AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು

ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿಗೆ ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ: ಹಿರಿಯ ವೈದ್ಯಾಧಿಕಾರಿ ಅಮಾನತು
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 07, 2023 | 8:06 PM

Share

ಬೆಂಗಳೂರು: ಆಯುರ್ವೇದ, ಯುನಾನಿ ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ವೆಂಕಟರಮಣಯ್ಯ (Dr. Venkataramanaiah) ವಿರುದ್ದ ಕೊಲೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿಬಂದ ಹಿನ್ನೆಲೆ ಅಮಾನತು ಮಾಡಿ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಉಲ್ಲಂಘಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ 1957ರ ನಿಯಮ 10(3) ಪ್ರಕಾರ ಅಧಿಕಾರವನ್ನು ಚಲಾಯಿಸಿ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.

ಆಯುಷ್ ಇಲಾಖೆ ಮುಖ್ಯ ಆಡಳಿತಾಧಿಕಾರಿ ಎಸ್​ ಶೈಲಜ ಎನ್ನುವವರು ಫೆಬ್ರವರಿ 6ರಂದು ಮಧ್ಯಾಹ್ನ ಸುಮಾರು 4.30 ವೇಳೆಯಲ್ಲಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಮಿಸಿದ ಡಾ. ವೆಂಕಟರಾಮಯ್ಯ ಕೊಲೆ ಬೆದರಿಕೆ ಹಾಕಿ ಬೈದು ಹೀಯಾಳಿಸಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎನ್ನಲಾಗುತ್ತಿದೆ. ಇಂತಹ ಬೆದರಿಕೆಗಳಿಂದ ಕೆಲಸ ಮಾಡಲು ತೊಂದರೆ ಆಗುತ್ತಿದೆ ಎಂದು ಎಸ್​ ಶೈಲಜ ಅವರು ಫೆಬ್ರವರಿ 7ರಂದು ದೂರು ನೀಡಿದ್ದಾರೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಮುಖ್ಯ ಆಡಳಿತಾಧಿಕಾರಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ಆದ್ದರಿಂದ, ಡಾ. ವೆಂಕಟರಾಮಯ್ಯ ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಇದನ್ನೂ ಓದಿ: Bengaluru News: ಚರಣ್ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ಎಫ್​ಐಆರ್ ದಾಖಲು

ಸರ್ಕಾರಿ ನೌಕರರಿಗೆ ಸಲ್ಲದ ರೀತಿಯಲ್ಲಿ ವರ್ತಿಸಿ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 2021 ರ ನಿಯಮ 3(1) (i) (ii) (iii) ಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಹಾಗಾಗಿ ಡಾ. ವೆಂಕಟರಾಮಯ್ಯ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಲು ತೀರ್ಮಾನಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?