AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್​ ಆಚರಣೆ: ಬೆಂಗಳೂರಿನ ಕೆಲವು ಕಡೆ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ​

ಬಕ್ರೀದ್​ ಹಬ್ಬ ಹಿನ್ನೆಲೆಯಲ್ಲಿ ಸೋಮವಾರ ಜೂನ್​ 17 ರಂದು ನಗರದ ವಿವಿಧ ಪ್ರದೇಶಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 6 ಗಂಟೆಯಿಂದಲೇ ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿ ಮತ್ತು ಚಾಮರಾಜಪೇಟೆಯ ಬಿಬಿಎಂಪಿ ಆಟದ ಮೈದಾನದಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು. ಇದರಿಂದ ಕೆಲ ಹೊತ್ತು ಟ್ರಾಫಿಕ್​ ಜಾಮ್​ ಉಂಟಾಯಿತು.

ಬಕ್ರೀದ್​ ಆಚರಣೆ: ಬೆಂಗಳೂರಿನ ಕೆಲವು ಕಡೆ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ​
ಬೆಂಗಳೂರು ಟ್ರಾಫಿಕ್​
TV9 Web
| Edited By: ವಿವೇಕ ಬಿರಾದಾರ|

Updated on:Jun 17, 2024 | 11:44 AM

Share

ಬೆಂಗಳೂರು, ಜೂನ್​​ 17: ಬಕ್ರೀದ್​ (Bakrid) ಹಬ್ಬ ಹಿನ್ನೆಲೆಯಲ್ಲಿ ಸೋಮವಾರ ಜೂನ್​ 17 ರಂದು ನಗರದ ವಿವಿಧ ಪ್ರದೇಶಗಳಲ್ಲಿ ಮುಸ್ಲಿಮರು (Muslim) ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆ 6 ಗಂಟೆಯಿಂದಲೇ ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿ ಮತ್ತು ಚಾಮರಾಜಪೇಟೆಯ ಬಿಬಿಎಂಪಿ ಆಟದ ಮೈದಾನದಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು. ಹಾಗೆ, ಬನ್ನೇರುಘಟ್ಟ ಮುಖ್ಯ ರಸ್ತೆ ಗುರಪ್ಪನ ಪಾಳ್ಯ ಜಂಕ್ಷನಲ್ಲಿ ಸಾಮೂಹಿಕ ಪಾರ್ಥನೆ ಸಲ್ಲಿಸಿದರು.

ಮೈಸೂರು ರಸ್ತೆಯ ಬಿಬಿ ಜಂಕ್ಷನ್​ ಬಳಿಯಿರುವ ಮಸೀದಿಯಲ್ಲಿ ಪ್ರಾರ್ಥನೆಗೆ ನೂರಾರು ಮುಸ್ಲಿಮರು ಆಗಮಿಸಿದ್ದಾರೆ. ಇದರಿಂದ ಮೈಸೂರು ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್​ ಜಾಮ್​ ಉಂಟಾಗಿತ್ತು. ನಾಯಂಡಹಳ್ಳಿಯಿಂದ ಟೌನ್​ಹಾಲ್​​ ವರೆಗೂ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಮೈಸೂರು, ಕೆಂಗೇರಿ, ನಾಯಂಡಹಳ್ಳಿ ಕಡೆಯಿಂದ ವಿಧಾನಸೌಧ, ಕಬ್ಬನ್​ ಪಾರ್ಕ್​​, ಕಡೆ ಬರುವ ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು.

ಈ ಸಂಬಂಧ ಬೆಂಗಳೂರು ಸಂಚಾರಿ ಪೊಲೀಸರು ಈಗಾಗಲೆ ಮಾರ್ಗಬದಲಾವಣೆಯನ್ನು ಸೂಚಿಸಿದ್ದಾರೆ. ಟೌನ್​​ಹಾಲ್​ ಕಡೆಯಿಂದ ಮೈಸೂರು ಅಥವಾ ಮೈಸೂರು ಕಡೆಯಿಂದ ಟೌನ್​ಹಾಲ್​ ಕಡೆಗೆ ಹೋಗುವ ವಾಹನಗಳು ಬಿಜಿಎಸ್​ ಪ್ಲೈಓವರ್​ ಕೆಳ ಸರ್ವಿಸ್​​ ರಸ್ತೆಯನ್ನು ಬಳಸಿಕೊಂಡು ವೆಟರ್ನರಿ ಜಂಕ್ಷನಲ್ಲಿ ಬಲತಿರುವು ಪಡೆದು ಗೂಡ್ಸ್​ ಶೆಡ್​ ರಸ್ತೆ ಮೂಲಕ ಅಥವಾ ಸಿರಸಿ ಜಂಕ್ಷನಲ್ಲಿ ಬಲ ತಿರುವು ಪಡೆದುಕೊಂಡು ಜೆಜೆ ನಗರ-ಟ್ಯಾಂಕ್​ಬಂಡ್​-ಬನ್ನಿಮಿಲ್​ ಜಂಕ್ಷನ್​-ಹುಣಸೇಮರ ಮೂಲಕ ಸಾಗುವಂತೆ ಸೂಚಿಸಲಾಗಿದೆ.

ಇದನ್ನೂ ನೋಡಿ: ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ

ಚಾಮರಾಜಪೇಟೆಯ ಈದ್ಗ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು. ಈ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್​ ಪಾಲ್ಗೊಂಡಿದ್ದರು. ಇದರಿಂದ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಹೀಗಾಗಿ, ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್​ ಕಡೆಗೆ ಹೋಗುವವರೆಗೆ ತೊಂದರೆ ಉಂಟಾಯಿತು. ಪೊಲೀಸರು ಮಾರ್ಗ ಬದಲಾವಣೆ ಸೂಚಿಸಿದ್ದರೂ, ಕೆಲ ಕಾಲ ಟ್ರಾಫಿಕ್​​ ಜಾಮ್​ ಉಂಟಾಯಿತು. ಮಾರ್ಗ ಬದಲಾವಣೆ ತಿಳಿಯದ ಕೆಲ ಸವಾರರು ಇದೇ ಮಾರ್ಗದಲ್ಲಿ ಬಂದು ಫಜೀತಿ ಅನುಭವಿಸುವಂತಾಯಿತು.

ಬನ್ನೇರುಘಟ್ಟ ಮುಖ್ಯ ರಸ್ತೆ ಗುರಪ್ಪನಪಾಳ್ಯ ಜಂಕ್ಷನಲ್ಲಿ ಮುಸ್ಲಿಮರು ಪಾರ್ಥನೆ ಸಲ್ಲಿಸಿದರು. ಇದರಿಂದ ಆನೇಕಲ್​​, ಡೈರಿ ಜಂಕ್ಷನ್​ ಕಡೆ ಸಂಚರಿಸುವ ವಾಹನ ಸವಾರರು ಪರದಾಡುವಂತಾಯಿತು. ಮಾರ್ಗ ಬದಲಾವಣೆಯನ್ನು ತಿಳಿಯದೆ ಸವಾರರು ಈ ಮಾರ್ಗದಲ್ಲಿ ಬಂದಿದ್ದರಿಂದ ಕೆಲ ಕಾಲ ಟ್ರಾಫಿಕ್​ ಜಾಮ್​ ಉಂಟಾಯಿತು. ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗ ಬದಲಾವಣೆನ್ನು ತಿಳಿಸಿದ್ದರು. ಇನ್ನು ಉಳಿದಂತೆ ನಗರಕ್ಕೆ ಪ್ರವೇಶಿಸುವ ವಿವಿಧ ಮಾರ್ಗಗಳಲ್ಲಿ ಯಾವುದೆ ಸಂಚಾರ ದಟ್ಟಣೆ ಉಂಟಾಗಿಲ್ಲ ಎಂದು ಸಂಚಾರಿ ಪೊಲೀಸ್​ ಹಿರಿಯ ಅಧಿಕಾರಿಗಳು ತಿಳಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Mon, 17 June 24

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ