Bengaluru: ಕಿಡ್ನಿ ವೈಫಲ್ಯ ಹೊಂದಿದ ವ್ಯಕ್ತಿಗೆ ರೋಬೋಟ್ ನೆರವಿನಿಂದ ಮಗುವಿನ ಮೂತ್ರಪಿಂಡ ಕಸಿ

Bengaluru News: ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ ವೈದ್ಯರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ರೋಬೊಟ್ ನೆರವಿನಿಂದ 13 ತಿಂಗಳ ಮಗುವಿನ ಮೂತ್ರಪಿಂಡವನ್ನು ಕಸಿ ಮಾಡಿದ್ದಾರೆ.

Bengaluru: ಕಿಡ್ನಿ ವೈಫಲ್ಯ ಹೊಂದಿದ ವ್ಯಕ್ತಿಗೆ ರೋಬೋಟ್ ನೆರವಿನಿಂದ ಮಗುವಿನ ಮೂತ್ರಪಿಂಡ ಕಸಿ
ಕಿಡ್ನಿ ವೈಫಲ್ಯ ಹೊಂದಿದ ವ್ಯಕ್ತಿಗೆ ರೋಬೋಟ್ ನೆರವಿನಿಂದ ಮಗುವಿನ ಮೂತ್ರಪಿಂಡ ಕಸಿ ಮಾಡಿದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ ವೈದದ್ಯರು (ಸಾಂದರ್ಭಿಕ ಚಿತ್ರ)
Follow us
|

Updated on: Jun 29, 2023 | 9:17 AM

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ರೋಗಿಯೊಬ್ಬರಿಗೆ ನಗರದ ಫೋರ್ಟಿಸ್ ಆಸ್ಪತ್ರೆ (Fortis Hospital) ವೈದ್ಯರ ತಂಡ ರೋಬೋಟ್ (Robot) ನೆರವಿನಿಂದ 13 ತಿಂಗಳ ಮಗುವಿನ ಮೂತ್ರಪಿಂಡವನ್ನು (Kidney) ಕಸಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಪತ್ರೆಯ ಹಿರಿಯ ನಿರ್ದೇಶಕ (ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ) ಡಾ. ಮೋಹನ್ ಕೇಶವಮೂರ್ತಿ ಅವರು ನಾಲ್ಕು ಗಂಟೆಗಳಲ್ಲಿ ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಕಸಿ ಕಾರ್ಯವಿಧಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ರಕ್ತಹೀನತೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ರಾಘವ್ (ಹೆಸರು ಬದಲಾಯಿಸಲಾಗಿದೆ) ಅವರು ನಿಯಮಿತವಾಗಿ ಡಯಾಲಿಸಿಸ್​ನಿಂದ ಬಳಲುತ್ತಿದ್ದರು. ಹೀಗಾಗಿ ಇವರಿಗೆ ಮೂತ್ರಪಿಂಡ ಕಸಿ ಮಾಡುವ ಅವಶ್ಯಕವಾಗಿತ್ತು. ಇತ್ತ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ ಮಗುವಿನ ಕಿಡ್ನಿ ದಾನ ಮಾಡಲು ಪೋಷಕರು ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಈ ಎರಡು ಪರೀಕ್ಷೆಗಳಿಂದ ನಿಮ್ಮ ಕಿಡ್ನಿಯ ಆರೋಗ್ಯವನ್ನು ತಿಳಿಯಿರಿ

ಅದರಂತೆ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಡಾ ಮೋಹನ್ ಕೇಶವಮೂರ್ತಿ ಅವರು ನಾಲ್ಕು ಗಂಟೆಗಳಲ್ಲಿ ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮೂತ್ರಪಿಂಡ ಕಸಿ ನಡೆಸಿದರು. ಈ ಬಗ್ಗೆ ಸುದ್ದಿಸಂಸ್ಥೆ ಜೊತೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಡಾ. ಮೋಹನ್, ಎರಡೂ ಮೂತ್ರಪಿಂಡಗಳನ್ನು ಒಟ್ಟಿಗೆ ಕಸಿ ಮಾಡುವ ಎನ್-ಬ್ಲಾಕ್ ಪ್ರಕ್ರಿಯೆಯು ಅಪರೂಪವಾಗಿದೆ ಎಂದು ಹೇಳಿದರು.

ಮೂತ್ರಪಿಂಡಗಳ ಬೆಂಚ್ ಶಸ್ತ್ರಚಿಕಿತ್ಸೆಗೆ ಅತ್ಯಂತ ನಿಖರತೆಯ ಅಗತ್ಯವಿರುತ್ತದೆ. ದಾನಿ ಮತ್ತು ಸ್ವೀಕರಿಸುವವರ ರಕ್ತನಾಳಗಳನ್ನು ಮತ್ತು ಮೂತ್ರಪಿಂಡದ ಮೂತ್ರನಾಳಗಳನ್ನು ದಾನಿಯ ಮೂತ್ರಕೋಶಕ್ಕೆ ಸಂಪರ್ಕಿಸಲು ವೈದ್ಯರು ರೋಬೋಟ್‌ ಸಹಾಯ ಪಡೆದಿದ್ದಾರೆ. ದಾನಿಯ ವಯಸ್ಸು ಮುಖ್ಯವಲ್ಲ. ಏಕೆಂದರೆ ಮೂತ್ರಪಿಂಡದ ಕಾರ್ಯವು ರಕ್ತವನ್ನು ಶುದ್ಧೀಕರಿಸುವುದಾಗಿದೆ ಮತ್ತು ವಯಸ್ಕರ ದೇಹದಲ್ಲಿ ಕಸಿ ಮಾಡಿದ ನಂತರ ಅದು ಕಾರ್ಯಕ್ಕೆ ಸರಿಹೊಂದುತ್ತದೆ. ಸುಮಾರು 300 ಪ್ರತಿಶತದಷ್ಟು ವಿಸ್ತರಿಸುತ್ತದೆ ಎಂದು ಡಾ.ಮೋಹನ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು