AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭದ ಹಣ ದಾನ ಮಾಡುವುದಕ್ಕೆಂದು ಹೂಡಿಕೆ ಮಾಡಿದ ಉದ್ಯಮಿಗೆ ಕಾದಿತ್ತು ಶಾಕ್: 8 ಕೋಟಿ ರೂ. ಖತಂ!

ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಕಳೆದುಕೊಂಡಿದ್ಹೇಗೆ? ವಂಚನೆ ಬೆಳಕಿಗೆ ಬಂದಿದ್ಹೇಗೆ? ಇಲ್ಲಿದೆ ಮಾಹಿತಿ.

ಲಾಭದ ಹಣ ದಾನ ಮಾಡುವುದಕ್ಕೆಂದು ಹೂಡಿಕೆ ಮಾಡಿದ ಉದ್ಯಮಿಗೆ ಕಾದಿತ್ತು ಶಾಕ್: 8 ಕೋಟಿ ರೂ. ಖತಂ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Dec 15, 2025 | 1:06 PM

Share

ಬೆಂಗಳೂರು, ಡಿಸೆಂಬರ್ 15: ಅಯೋಧ್ಯೆಯ ರಾಮಭಕ್ತನಾಗಿರುವ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ (Cyber Fraud) ಭಾರೀ ಮೋಸಕ್ಕೆ ಒಳಗಾಗಿ 8.3 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಚಕರು ಅವರಿಂದ ಹಣ ಪೀಕಿಸಿದ್ದಾರೆ. ವಂಚನೆಗೆ ಒಳಗಾದವರು ರಾಜೇಂದ್ರ ನಾಯ್ಡು (71) ಎಂಬ ಉದ್ಯಮಿಯಾಗಿದ್ದು, ಅಯೋಧ್ಯೆಯ ರಾಮ ಭಕ್ತರಾಗಿದ್ದಾರೆ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಾಗ್ರಿಗಳನ್ನು ದೇಣಿಗೆ ನೀಡಿದ್ದರು. ಈ ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಲ್ಲಿ ಸಾಲ ಪಡೆದು ಅದನ್ನು ಸಂಪೂರ್ಣವಾಗಿ ತೀರಿಸಿದ್ದರು. ಈ ಮಾಹಿತಿಯನ್ನು ಸಂಗ್ರಹಿಸಿಕೊಂಡಿದ್ದ ಸೈಬರ್ ವಂಚಕರ ಜಾಲ, ನಾಯ್ಡು ಅವರಿಗೆ ಕರೆ ಮಾಡಿ ನಿಮ್ಮ ಸಿಬಿಲ್ ಸ್ಕೋರ್ ಉತ್ತಮವಾಗಿದೆ ಎಂದು ನಂಬಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸಿತು.

ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಂದ ಲಾಭದ ಹಣವನ್ನು ದಾನ ಕಾರ್ಯಗಳಿಗೆ ಬಳಸಬಹುದು ಎಂಬ ಉದ್ದೇಶದಿಂದ ರಾಜೇಂದ್ರ ನಾಯ್ಡು ಹೂಡಿಕೆಗೆ ಮುಂದಾಗಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್ ಇನ್​​ಸ್ಟಾಲ್ ಮಾಡುವಂತೆ ಸೂಚಿಸಿದ್ದರು. ಆ್ಯಪ್ ಮೂಲಕ ಹೂಡಿಕೆ ವಿವರಗಳು ತೋರಿಸುತ್ತಿದ್ದುದರಿಂದ ನಂಬಿದ ನಾಯ್ಡು ಮೊದಲಿಗೆ 25 ಲಕ್ಷ ರೂಪಾಯಿ RTGS ಮೂಲಕ ವರ್ಗಾಯಿಸಿದ್ದರು.

ವಂಚನೆ ಎಂಬ ಬಗ್ಗೆ ಸಂಶಯ ಬಂದಿದ್ದು ಹೇಗೆ?

ಆ್ಯಪ್‌ನಲ್ಲಿ ಹೂಡಿಕೆ ಯಶಸ್ವಿಯಾಗಿದೆ ಎಂಬುದು ತೋರಿದ ಬಳಿಕ ಹಂತ ಹಂತವಾಗಿ ಒಟ್ಟು 8.3 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ್ದಾರೆ. ಆ್ಯಪ್‌ನಲ್ಲಿ ಈ ಮೊತ್ತಕ್ಕೆ 59.4 ಕೋಟಿ ರೂಪಾಯಿ ಲಾಭಾಂಶ ಬಂದಿದೆ ಎಂದು ತೋರಿಸಲಾಗಿತ್ತು. ಇದರಲ್ಲಿ 15 ಕೋಟಿ ರೂಪಾಯಿ ವಿತ್‌ಡ್ರಾ ಮಾಡಲು ಪ್ರಯತ್ನಿಸಿದಾಗ ಸಾಧ್ಯವಾಗಿರಲಿಲ್ಲ. ಇದರಿಂದ ನಾಯ್ಡು ಅವರಿಗೆ ವಂಚನೆಯ ಅನುಮಾನ ಬಂದಿದೆ.

ಹಣ ವಿತ್​ಡ್ರಾ ಮಾಡಲು ಸಾಧ್ಯವಾಗದ ಬಗ್ಗೆ ಪ್ರಶ್ನಿಸಿದಾಗ ವಂಚಕರು, ಅದಕ್ಕೆ ಶೇಕಡಾ 18 ರಷ್ಟು ಸೇವಾ ಶುಲ್ಕವಾಗಿ 2.70 ಕೋಟಿ ರೂಪಾಯಿ ಪಾವತಿಸಬೇಕು ಎಂದು ಬೇಡಿಕೆ ಇಟ್ಟರು. ಇದರಿಂದ ಅನುಮಾನಗೊಂಡ ರಾಜೇಂದ್ರ ನಾಯ್ಡು ತಕ್ಷಣ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರು.

ಇದನ್ನೂ ಓದಿ: ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ‌!

ಈ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚಕರ ಖಾತೆಯಲ್ಲಿ ಇದ್ದ ಸುಮಾರು 61 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ಸೈಬರ್ ವಂಚಕರ ಜಾಲ ಪತ್ತೆಗೆ ತನಿಖೆ ಮುಂದುವರೆದಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ