AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ಬಿಎಸ್​​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ

ಹಲಸೂರು ಕೆರೆ ಬಳಿ ಬಿಎಸ್​ಪಿ ಸ್ಟೇಟ್ ಜನರಲ್ ಸೆಕ್ರೆಟರಿ ಬೋರ್ಡ್ ಇರುವ ಕಾರು ಪುನೀತ್​ ಎಂಬ ಯುವಕ ಗಾಡಿಗೆ ಡಿಕ್ಕಿ ಹೊಡೆದಿದ್ದು, ಅದನ್ನು ಪ್ರಶ್ನಿಸಿದ ಯುವಕನ ಮೇಲೆ ಮೂವರು ಸೇರಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಪುನೀತ್​ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ಬಿಎಸ್​​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ
ಬಿಎಸ್​ಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 20, 2024 | 6:48 PM

Share

ಬೆಂಗಳೂರು, ಫೆ.20: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ಬೆಳಕಿಗೆ ಬಂದಿದೆ. ಬಹುಜನ ಸಮಾಜವಾದಿ ಪಾರ್ಟಿ(Bahujan Samaj Party) ಮುಖಂಡನಿಂದ ಯುವಕನ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೆಲಸದ‌ ನಿಮ್ಮಿತ್ತ ತೆರಳುತ್ತಿದ್ದ ಪುನೀತ್ ಎಂಬಾತನ ಗಾಡಿಗೆ ಹಲಸೂರು ಕೆರೆ ಬಳಿ ಬಿಎಸ್​ಪಿ ಸ್ಟೇಟ್ ಜನರಲ್ ಸೆಕ್ರೆಟರಿ ಬೋರ್ಡ್ ಇರುವ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರಿನಲ್ಲಿದ್ದವರನ್ನ ಡಿಕ್ಕಿ ಹೊಡೆದ ಬಗ್ಗೆ ಪ್ರಶ್ನೆ ಮಾಡಿದಾಗ, ಕಾರಿನಲ್ಲಿದ್ದ ಮೂವರು ಪುನೀತ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಪುನೀತ್​ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಿಸಿಯೂಟ ವಿಚಾರಕ್ಕೆ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿಸಿದ ಆರೋಪ

ಹುಬ್ಬಳ್ಳಿ: ಬಿಸಿಯೂಟ ವಿಚಾರಕ್ಕೆ ವಿದ್ಯಾರ್ಥಿನಿಗೆ ಶಿಕ್ಷಕಿ ಥಳಿಸಿದ ಆರೋಪ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜುಂಜನಬೈಲ್​​ನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇಳಿಬಂದಿದೆ. ಶಿಕ್ಷಕಿಯೋರ್ವಳು ಕೊಠಡಿಯಲ್ಲಿ ಕೂಡಿ ಹಾಕಿ ಕೋಲಿನಿಂದ ಥಳಿಸಿದ್ದು,ನೋವು ತಾಳಲಾರದೇ ವಿದ್ಯಾರ್ಥಿನಿಯರು ಕ್ಲಾಸ್ ರೂಮ್ ಬಿಟ್ಟು ಹೊರಗೆ ಹೋಗಿದ್ದಾರೆ. ಬಳಿಕ ಶಿಕ್ಷಕಿಯ ನಡೆ ಖಂಡಿಸಿ ಶಾಲೆ ಎದುರು ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಪತ್ನಿಯನ್ನು ಮಾತಾಡಿಸಿದ್ದಕ್ಕೆ ಎದುರು ಮನೆ ಯುವಕನ ಮೇಲೆ ಹಲ್ಲೆ

ಬೈಕಿಗೆ ಬಿಎಂಟಿಸಿ ಬಸ್ ಡಿಕ್ಕಿ; ಬೈಕ್ ಸಂಪೂರ್ಣ ಜಖಂ

ಬೆಂಗಳೂರು: ಬಾಗಲಗುಂಟೆ ಬಳಿಯ ಭೈರವೇಶ್ವರ ಸರ್ಕಲ್​ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸಂಪೂರ್ಣ ಜಖಂ ಆದ ಘಟನೆ ನಡೆದಿದೆ. ಅದೃಷ್ಟವಶಾತ್​ ಬೈಕ್ ಸವಾರ ಜೈಪಾಲ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ ಚಾಲಕ ಉದಯ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿರು ಚಿಕ್ಕಬಾಣಾವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Tue, 20 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ