AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್​ ಆಚರಣೆ: ಬೆಂಗಳೂರಿನ ಕೆಲವು ಕಡೆ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ​

ಬಕ್ರೀದ್​ ಹಬ್ಬ ಹಿನ್ನೆಲೆಯಲ್ಲಿ ಸೋಮವಾರ ಜೂನ್​ 17 ರಂದು ನಗರದ ವಿವಿಧ ಪ್ರದೇಶಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 6 ಗಂಟೆಯಿಂದಲೇ ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿ ಮತ್ತು ಚಾಮರಾಜಪೇಟೆಯ ಬಿಬಿಎಂಪಿ ಆಟದ ಮೈದಾನದಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು. ಇದರಿಂದ ಕೆಲ ಹೊತ್ತು ಟ್ರಾಫಿಕ್​ ಜಾಮ್​ ಉಂಟಾಯಿತು.

ಬಕ್ರೀದ್​ ಆಚರಣೆ: ಬೆಂಗಳೂರಿನ ಕೆಲವು ಕಡೆ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ​
ಬೆಂಗಳೂರು ಟ್ರಾಫಿಕ್​
TV9 Web
| Edited By: |

Updated on:Jun 17, 2024 | 11:44 AM

Share

ಬೆಂಗಳೂರು, ಜೂನ್​​ 17: ಬಕ್ರೀದ್​ (Bakrid) ಹಬ್ಬ ಹಿನ್ನೆಲೆಯಲ್ಲಿ ಸೋಮವಾರ ಜೂನ್​ 17 ರಂದು ನಗರದ ವಿವಿಧ ಪ್ರದೇಶಗಳಲ್ಲಿ ಮುಸ್ಲಿಮರು (Muslim) ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 6 ಗಂಟೆಯಿಂದಲೇ ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿ ಮತ್ತು ಚಾಮರಾಜಪೇಟೆಯ ಬಿಬಿಎಂಪಿ ಆಟದ ಮೈದಾನದಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು. ಹಾಗೆ, ಬನ್ನೇರುಘಟ್ಟ ಮುಖ್ಯ ರಸ್ತೆ ಗುರಪ್ಪನ ಪಾಳ್ಯ ಜಂಕ್ಷನಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು.

ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿಯಲ್ಲಿ ಪ್ರಾರ್ಥನೆಗೆ ನೂರಾರು ಮುಸ್ಲಿಮರು ಆಗಮಿಸಿದ್ದಾರೆ. ಇದರಿಂದ ಮೈಸೂರು ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್​ ಜಾಮ್​ ಉಂಟಾಗಿತ್ತು. ನಾಯಂಡಹಳ್ಳಿಯಿಂದ ಟೌನ್​ಹಾಲ್​​ ವರೆಗೂ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಮೈಸೂರು, ಕೆಂಗೇರಿ, ನಾಯಂಡಹಳ್ಳಿ ಕಡೆಯಿಂದ ವಿಧಾನಸೌಧ, ಕಬ್ಬನ್​ ಪಾರ್ಕ್​​, ಕಡೆ ಬರುವ ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು.

ಈ ಸಂಬಂಧ ಬೆಂಗಳೂರು ಸಂಚಾರಿ ಪೊಲೀಸರು ಈಗಾಗಲೆ ಮಾರ್ಗಬದಲಾವಣೆಯನ್ನು ಸೂಚಿಸಿದ್ದಾರೆ. ಟೌನ್​​ಹಾಲ್​ ಕಡೆಯಿಂದ ಮೈಸೂರು ಅಥವಾ ಮೈಸೂರು ಕಡೆಯಿಂದ ಟೌನ್​ಹಾಲ್​ ಕಡೆಗೆ ಹೋಗುವ ವಾಹನಗಳು ಬಿಜಿಎಸ್​ ಪ್ಲೈಓವರ್​ ಕೆಳ ಸರ್ವಿಸ್​​ ರಸ್ತೆಯನ್ನು ಬಳಸಿಕೊಂಡು ವೆಟರ್ನರಿ ಜಂಕ್ಷನಲ್ಲಿ ಬಲತಿರುವು ಪಡೆದು ಗೂಡ್ಸ್​ ಶೆಡ್​ ರಸ್ತೆ ಮೂಲಕ ಅಥವಾ ಸಿರಸಿ ಜಂಕ್ಷನಲ್ಲಿ ಬಲ ತಿರುವು ಪಡೆದುಕೊಂಡು ಜೆಜೆ ನಗರ-ಟ್ಯಾಂಕ್​ಬಂಡ್​-ಬನ್ನಿಮಿಲ್​ ಜಂಕ್ಷನ್​-ಹುಣಸೇಮರ ಮೂಲಕ ಸಾಗುವಂತೆ ಸೂಚಿಸಲಾಗಿದೆ.

ಇದನ್ನೂ ನೋಡಿ: ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ

ಚಾಮರಾಜಪೇಟೆಯ ಈದ್ಗ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು. ಈ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್​ ಪಾಲ್ಗೊಂಡಿದ್ದರು. ಇದರಿಂದ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಹೀಗಾಗಿ, ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್​ ಕಡೆಗೆ ಹೋಗುವವರೆಗೆ ತೊಂದರೆ ಉಂಟಾಯಿತು. ಪೊಲೀಸರು ಮಾರ್ಗ ಬದಲಾವಣೆ ಸೂಚಿಸಿದ್ದರೂ, ಕೆಲ ಕಾಲ ಟ್ರಾಫಿಕ್​​ ಜಾಮ್​ ಉಂಟಾಯಿತು. ಮಾರ್ಗ ಬದಲಾವಣೆ ತಿಳಿಯದ ಕೆಲ ಸವಾರರು ಇದೇ ಮಾರ್ಗದಲ್ಲಿ ಬಂದು ಫಜೀತಿ ಅನುಭವಿಸುವಂತಾಯಿತು.

ಬನ್ನೇರುಘಟ್ಟ ಮುಖ್ಯ ರಸ್ತೆ ಗುರಪ್ಪನಪಾಳ್ಯ ಜಂಕ್ಷನಲ್ಲಿ ಮುಸ್ಲಿಮರು ಪಾರ್ಥನೆ ಸಲ್ಲಿಸಿದರು. ಇದರಿಂದ ಆನೇಕಲ್​​, ಡೈರಿ ಜಂಕ್ಷನ್​ ಕಡೆ ಸಂಚರಿಸುವ ವಾಹನ ಸವಾರರು ಪರದಾಡುವಂತಾಯಿತು. ಮಾರ್ಗ ಬದಲಾವಣೆಯನ್ನು ತಿಳಿಯದೆ ಸವಾರರು ಈ ಮಾರ್ಗದಲ್ಲಿ ಬಂದಿದ್ದರಿಂದ ಕೆಲ ಕಾಲ ಟ್ರಾಫಿಕ್​ ಜಾಮ್​ ಉಂಟಾಯಿತು. ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗ ಬದಲಾವಣೆನ್ನು ತಿಳಿಸಿದ್ದರು. ಇನ್ನು ಉಳಿದಂತೆ ನಗರಕ್ಕೆ ಪ್ರವೇಶಿಸುವ ವಿವಿಧ ಮಾರ್ಗಗಳಲ್ಲಿ ಯಾವುದೆ ಸಂಚಾರ ದಟ್ಟಣೆ ಉಂಟಾಗಿಲ್ಲ ಎಂದು ಸಂಚಾರಿ ಪೊಲೀಸ್​ ಹಿರಿಯ ಅಧಿಕಾರಿಗಳು ತಿಳಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Mon, 17 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್