ಬಾಲಸೋರ್ ರೈಲು ಅಪಘಾತ: ಜನರಲ್ ಮ್ಯಾನೇಜರ್ IRTS ಅಧಿಕಾರಿ ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ

Balasore train accident: ಭೀಕರ ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದ್ದು, ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಅರ್ಚನಾ ಭಾರತೀಯ ರೈಲ್ವೆ ಸಂಚಾರ ಸೇವೆ ಅಧಿಕಾರಿ.

ಬಾಲಸೋರ್ ರೈಲು ಅಪಘಾತ: ಜನರಲ್ ಮ್ಯಾನೇಜರ್ IRTS ಅಧಿಕಾರಿ ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ
GM ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ
Follow us
|

Updated on:Jul 01, 2023 | 10:04 AM

ಭುವನೇಶ್ವರ/ಬೆಂಗಳೂರು ವರದಿ: ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು (Archana Joshi -General Manager, South Eastern Railway) ಹುದ್ದೆಯಿಂದ ತೆಗೆದುಹಾಕಲಾಗಿದೆ. ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನಿಲ್ ಕುಮಾರ್ ಮಿಶ್ರಾ ಅವರಿಗೆ ಆಗ್ನೇಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಲಾಗಿದೆ. ಅರ್ಚನಾ ಅವರು 1985-ಬ್ಯಾಚ್ ಭಾರತೀಯ ರೈಲ್ವೆ ಸಂಚಾರ ಸೇವೆ (Indian Railway Traffic Service -IRTS) ಅಧಿಕಾರಿ. ಜುಲೈ 30, 2021 ರಂದು ಆಗ್ನೇಯ ರೈಲ್ವೆ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಭಾರತೀಯ ರೈಲ್ವೇ ತನ್ನ ಅಧಿಕೃತ ಹೇಳಿಕೆಯಲ್ಲಿ, “ಬಾಲಾಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚಮಾ ಜೋಶಿ ಅವರು ತಮ್ಮ ಹುದ್ದೆಯಿಂದ ವಜಾಗೊಳಿಸಿದ್ದಾರೆ. ಆಗ್ನೇಯ ರೈಲ್ವೆಯ ಸುದ್ದಿ ಪ್ರಧಾನ ವ್ಯವಸ್ಥಾಪಕರಾಗಲು ಅನಿಲ್ ಕುಮಾರ್ ಮಿಶ್ರಾ ಅವರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.” ಎಂದು ಕಳಿಂಗ ಟಿವಿ ವರದಿ ಮಾಡಿದೆ.

GM ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ

ಬೆಂಗಳೂರು ವರದಿ: ಒಡಿಶಾದ ಬಾಹಾನಗಾ ರೈಲು ದುರಂತದ ಹಿನ್ನೆಲೆ ಯಲ್ಲಿ ಆಗ್ನೇಯ ರೈಲ್ವೆ ಮಹಾ ಪ್ರಬಂಧಕರಾದ ಅರ್ಚನಾ ಜೋಶಿ ಅವರನ್ನು ಬೆಂಗಳೂರಿನ ಯಲಹಂಕದಲ್ಲಿರುವ ರೈಲ್ವೆ ಗಾಲಿ ಹಾಗೂ ಅಚ್ಚು ಕಾರ್ಖಾನೆಗೆ (Yelahanka Wheel and Axle Plant) ಎತ್ತಂಗಡಿ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರೈಲ್ವೆ ಇಲಾಖೆ ಈನ ಸಂಬಂಧ ಶುಕ್ರವಾರ ತಡರಾತ್ರಿ ಆದೇಶ ಹೊರಡಿಸಿದೆ. ಇದರೊಂದಿಗೆ ದುರಂತದ ಬಳಿಕ ಒಟ್ಟು 6 ವಲಯ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದಂತಾಗಿದೆ. ಈಗ 6ನೇಯವರಾಗಿ ಆರ್ಚನಾ ಎತ್ತಂಗಡಿ ಆಗಿದ್ದಾರೆ.

ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತದ ನಂತರ ಸಿಬ್ಬಂದಿ ಪರಾರಿಯಾಗಿರುವ ವರದಿಗಳನ್ನು ತಳ್ಳಿ ಹಾಕಿದ ರೈಲ್ವೇ ಅಧಿಕಾರಿ

ಸಿಗ್ನಲಿಂಗ್ ದೋಷದಿಂದಾಗಿ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗದಲ್ಲಿ ಸಾಗದೇ ಪಕ್ಕದ ಮಾರ್ಗದಲ್ಲಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 3ನೇ ಮಾರ್ಗದ ಮೇಲೆ ಹೋಗಿ ಬಿದ್ದಿತ್ತು. ಆಗ ಆ ಮಾರ್ಗದಲ್ಲಿ ಬಂದ ಬೆಂಗಳೂರು-ಹೌರಾ ರೈಲು, ಕೋರಮಂಡಲದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು. ಈ ಸಿಗ್ನಲಿಂಗ್ ದೋಷವು ಸಿಬ್ಬಂದಿ ನಿರ್ಲಕ್ಷ್ಯದಿಂದ ಆಗಿದ್ದು ಎಂಬ ಆರೋಪವಿದ್ದು, ಸಿಬಿಐ ತನಿಖೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 1 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ