AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಗಲಗುಂಟೆಯಲ್ಲಿ ಜೂಜಾಡುತ್ತಿದ್ದ 14 ಜನರ ಬಂಧನ; ಕಾರು, 3 ಮೊಬೈಲ್, ಚೆಕ್​​ಗಳು ಜಫ್ತಿ

ದಾಳಿ ವೇಳೆ ಪೊಲೀಸರು 4 ಲಕ್ಷ ರೂಪಾಯಿ ನಗದು, ಕಾರು, 3 ಮೊಬೈಲ್ ಫೋನ್ ಮತ್ತು ಚೆಕ್​ಗಳನ್ನು ಜಪ್ತಿ ಮಾಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Crime News: ಬಾಗಲಗುಂಟೆಯಲ್ಲಿ ಜೂಜಾಡುತ್ತಿದ್ದ 14 ಜನರ ಬಂಧನ; ಕಾರು, 3 ಮೊಬೈಲ್, ಚೆಕ್​​ಗಳು ಜಫ್ತಿ
ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ
TV9 Web
| Updated By: preethi shettigar|

Updated on:Oct 01, 2021 | 10:36 AM

Share

ಬೆಂಗಳೂರು: ಬೃಹತ್ ಮಟ್ಟದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 14 ಜನರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪೀಣ್ಯ 8ನೇ ಮೈಲಿ ಬಳಿಯ ಕೆಂಪೇಗೌಡ ನಗರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂಜು ಅಡ್ಡೆಗೊಸ್ಕರವೇ ಶೆಡ್ ಬಾಡಿಗೆ ಪಡೆದು ಆಡಲಾಗುತ್ತಿತ್ತು. ಅಲ್ಲದೇ ಎಂಟ್ರಿ ಫೀಜ್ 500 ಕೊಟ್ಟರೆ ಮಾತ್ರ ಅಡ್ಡೆಗೆ ಪ್ರವೇಶ ಎಂಬುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ದಾಳಿ ವೇಳೆ ಪೊಲೀಸರು 4 ಲಕ್ಷ ರೂಪಾಯಿ ನಗದು, ಕಾರು, 3 ಮೊಬೈಲ್ ಫೋನ್ ಮತ್ತು ಚೆಕ್​ಗಳನ್ನು ಜಪ್ತಿ ಮಾಡಿದ್ದಾರೆ.

ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸುಭಾಷ್, ಅನಿಸ್, ರಂಗನಾಥ, ಚಂದ್ರಶೇಖರ್ ಸೇರಿದಂತೆ 14 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ನವೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಬಂಧಿತ ವ್ಯಕ್ತಿಯಿಂದ 15 ಲಕ್ಷ ರೂ. ನಗದು, ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ. ನಿನ್ನೆ ನಡೆದ ಹೈದರಾಬಾದ್ ಮತ್ತು ಚೆನ್ನೈ ಪಂದ್ಯಗಳಿಗೆ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಹಿಂದೆ ನಡೆದ ಆರ್​ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯಗಳಿಗೂ ಬೆಟ್ಟಿಂಗ್ ನಡೆಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೈಸೂರು: ನರಸೀಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ ಹಲವು ದಿನಗಳಿಂದ ತಾಲ್ಲೂಕಿನಾದ್ಯಂತ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಮೈಸೂರು ಜಿಲ್ಲೆಯ ನರಸೀಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗೆ ಎಸ್​ಪಿ ಚೇತನ್ ತಂಡ ರಚನೆ ಮಾಡಿದ್ದರು. ನಂಜನಗೂಡು ಡಿವೈಎಸ್​ಪಿ ಗೋವಿಂದರಾಜು, ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಪಿಎಸ್ಐ ಮಂಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಪ್ರಕರಣ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ನರಸೀಪುರ ಪೊಲೀಸ್ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 2 ಟಾಟಾ ಏಸ್ ವಾಹನ, ಒಂದು ಬೈಕ್ ಹಾಗೂ ಪೈಪ್​ಗಳು ವಶಕ್ಕೆ ಪಡೆಯಲಾಗಿದೆ. ನಾಗೇಂದ್ರ, ರಾಜು, ಅಬ್ದುಲ್ಲಾ, ಯಾಸಿರ್, ತಬ್ರೆಷ್ ಬಂಧಿತ ಆರೋಪಿಗಳು.

ಕೊಪ್ಪಳ: ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೋದೂರಿನ ಟೋಲ್ ಪ್ಲಾಜಾ ಬಳಿ ನಡೆದಿದೆ. ಆಹಾರ ಇಲಾಖೆ ನಿರೀಕ್ಷಕ ನಿತಿನ್ ಅಗ್ನಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, 340 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಗಂಗಾವತಿಯಿಂದ ಗುಜರಾತ್​ಗೆ ಹೊರಟಿದ್ದ ಲಾರಿ ವಶಕ್ಕೆ ಪಡೆದಿದ್ದು, ಸುಮಾರು 8.10 ಲಕ್ಷ ರೂಪಾಯಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸದ್ಯ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಚಾಲಕ ಮದನಲಾಲ್​ನನ್ನು ಬಂಧಿಸಲಾಗಿದ್ದು, ಗಂಗಾವತಿಯ ಅಭಿಜಿತ್ ಟ್ರೇಡರ್ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜೂಜು ಅಡ್ಡೆಯಾಗಿರುವ ಮಲೆ ಮಹದೇಶ್ವರ ಬೆಟ್ಟ! ಅಕ್ರಮಕ್ಕೆ ಪೊಲೀಸರೇ ಸಾಥ್ ಕೊಟ್ಟಿರುವ ಶಂಕೆ

ಹಾವೇರಿ: ಜೂಜುಕೋರರ ವಿರುದ್ಧ ಕೇಸ್ ದಾಖಲಿಸದ ಪೊಲೀಸ್ ಸಿಬ್ಬಂದಿ ಅಮಾನತು

Published On - 8:57 am, Fri, 1 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ