AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avarebele Mela: ಚುಮು ಚುಮು ಚಳಿಗೆ ಅವರೆಬೇಳೆಯ ವೆರೈಟಿ ಖಾದ್ಯ ಸವಿದು ಎಂಜಾಯ್ ಮಾಡುತ್ತಿರುವ ಸಿಟಿ ಮಂದಿ

ಬೆಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನ್ಯಾಷನಲ್ ಕಾಲೇಜು ಮೈದಾನದಲ್ಲಿ 24ನೇ ಆವೃತ್ತಿಯ ಅವರೆ ಬೇಳೆ ಮೇಳ ನಡಿಯುತ್ತಿದೆ. ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಮೇಳವನ್ನು ಆಯೋಜಿಸಲಾಗಿದ್ದು, ಸಿಲಿಕಾನ್​ ಸಿಟಿ ಜನರಿಗೆ ಹೊಸ ವರ್ಷದ ಆರಂಭದಲ್ಲೇ ಅವರೆ ಬೆಳೆ ವಿವಿಧ ಫುಡ್ ಸವಿಯುವ ಅವಕಾಶ ಸಿಕ್ಕಿದೆ.

Avarebele Mela: ಚುಮು ಚುಮು ಚಳಿಗೆ ಅವರೆಬೇಳೆಯ ವೆರೈಟಿ ಖಾದ್ಯ ಸವಿದು ಎಂಜಾಯ್ ಮಾಡುತ್ತಿರುವ ಸಿಟಿ ಮಂದಿ
ಅವರೆಬೇಳೆ ಮೇಳ
Poornima Agali Nagaraj
| Edited By: |

Updated on: Jan 07, 2024 | 7:19 AM

Share

ಬೆಂಗಳೂರು, ಜ.07: ಪ್ರತಿ ವರ್ಷ ಸಂಕ್ರಾಂತಿ ಹಬ್ಬ ಬಂದ್ರೆ ಸಾಕು ಬೆಂಗಳೂರಿನಲ್ಲಿ ಅವರೆಕಾಯಿ ಘಮಲು ಜೋರಾಗಿರುತ್ತೆ.‌ ಈ ವರ್ಷವು ಅವರೆಕಾಯಿ ಮೇಳ (Avarebele Mela) ಆರಂಭವಾಗಿದ್ದು, ಅವರೆಕಾಯಿಯಿಂದ ಮಾಡಿದ್ದ ಖಾಧ್ಯಗಳನ್ನ ತಿಂದು ಸಿಲಿಕಾನ್ ಸಿಟಿ (Bengaluru) ಮಂದಿ ಎಂಜಾಯ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನ್ಯಾಷನಲ್ ಕಾಲೇಜು ಮೈದಾನದಲ್ಲಿ (National College Ground) 24ನೇ ಆವೃತ್ತಿಯ ಅವರೆ ಬೇಳೆ ಮೇಳ ನಡಿಯುತ್ತಿದೆ.

ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಮೇಳವನ್ನು ಆಯೋಜಿಸಲಾಗಿದ್ದು, ಸಿಲಿಕಾನ್​ ಸಿಟಿ ಜನರಿಗೆ ಹೊಸ ವರ್ಷದ ಆರಂಭದಲ್ಲೇ ಅವರೆ ಬೆಳೆ ವಿವಿಧ ಫುಡ್ ಸವಿಯುವ ಅವಕಾಶ ಸಿಕ್ಕಿದೆ. ಜ.05ರ ಶುಕ್ರವಾರದಿಂದ ಈ ಮೇಳ ಆರಂಭವಾಗಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.‌ ಇನ್ನು ಕಳೆದ ವರ್ಷ ಸುಮಾರು 40 ಸ್ಟಾಲ್‌ಗಳಿದ್ದರೆ, ಈ ವರ್ಷ ಸುಮಾರು 80 ಸ್ಟಾಲ್‌ಗಳಿವೆ. ಹಿರಿಯ ನಾಗರಿಕರಿಗೆ ವಿಶೇಷ ಕೌಂಟರ್ ಜೊತೆಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಸುಮಾರು ನೂರಕ್ಕೂ ಹೆಚ್ಚು ವೆರೈಟಿ ಫುಡ್​ಗಳು ಫುಡ್ ಪ್ರಿಯರನ್ನ ಕೈಬೀಸಿ ಕರೆಯುತ್ತಿವೆ.

ಇದನ್ನೂ ಓದಿ: ಚಿತ್ರಸಂತೆಗೆ ಬೆಂಗಳೂರು ಸಜ್ಜು: ವಿಶೇಷ ಮೆಟ್ರೋ ಫೀಡರ್​​ ಸೇವೆ, ಮಾರ್ಗ ಬದಲಾವಣೆ ಕುರಿತಾದ ಮಾಹಿತಿ ಇಲ್ಲಿದೆ

ಇನ್ನು ಪಿಜ್ಜಾ, ಬರ್ಗರ್, ಕೆಎಫ್‍ಸಿ ತಿಂದು ಬೋರಾದ ಫುಡ್ ಪ್ರಿಯರಿಗೆ ಈಗ, ಅವರೇ ಫುಡ್ ಸವಿಯೋ ಚಾನ್ಸ್ ಸಿಕ್ಕಿದೆ. ಅವರೆ ಬೇಳೆ ಸ್ವೀಟ್ಸ್ ಗೂ ಸೈ, ಅವರೆ ಬೇಳೆ ಚಾಟ್ಸ್ ಗೂ ಸೈ ಅಂತಾ ಅವರೆ ಬೇಳೆ ಪ್ರಿಯರಿಗೆ ರಸದೌತಣವಾಗಿದೆ.‌

ಅವರೆಕಾಯಿ ವೇಳಕ್ಕೆ ಹೋದರೆ ಇವುಗಳನ್ನು ಮಿಸ್ ಮಾಡಬೇಡಿ

ಅವರೆ ಬೇಳೆಯ ಕ್ರಿಸ್ಪಿ ಕ್ರಿಸ್ಪಿ ದೋಸೆ, ಗರಂ ಗರಂ ಅವರೆ ಪಾಯಸ, ಟೇಸ್ಟಿ ಟೇಸ್ಟಿ ಅವರೆ ಮಂಚೂರಿಯನ್, ವಡೆ, ಕೋಡುಬಳೆ, ಐಸ್‌ಕ್ರೀಂ, ಹಲ್ವಾ ಇತ್ಯಾದಿ.

ಒಟ್ಟಿನಲ್ಲಿ ಚುಮು ಚುಮು ಚಳಿಗೆ ಅವರೇ ಬೆಳೆ ಪುಡ್ಸ್ ಗಳು ಸಖತ್ ಟೆಸ್ಟ್ ಕೊಡ್ತಿದ್ದು, ನಿನ್ನೆ ವಿಕೇಂಡ್ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಜನ ಅವರೇ ವೇಳಕ್ಕೆ ಬಂದು ಎಂಜಾಯ್ ಮಾಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ