AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​​​​ ಮಳೆಯಿಂದ ರೈತರಿಗೆ ಸಂಕಷ್ಟ: ಚಳಿಗಾಲದಲ್ಲಿ ಬೆಂಗಳೂರಿಗರಿಗೆ ಶಾಕ್​​​ ಕೊಟ್ಟ ಅವರೆಕಾಯಿ

ಬೆಂಗಳೂರಿನಲ್ಲಿ ಅವರೆಕಾಯಿ ಬೆಲೆ ಗಗನಕ್ಕೇರಿದ್ದು, ಚಳಿಗಾಲದಲ್ಲಿ ಜನರಿಗೆ ಹೊರೆಯಾಗಿದೆ. ಅನಿಯಮಿತ ಮಳೆ, ಆಗಸ್ಟ್ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇದರಿಂದ ಮಾರುಕಟ್ಟೆಗೆ ಅವರೆಕಾಯಿ ಸರಬರಾಜು ಕಡಿಮೆಯಾಗಿ ಬೆಲೆ ಏರಿದೆ. ಪ್ರತಿ ಕೆ.ಜಿ.ಗೆ 80 ರೂ.ನಿಂದ 400 ರೂ.ವರೆಗೂ ತಲುಪಿದೆ. ಇಳುವರಿ ವಿಳಂಬ, ಬೆಳೆ ಕೈಬಿಟ್ಟ ರೈತರು ಪರಿಸ್ಥಿತಿಗೆ ಕಾರಣ.

ಆಗಸ್ಟ್​​​​ ಮಳೆಯಿಂದ ರೈತರಿಗೆ ಸಂಕಷ್ಟ: ಚಳಿಗಾಲದಲ್ಲಿ ಬೆಂಗಳೂರಿಗರಿಗೆ ಶಾಕ್​​​ ಕೊಟ್ಟ ಅವರೆಕಾಯಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 03, 2025 | 12:32 PM

Share

ಬೆಂಗಳೂರು, ಡಿ.3: ಬೆಂಗಳೂರಿನಲ್ಲಿ (Bengaluru) ವಾತಾವರಣ ಬದಲಾಗಿದೆ. ಪ್ರಸುತ್ತ ಚಳಿಯ ವಾತಾರಣದಲ್ಲಿ ಬೆಂಗಳೂರಿನ ಜನ ವಾಸಿಸುತ್ತಿರುವ ಕಾರಣ ಅವರೆಕಾಯಿ ಈ ಋತುಮಾನದಲ್ಲಿ ಒಳ್ಳೆಯದು. ಆದರೆ ಇದರ ಬೆಲೆ ಏರಿಕೆಯಾಗಿದೆ. ಇದರಿಂದ ಬೆಂಗಳೂರಿನ ಜನರ ಅವರೆಕಾಯಿಯನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಅನಿಯಮಿತ ಮುಂಗಾರು ಮಳೆಯಿಂದಾಗಿ ಅವರೆಕಾಯಿ ಬೆಳಗಾರರು ತುಂಬಾ ಸಂಕಷ್ಟವನ್ನು ಅನುಭವಿಸಿದ್ದಾರೆ. ಈ ಕಾರಣದಿಂದ ಅವರೆಕಾಯಿ ಬೆಲೆ ದುಬಾರಿಯಾಗಿದೆ. ಈಶಾನ್ಯ ಮಾನ್ಸೂನ್ ಮಳೆ ಹಾಗೂ ಆಗಸ್ಟ್​​ ತಿಂಗಳಿನಲ್ಲಿ ಆಗಿರುವ ಮಳೆಯಿಂದ ಇಳುವರಿಗೆ ತುಂಬಾ ಸಂಕಷ್ಟ ಎದುರಾಗಿದೆ ಎಂದು ರೈತರು ಹೇಳಿದ್ದಾರೆ. ಆದರೆ ಇದರ ನಡುವೆ ಒಂದು ಖುಷಿ ಸಂಗತಿ ಕೂಡ ಇದೆ. ಪ್ರಸುತ್ತ ಋತುಮಾನದಲ್ಲಿ ಅಂದರೆ ಗಾಳಿ ಹಾಗೂ ಬೆಳಗಿನ ಇಬ್ಬನಿಯಿಂದ ಈ ಬೆಳೆ ಮತ್ತೆ ಚೇರಿಕೆ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಿಗರು ಈ ವರ್ಷಪೂರ್ತಿ ಅವರೆಕಾಯಿ ಬೆಲೆ ಏರಿಕೆಯನ್ನು ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿವರ್ಷ ನವೆಂಬರ್‌ನಿಂದ ಸರಬರಾಜುಗಳು ಬರಲು ಪ್ರಾರಂಭವಾಗುತ್ತದೆ ಮತ್ತು ಸಂಕ್ರಾಂತಿಯ ನಂತರವೂ ಅದು ಮುಂದುವರಿಯುತ್ತದೆ. ಈ ಹೊತ್ತಿಗೆ, ಅವರೆಕಾಯಿ ಪ್ರತಿ ಕಿಲೋಗೆ 50 ರೂ.ನಿಂದ 40 ರೂ.ಗೆ ಇಳಿದಿರಬೇಕಿತ್ತು .ಆದರೆ ಅದು ಇನ್ನೂ 80 ರೂ. ನಲ್ಲಿಯೇ ಇದೆ ಎಂದು ಮಲ್ಲೇಶ್ವರದ ಮಾರಾಟಗಾರರೊಬ್ಬರು ತಿಳಿಸಿದ್ದಾರೆ. ಇನ್ನು ಸಿಪ್ಪೆ ಸುಲಿದ ಅವರೆಗೆ ಕಿಲೋಗೆ 400 ರೂ. ಆಗಿದೆ. ಇದರಿಂದ ರೈತರು ಕೂಡ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಋತುಮಾನಗಳಲ್ಲಿ ಬೆಳೆ ನಷ್ಟವಾದ ಕಾರಣ ಈ ವರ್ಷ ಬೆಳೆ ಕೈಬಿಟ್ಟೆ ಎಂದು ಮಾಗಡಿಯ ಅವರೆಕಾಯಿ ಕೃಷಿಕರೊಬ್ಬರು ಹೇಳಿದ್ದಾರೆ. ಅವರೆಕಾಯಿ ಬಿತ್ತನೆಗೆ ಆಗಸ್ಟ್ ತಿಂಗಳು ಉತ್ತಮ, ಆದರೆ ಈ ವರ್ಷ ನಿರಂತರ ಮಳೆಯಿಂದ ಎಲ್ಲವೂ ಕೊಚ್ಚಿಹೋಗಿದೆ ಎಂದು ಚಿಕ್ಕಬಳ್ಳಾಪುರದ ರೈತ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: “ಬೆಂಗಳೂರಿನಲ್ಲಿ ಹೊಸ ಫ್ಲಾಟ್ ಬಾಡಿಗೆ ಹಗರಣ”: 15 ಸಾವಿರ ರೂ.ಗೆ 2BHK ಅಪಾರ್ಟ್‌ಮೆಂಟ್​​, ಇದು ನಂಬಲು ಸಾಧ್ಯವೇ?

ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿದ್ದಾರೆ. ರೈತರು ಮಳೆಯ ಸಮಯದಲ್ಲಿ ಬಿತ್ತನೆ ಮಾಡಿದ್ದಾರೆ. ಇದರಿಂದ ಈ ಪರಿಸ್ಥಿತಿ ಎದುರಿಸಬೇಕಿದೆ. ಮಳೆ ನಿಂತ ಮೇಲೆ ಬಿತ್ತನೆ ಮಾಡಬೇಕಿತ್ತು. ಇದರಿಂದಾಗಿ ಕೊಯ್ಲು ವಿಳಂಬವಾಗಿದೆ ಎಂದು ಹೇಳಿದರು. ಹಾಪ್‌ಕಾಮ್ಸ್ ನಿರ್ದೇಶಕರ ಪ್ರಕಾರ, ಬೆಂಗಳೂರು ಈಗ ಹುಣಸೂರು ಪ್ರದೇಶದ ಉತ್ಪನ್ನಗಳನ್ನು ಅವಲಂಬಿಸಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಿಂದ ಸರಬರಾಜುಗಳು ಇದೀಗ ಬರಲು ಪ್ರಾರಂಭಿಸಿವೆ. ಮುಂದಿನ ದಿನಗಳ ಋತುಮಾನದಲ್ಲಿ ಇದರ ಬೆಳೆ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ