ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ: ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪಸಮಿತಿಯ ಸಭೆಯಲ್ಲಿ ನಿರ್ಧಾರ

ಅನಧಿಕೃತವಾದ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ. ಆ ಎಲ್ಲ ಸ್ವತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿ ದೀಪ, ಕಸ ವಿಲೇವಾರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದೆ.

ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ: ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪಸಮಿತಿಯ ಸಭೆಯಲ್ಲಿ ನಿರ್ಧಾರ
ಅರಣ್ಯ ಸಚಿವ ಈಶ್ವರ್​ ಖಂಡ್ರೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 19, 2023 | 5:12 PM

ಬೆಂಗಳೂರು, ಅ.19: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿಯಲ್ಲಿ ಅಕ್ರಮ ಬಡಾವಣೆಗಳಲ್ಲಿ, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳ ಮಾಲೀಕರು ಮೂಲಭೂತ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಈಶ್ವರ ಖಂಡ್ರೆ (Eshwar Khandre) ಅಧ್ಯಕ್ಷತೆಯ ಉಪಸಮಿತಿಯಲ್ಲಿ ಪ್ರಥಮ ಸಭೆ ಆಯೋಜಿಸಲಾಗಿದ್ದು, ಈ ವೇಳೆ ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ ನೀಡಲು ನಿರ್ಧಾರ ಮಾಡಲಾಗಿದೆ.

ಹೌದು, ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯ ರಚಿಸಲಾಗಿರುವ ಉಪಸಮಿತಿಯ ಸಭೆಯನ್ನು ಇಂದು ನಡೆಸಲಾಗಿತ್ತು.

ಇದನ್ನೂ ಓದಿ:ಬೆಂಗಳೂರು: ಅರಣ್ಯ ಭೂಮಿ ಬದಲಾವಣೆ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ

ಈ ವೇಳೆ ‘ಪ್ರಸ್ತುತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು, ಈ ಪೈಕಿ ಸುಮಾರು 20.55 ಲಕ್ಷ ಅಧಿಕೃತ ಆಸ್ತಿಗಳಾಗಿದ್ದು ತೆರಿಗೆ ಪಾವತಿಸುತ್ತಿದ್ದರೆ, ಅನಧಿಕೃತವಾದ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ. ಆ ಎಲ್ಲ ಸ್ವತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿ ದೀಪ, ಕಸ ವಿಲೇವಾರಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದ್ದು, ಇಂತಹ ಅನಧಿಕೃತ ಕಟ್ಟಡಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಬಿ’ ವಹಿಯಲ್ಲಿ ಖಾತೆ ನೀಡಿ, ಆಸ್ತಿ ತೆರಿಗೆ ಸಂಗ್ರಹಿಸುವ ರೀತಿಯಲ್ಲೇ ದಂಡ ಸಹಿತ ಕಟ್ಟಡ ಕಂದಾಯ ಸಂಗ್ರಹಿಸಲು ಶಿಫಾರಸ್ಸು ಮಾಡುವ ಬಗ್ಗೆ ಉಪ ಸಮಿತಿ ಚರ್ಚೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us