AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿ ವಿರೋಧಿಸುತ್ತಿರುವವರ ವಿರುದ್ಧ ಸಿಡಿದೆದ್ದ ಶೋಷಿತ ಸಮುದಾಯ, ಶಾಮನೂರು ಶಿವಶಂಕರಪ್ಪಗೆ ನೇರ ಸವಾಲ್

ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದಕ್ಕೆ ಲಿಂಗಾಯತ ಹಾಗೂ ವಕ್ಕಲಿಗ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಈ ಜಾತಿಗಣತಿ ವರದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, 10 ವರ್ಷ ಕಸದ ಬುಟ್ಟಿಯಲ್ಲಿದ್ದ ವರದಿಯನ್ನು ಈಗ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಇದಕ್ಕೆ ಕರ್ನಾಟಕ‌ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದ್ದು, ಶಾಮನೂರು ಶಿವಶಂಕರಪ್ಪಗೆ ಅವರಿಗೆ ಸಂಘರ್ಷಕ್ಕೆ ಆಹ್ವಾನಿಸಿದೆ.

ಜಾತಿಗಣತಿ ವರದಿ ವಿರೋಧಿಸುತ್ತಿರುವವರ ವಿರುದ್ಧ ಸಿಡಿದೆದ್ದ ಶೋಷಿತ ಸಮುದಾಯ, ಶಾಮನೂರು ಶಿವಶಂಕರಪ್ಪಗೆ ನೇರ ಸವಾಲ್
ಶಾಮನೂರು ಶಿವಶಂಕರಪ್ಪ
TV9 Web
| Edited By: |

Updated on: Mar 04, 2024 | 4:22 PM

Share

ಬೆಂಗಳೂರು, (ಮಾರ್ಚ್ 04): 10 ವರ್ಷ ಕಸದ ಬುಟ್ಟಿಯಲ್ಲಿದ್ದ ಜಾತಿಗಣತಿ ವರದಿಯನ್ನು ಈಗ ಸಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (shamanur shivashankarappa) ವಿರುದ್ಧ ಕರ್ನಾಟಕ‌ ಶೋಷಿತ ಸಮುದಾಯಗಳ ಮಹಾ ಒಕ್ಕೂಟ(Karnataka backward community castes)  ಸಿಡಿದೆದ್ದಿದೆ. ಅಲ್ಲದೇ ಬನ್ನಿ ಬೀದಿಗಿಳಿದು ಹೋರಾಟ ಮಾಡೋಣ ಎಂದು ಸವಾಲು ಹಾಕಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಕರ್ನಾಟಕ‌ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ರಾಮಚಂದ್ರ, ಅವನೊಬ್ಬ ಶಾಸಕ ಮಾತಾಡಿದ್ದಾನೆ. ಅವನು ವಿಧಾನಸಭೆಯಲ್ಲೇ ಹಿರಿಯ ಶಾಸಕ. ಅವನು ಮಾತಾಡಿದ್ದು ನೋಡಿದ್ದೀರಾ? ಬನ್ನಿ ಬೀದಿಗಿಳಿದು ಹೋರಾಟ ಮಾಡೋಣ, ನಾವು ಸಂಘರ್ಷಕ್ಕೆ ರೆಡಿ ಇದ್ದೇವೆ. ನಾವಾ ನೀವಾ ನೋಡೇ ಬಿಡೋಣ ಎಂದು ಶಾಮನೂರು ಶಿವಶಂಕರಪ್ಪಗೆ ನೇರ ಸವಾಲು ಹಾಕಿದರು.

ನಮಗೆ ಇಷ್ಟು ವರ್ಷ ಮೋಸ ಮಾಡಿಕೊಂಡು ಬಂದಿದ್ದೀರಿ. ಜಾತಿ ಜನಗಣತಿಗೆ ಯಾರು ವಿರೋಧ ಮಾಡುತ್ತಿದ್ದಾರೋ ಅವರು ಇದುವರೆಗೂ ಲೂಟಿ ಮಾಡಿಕೊಂಡೇ ಬಂದಿದ್ದಾರೆ. ನಾಡಿನ ಸಂಪತ್ತನ್ನು ಲೂಟಿ‌ ಮಾಡಿಕೊಂಡೇ ಬಂದಿದ್ದಾರೆ. ರಾಜ್ಯದಲ್ಲಿ ನೇಮಕ ಆದ ಹಿಂದುಳಿದ ಜಾತಿಗಳ ಎಲ್ಲ ವರದಿಯನ್ನು ವಿರೋಧ ಮಾಡಿಕೊಂಡು ಬಂದ ಜನ ಇವರು. ಹಿಂದುಳಿದ ಜಾತಿಗಳಿಗೆ ರೂಪಿಸುವ ಕಾರ್ಯಕ್ರಮಕ್ಕೆ ದ್ರೋಹ ಮಾಡಿ ನಮ್ಮ ತಟ್ಟೆಯ ಅನ್ನ ಕಸಿದುಕೊಂಡು ತಿನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಜಾತಿಗಣತಿ ವರದಿ ಸ್ವೀಕಾರ: ಈ ಬಗ್ಗೆ ತುಮಕೂರು ಸಿದ್ಧಗಂಗಾಶ್ರೀ ಹೇಳಿದ್ದಿಷ್ಟು

ವರದಿಯನ್ನು ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಬಿಡಿ. ಒಂದು ವೇಳೆ ವರದಿ ಶಿಫಾರಸು ಅನುಷ್ಠಾನ ಆಗಿಲ್ಲ ಅಂದ್ರೆ ಬೀದಿ ಹೋರಾಟ ಮಾಡುತ್ತೇವೆ. ಮೂರು ಜಾತಿಗಳು ಒಟ್ಟಾಗಿ ಹೋರಾಟ ಮಾಡುತ್ತೇವೆ. ಆ ಮೂರು ಜಾತಿಗಳ ಜನ ಇರುವುದು ಕೇವಲ 25 ರಿಂದ 30 ಪರ್ಸೆಂಟ್. ನಾವು 70% ಜನರು ಇದ್ದೇವೆ. ನಾಲ್ಕರಿಂದ ಐದು ಕೋಟಿ ಜನ ನಾವಿದ್ದೇವೆ. ಸಿಎಂ ಯಾರೇ ಆಗಿರಲಿ ಸರ್ಕಾರದ ವಿರುದ್ದ ನಾವು ಹೋರಾಟಕ್ಕೆ ರೆಡಿ ಇದ್ದೇವೆ. ನಾವು ಸೌಮ್ಯವಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಅಧಿಕಾರ ಅನುಭವಿಸಿದ ವ್ಯಕ್ತಿ ಏನ್ ಹೇಳಿದಾನೆ. ಅವರು ಹಾಗೇನಾದರೂ ಬಂದಿದ್ದೇ ಆದರೆ ನಾವೂ ಕೈಗೆ ಬಳೆ ತೊಟ್ಟುಕೊಂಡು ಕುಳಿತಿಲ್ಲ. ನಾವು ಸಹ ರೆಡಿ ಇದ್ದೇವೆ ಎಂದು ಎಂದರು.

ಚರ್ಚೆಗೆ ಸಿದ್ಧ ಎಂದ ಜಯಪ್ರಕಾಶ್ ಹೆಗ್ಡೆ

ಮತ್ತೊಂದೆಡೆ ಈ ವರದಿ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿದ್ದು,ರಾಜ್ಯದಲ್ಲಿ 5.98 ಕೋಟಿ ಜನಸಂಖ್ಯೆ ಸಮೀಕ್ಷೆ ನಡೆಸಿ ವರದಿ ಸಲ್ಲಿಕೆಯಾಗಿದೆ. ಶಿಕ್ಷಕರು ಸಂಗ್ರಹಿಸಿದ ದತ್ತಾಂಶದ ಆಧಾರದಲ್ಲಿ ಅಧ್ಯಯನ ನಡೆಸಿ ವರದಿ. ವರದಿ ಬಗ್ಗೆ ಚರ್ಚೆ ಮಾಡಲು ಕರೆದರೆ ನಾನು ಸಿದ್ಧ ಎಂದು ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸರ್ಕಾರ ಒಪ್ಪದೆ ಚರ್ಚೆಮಾಡಿದರೆ ವರದಿ ಬಹಿರಂಗವಾಗಲು ಸಾಧ್ಯವಿಲ್ಲ. 1300ಕ್ಕಿಂತ ಹೆಚ್ಚು ಜಾತಿಗಳಿರುವಾಗ 10 ಹೆಸರು ಮಾತ್ರ ಹೊರಬಂದಿದೆ. ರಾಜ್ಯ ಸರ್ಕಾರ ಅಧಿಕೃತವಾಗಿ ನಿರ್ಧರಿಸಿದ ಮೇಲೆ ಚರ್ಚೆ ಮಾಡೋಣ. ಸರ್ಕಾರ ವರದಿ ಬಿಡುಗಡೆ ಮಾಡದೆ ಯಾವುದೇ ದತ್ತಾಂಶ ಒಪ್ಪುವುದಿಲ್ಲ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ