AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು

ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 07, 2023 | 8:06 PM

Share

ಬೆಂಗಳೂರು: ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ (Dr. Venkataramanaiah) ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಉಲ್ಲಂಘಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ 1957ರ ನಿಯಮ 10(3) ಪ್ರಕಾರ ಅಧಿಕಾರವನ್ನು ಚಲಾಯಿಸಿ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿ ಎಸ್​ ಶೈಲಜ ಎನ್ನುವವರು ಫೆಬ್ರವರಿ 6ರಂದು ಮಧ್ಯಾಹ್ನ ಸುಮಾರು 4.30 ವೇಳೆಯಲ್ಲಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಮಿಸಿದ ಡಾ. ವೆಂಕಟರಾಮಯ್ಯ ಕೊಲೆ ಬೆದರಿಕೆ ಹಾಕಿ ಬೈದು ಹೀಯಾಳಿಸಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನಲಾಗುತ್ತಿದೆ. ಇಂತಹ ಬೆದರಿಕೆಗಳಿಂದ ಕೆಲಸ ಮಾಡಲು ತೊಂದರೆ ಆಗುತ್ತಿದೆ ಎಂದು ಎಸ್​ ಶೈಲಜ ಅವರು ಫೆಬ್ರವರಿ 7ರಂದು ದೂರು ನೀಡಿದ್ದಾರೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಮುಖ್ಯ ಆಡಳಿತಾಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ಆದ್ದರಿಂದ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಸರ್ಕಾರಿ ನೌಕರರಿಗೆ ಸಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹಾಗಾಗಿ ಡಾ. ವೆಂಕಟರಾಮಯ್ಯ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ