳಿಗೆ 30 ರೂಪಾಯಿ, 2 ಕಿಲೋ ಮೀಟರ್ ಬಳಿಕ ಪ್ರತಿ ಕಿಲೋ ಮೀಟರ್​ಗೆ 15 ರೂಪಾಯಿ ನಿಗದಿ ಮಾಡಿದೆ. ರಾತ್ರಿ 10 ಗಂಟೆ ಬಳಿಕ ಬೆಳಗ್ಗೆ 5 ಗಂಟೆವರೆಗೂ ಬಾಡಿಗೆ ಶೇ.50ರಷ್ಟು ಹೆಚ್ಚಿಸಬಹುದು ಎಂದು ಹೇಳಿದೆ. ಆದ್ರೆ ಈ ನಿಯಮ ಅಗ್ರಿಗೇಟರ್ ಟ್ಯಾಕ್ಸಿ ಕಂಪನಿಗಳಿಗೆ ಅನ್ವಯಿಸಲ್ಲ. ಯಾಕಂದ್ರೆ ಓಲಾ, ಉಬರ್ ಬಳಿ ಇರೋದು ಟ್ಯಾಕ್ಸಿ ಸೇವೆಯ ಲೈಸನ್ಸ್. ಹೀಗಾಗಿ ಗ್ರಾಹಕರ ಬಳಿ ಓಲಾ, ಉಬರ್, ರಾಪಿಡೋ ಸುಲಿಗೆ ಮಾಡ್ತಿವೆ. 2 ಕಿ.ಮೀಟರ್​ಗೆ 100 ರೂಪಾಯಿ ಪಡೆದು, ಆಟೋ ಚಾಲಕರಿಗೆ 60 ರೂಪಾಯಿ ನೀಡಿ 40 ರೂಪಾಯಿ ಜೇಬಿಗೆ ಇಳಿಸ್ತಿವೆ.

ಇನ್ನು ಈ ಆ್ಯಪ್​ಗಳ ಆಟಾಟೋಪ ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಪ್ರಯಾಣಿಕರು ಆಟೋ ಹತ್ತಲು ಹಿಂದೇಟು ಹಾಕ್ತಿದ್ದಾರೆ ಅಂತ ಆಟೋ ಚಾಲಕರು ಸಹ ಅಳಲು ತೋಡಿಕೊಂಡಿದ್ದಾರೆ. ಈ ಬ್ಲೇಡ್ ಕಂಪನಿಗಳ ಕಳ್ಳಾಟ ಸಾರಿಗೆ ಇಲಾಖೆಯ ಗಮನಕ್ಕೂ ಬಂದಿದೆ. ಅಕ್ರಮ ನಡೀತಿದೆ, ಕಾನೂನು ಉಲ್ಲಂಘನೆ ಆಗ್ತಿದೆ ಎಂದು ತಿಳಿದಿದ್ದರೂ ಸಾರಿಗೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಸಾರ್ವಜನಿಕರು ಈ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಂತೆ ಓಲಾ, ಉಬರ್, ರಾಪಿಡೋ ಆಟೋ ಸೇವೆಯೇ ಅಕ್ರಮ. ನಿಮ್ಮ ಸೇವೆ ನಿಲ್ಲಿಸಿ ಅಂತ ನೋಟಿಸ್ ನೀಡಿದೆ. ಸಾರಿಗೆ ಅಧಿಕಾರಿಗಳು ಕೊಟ್ಟ 3 ದಿನಗಳ ಗಡುವು ನೀಡಿದ್ರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:41 pm, Sun, 9 October 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!