AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು

ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 07, 2023 | 8:06 PM

Share

ಬೆಂಗಳೂರು: ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ (Dr. Venkataramanaiah) ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಉಲ್ಲಂಘಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ 1957ರ ನಿಯಮ 10(3) ಪ್ರಕಾರ ಅಧಿಕಾರವನ್ನು ಚಲಾಯಿಸಿ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿ ಎಸ್​ ಶೈಲಜ ಎನ್ನುವವರು ಫೆಬ್ರವರಿ 6ರಂದು ಮಧ್ಯಾಹ್ನ ಸುಮಾರು 4.30 ವೇಳೆಯಲ್ಲಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಮಿಸಿದ ಡಾ. ವೆಂಕಟರಾಮಯ್ಯ ಕೊಲೆ ಬೆದರಿಕೆ ಹಾಕಿ ಬೈದು ಹೀಯಾಳಿಸಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನಲಾಗುತ್ತಿದೆ. ಇಂತಹ ಬೆದರಿಕೆಗಳಿಂದ ಕೆಲಸ ಮಾಡಲು ತೊಂದರೆ ಆಗುತ್ತಿದೆ ಎಂದು ಎಸ್​ ಶೈಲಜ ಅವರು ಫೆಬ್ರವರಿ 7ರಂದು ದೂರು ನೀಡಿದ್ದಾರೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಮುಖ್ಯ ಆಡಳಿತಾಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ಆದ್ದರಿಂದ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಸರ್ಕಾರಿ ನೌಕರರಿಗೆ ಸಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹಾಗಾಗಿ ಡಾ. ವೆಂಕಟರಾಮಯ್ಯ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ