AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್‌ ಅಂಗಸಂಸ್ಥೆಯಾದ ಬಮೂಲ್​ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಉಡುಗೊರೆ ಸಿಕ್ಕಿದೆ.

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್
ಬಮೂಲ್Image Credit source: google
Shivaraj
| Edited By: |

Updated on: Mar 12, 2026 | 2:57 PM

Share

ಬೆಂಗಳೂರು, ಮಾರ್ಚ್​​ 12: ಬೆಂಗಳೂರು ಸಹಕಾರ ಹಾಲು ಒಕ್ಕೂಟ (BAMUL) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿದೆ. ಸರ್ಕಾರದಿಂದಲೂ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಬಮೂಲ್​ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವವರಿಗೆ ಇದು ಲಭ್ಯವಾಗಲಿದೆ.

ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್​​ ಪ್ರತಿಕ್ರಿಯಿಸಿದ್ದು, ಯಾವುದೇ ತಾರತಮ್ಯ ಇಲ್ಲದೆ ಬಮೂಲ್​ನಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರಾಜ್ಯ ಸರ್ಕಾರವೂ 5 ರೂಪಾಯಿ ಪ್ರೋತ್ಸಾಹ ಧನ ಕೊಡುತ್ತಿದೆ. ರೈತರಿಂದ 59,39,78,492 ಲೀಟರ್​ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಕಾರ್ಮಿಕರಿಗೆ ಸುಮಾರು 6 ಕೋಟಿ ರೂಪಾಯಿ ಡಿಎ ಕೊಡಬೇಕು. ನಾವೂ ಸುಮಾರು 60 ಕೋಟಿ ರೂ ಲಾಭ ಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5 ಸಾವಿರ ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದಾರೆ.

ಮಾರುಕಟ್ಟೆ ಸೋರಿಕೆ ತಡೆದಿದ್ದೇವೆ. ತುಪ್ಪದ ಬೆಲೆ ಜಾಸ್ತಿ ಮಾಡಿದ್ದೇವೆ. ಚೀಸ್ ಜಾಸ್ತಿ ಮಾರಾಟವಾಗುತ್ತಿದೆ. ಗುಣಮಟ್ಟ ಇದೆ. ಡೆಲ್ಲಿ ಮದರ್ ಡೈರಿಗೆ 2 ಲಕ್ಷ ಕೊಡುತ್ತಿದ್ದೇವೆ. ದುಂದು ವೆಚ್ಚ ಕಡಿಮೆ ಮಾಡಿದ್ದೇವೆ. ಸಿಬ್ಬಂದಿ ಮತ್ತು ಮಾರುಕಟ್ಟೆ ಸುಧಾರಣೆ ಮಾಡಲಾಗಿದ್ದು, ಈ ಎಲ್ಲಾ ಕೆಲವು ಕಾರಣಗಳಿಂದ ಲಾಭ ಹೆಚ್ಚಾಗಿದೆ ಎಂದಿದ್ದಾರೆ.

ಸರ್ಕಾರಕ್ಕೆ ಮನವಿ

ಇನ್ನು ಕ್ಷೀರ ಭಾಗ್ಯಕ್ಕೆ 75 ಸಾವಿರ ಲೀಟರ್ ಪೌಡರ್ ಆಗಿ ಕನ್ವರ್ಟ್ ಮಾಡಿ ಕೊಡುತ್ತಿದ್ದೇವೆ. ರಾಗಿ ಮಾಲ್ಟ್ ಜೊತೆ ಹಾಲು ಮಿಕ್ಸ್ ಮಾಡಿ ಕೂಡ ನಾವೂ ಕೊಡಲು ಸಿದ್ಧ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!