AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ, ಜಯಪ್ರಕಾಶ್​ ಹೆಗ್ಡೆ ಸ್ಪಷ್ಟನೆ

ರಾಜಕೀಯ ಆರೋಪ ಪ್ರತ್ಯಾರೋಪದ ಕಿಡಿ ಹೊತ್ತಿಸಿರುವ ಜಾತಿ ಗಣತಿ ವರದಿ ಬಿಡುಗಡೆ ವಿರುದ್ಧವೇ ಈಗ ಮೇಲಾಟ ಶುರುವಾಗಿದೆ.‌ ಕಾಂತರಾಜ್ ವರದಿಯನ್ನು ಬೆಂಕಿ ಹಾಕಿ ಸುಡಬೇಕು ಎನ್ನುವ ಹಂತಕ್ಕೆ ಬಿಜೆಪಿ ನಾಯಕ ಈಶ್ವರಪ್ಪ ಹೋಗಿದ್ದಾರೆ. ವರದಿಯನ್ನು ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ‌ ಒತ್ತಡ ಹಾಕಲು ಒಕ್ಕಲಿಗ ಸಮುದಾಯ ಮುಂದಾಗಿದೆ. ಇನ್ನು ಈ ವರದಿ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ.

ನವೆಂಬರ್​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ, ಜಯಪ್ರಕಾಶ್​ ಹೆಗ್ಡೆ ಸ್ಪಷ್ಟನೆ
ಡಾ.ಜಯಪ್ರಕಾಶ್ ಹೆಗ್ಡೆ,
TV9 Web
| Edited By: |

Updated on: Nov 04, 2023 | 1:47 PM

Share

ಬೆಂಗಳೂರು, (ನವೆಂಬರ್ 04): ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿ ಗಣತಿ ವರದಿ(Kantharaj Caste Census Report) ಬಿಡುಗಡೆ ಸಂಬಂಧ ವಿರೋಧ ಹೆಚ್ಚಾಗುತ್ತಿದೆ.‌ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರೋ ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿದೆ. ಇದರ ಬೆನ್ನಲ್ಲೇ ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ ನೀಡಲು ಮುಂದಾಗಿದ್ದಾರೆ. ಇದೇ ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಮೊನ್ನೇ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜಾತಿ ಗಣತಿ ವರದಿ: ಅತ್ತ ಹೈಕಮಾಂಡ್, ಇತ್ತ ಸಮುದಾಯ: ಅಡಕತ್ತರಿಯಲ್ಲಿ ಸಿಲುಕಿದ ಡಿಕೆ ಶಿವಕುಮಾರ್

ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜಾತಿಗಣತಿ ಬಗ್ಗೆ ಬೆಂಕಿಯುಗುಳಿರೋ ಸಚಿವ ಕೆಎಸ್ ಈಶ್ವರಪ್ಪ, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದಾರೆ.

ಇನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ಇಡೀ ದೇಶಕ್ಕೆ ಒಂದು ನೀತಿ ರೂಪಿಸುವತ್ತ ಬಿಜೆಪಿ ಚಿಂತನೆ ನಡೆಸಿದೆ. ಹೀಗಾಗಿ ರಾಜ್ಯದ ಆಯ್ದ ಒಬಿಸಿ ನಾಯಕರನ್ನು ಕೂಡಾ ಸಭೆಗೆ ಆಹ್ವಾನಿಸಿ ರಾಜ್ಯದ ಸ್ಥಿತಿಯ ಬಗ್ಗೆ ಕೂಡಾ ಮಾಹಿತಿ ಪಡೆಯಲಾಗಿದೆ. ಜಾತಿ ಗಣತಿ ವರದಿ ವಿಚಾರವಾಗಿ ಸರ್ಕಾರದಲ್ಲಿ ದ್ವಂದ್ವ ಅಭಿಪ್ರಾಯ ಇದ್ದರೆ ವಿಪಕ್ಷ ಬಿಜೆಪಿ ಮೊದಲು ಸರ್ಕಾರ ತನ್ನ ನಿರ್ಧಾರ ತೆಗೆದುಕೊಳ್ಳಲಿ ಎಂದು ದಾಳ ಉರುಳಿಸಿದೆ.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ