AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam: ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ; ‘NEET ಬೇಡ, ನಮ್ಮ CET ಬೇಕು’ ಸಹಿ ಅಭಿಯಾನ!

ನೀಟ್ ಪರೀಕ್ಷೆಯ ಸರಣಿ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕರ್ನಾಟಕದಲ್ಲಿ 'NEET ಬೇಡ, K-CET ಬೇಕು' ಸಹಿ ಅಭಿಯಾನ ತೀವ್ರಗೊಂಡಿದೆ. ಚಿತ್ರ ಸಾಹಿತಿ ಕವಿರಾಜ್ ನೇತೃತ್ವದಲ್ಲಿ ಒಂದೇ ದಿನದಲ್ಲಿ 2000ಕ್ಕೂ ಹೆಚ್ಚು ಸಹಿ ಸಂಗ್ರಹವಾಗಿದ್ದು, ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ ಮೂಲಕವೇ ವೈದ್ಯಕೀಯ ಸೀಟು ಹಂಚಿಕೆ ನಡೆಸಬೇಕೆಂದು ಸಾಹಿತಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.

NEET Exam: ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆಗೆ ಆಗ್ರಹ; 'NEET ಬೇಡ, ನಮ್ಮ CET ಬೇಕು' ಸಹಿ ಅಭಿಯಾನ!
NEET ಬೇಡ, ನಮ್ಮ CET ಬೇಕು' ಸಹಿ ಅಭಿಯಾನ!
Vinay Kashappanavar
| Edited By: |

Updated on:Jul 26, 2026 | 12:23 PM

Share

ಮುಖ್ಯಾಂಶಗಳು

  • ನೀಟ್ ರದ್ದುಗೊಳಿಸಿ ಕೆಇಎ ಸಿಇಟಿ ಮರುಸ್ಥಾಪಿಸಲು ಬೃಹತ್ ಸಹಿ ಅಭಿಯಾನ.
  • ಕವಿರಾಜ್ ನೇತೃತ್ವದಲ್ಲಿ ಒಂದೇ ದಿನದಲ್ಲಿ ಎರಡು ಸಾವಿರಕ್ಕೂ ಅಧಿಕ ಸಹಿ.
  • ಬಡ, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳ ಹಿತರಕ್ಷಣೆಗೆ ಸಿಇಟಿ ನಡೆಸಲು ಆಗ್ರಹ.

ಬೆಂಗಳೂರು, ಜುಲೈ 26: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನೀಟ್ ವಿರುದ್ಧದ ಆಕ್ರೋಶ ಮತ್ತಷ್ಟು ಜೋರಾಗಿದ್ದು, ‘ನಮಗೆ NEET ಬೇಡ, ನಮ್ಮ K-CET ಬೇಕು’ ಎಂಬ ಹೊಸ ಸಹಿ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.

ಕವಿರಾಜ್ ನೇತೃತ್ವದಲ್ಲಿ ಬೃಹತ್ ಸಹಿ ಅಭಿಯಾನ

ಚಿತ್ರ ಸಾಹಿತಿ ಕವಿರಾಜ್ ಅವರ ನೇತೃತ್ವದಲ್ಲಿ ನಾಡಿನ ಸಾಹಿತಿಗಳು, ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ಪೋಷಕರು ಒಂದಾಗಿ ಈ ಸೈನ್ ಪಿಟಿಷನ್ (Sign Petition) ಅಭಿಯಾನವನ್ನು ಕೈಗೆತ್ತಿಕೊಂಡಿದ್ದಾರೆ. ಅಭಿಯಾನ ಶುರುವಾದ ಕೇವಲ ಒಂದೇ ದಿನದಲ್ಲಿ 2,000ಕ್ಕೂ ಅಧಿಕ ಜನರು ಸಹಿ ಸಂಗ್ರಹಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ವೈದ್ಯಕೀಯ ಸೀಟುಗಳ ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಿಇಟಿ ಪರೀಕ್ಷೆಯನ್ನೇ ಆಧಾರವಾಗಿಟ್ಟುಕೊಳ್ಳಬೇಕು ಎಂಬುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

KEA ಮಾದರಿಯೇ ಬೆಸ್ಟ್: ಸಿಇಟಿಗೆ ಪಟ್ಟು

ಎಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಯಶಸ್ವಿಯಾಗಿ ಹಾಗೂ ಪಾರದರ್ಶಕವಾಗಿ ನಡೆಸುತ್ತಿರುವ ಕರ್ನಾಟಕ ಸಿಇಟಿ ಮಾಡಲ್ ಇಡೀ ದೇಶಕ್ಕೇ ಬೆಸ್ಟ್ ಮಾಡಲ್ ಆಗಿದೆ. ಹೀಗಾಗಿ, ಕಷ್ಟಪಟ್ಟು ಓದುವ ರಾಜ್ಯದ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಠಕವಾಗುತ್ತಿರುವ ಕೇಂದ್ರದ ನೀಟ್ ವ್ಯವಸ್ಥೆಯನ್ನು ರದ್ದುಗೊಳಿಸಿ, ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕೆಇಎ ಮೂಲಕವೇ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಬೇಕೆಂದು ರಾಜ್ಯಾದ್ಯಂತ ಆಗ್ರಹ ವ್ಯಕ್ತವಾಗುತ್ತಿದೆ.

ವೈದ್ಯಕೀಯ ಪ್ರವೇಶಕ್ಕೆ ನೀಟ್ ಏಕೆ ರದ್ದಾಗಬೇಕು?

  • ರಾಜ್ಯ ಪಠ್ಯಕ್ರಮಕ್ಕೆ ಅನ್ಯಾಯ: ಶೇ 90ರಷ್ಟು ಸ್ಥಳೀಯ ವಿದ್ಯಾರ್ಥಿಗಳು ರಾಜ್ಯ ಪಠ್ಯಕ್ರಮದಲ್ಲಿದ್ದು, NEET ಸಂಪೂರ್ಣವಾಗಿ CBSE/NCERT ಆಧಾರಿತವಾಗಿದೆ.
  • ಕೋಚಿಂಗ್ ದಂಧೆ: ದುಬಾರಿ ಕೋಚಿಂಗ್ ಜಾಲದಿಂದ ಬಡ, ಗ್ರಾಮೀಣ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳು ಕೈಗೆಟುಕುತ್ತಿಲ್ಲ.
  • ಅಕ್ರಮ ಹಾಗೂ ಕೇಂದ್ರೀಕೃತ ಲೋಪ: ಪ್ರಶ್ನೆಪತ್ರಿಕೆ ಸೋರಿಕೆ, ನಕಲಿ ದಾಖಲೆ ಮತ್ತು ED ಆರೋಪಗಳು ಕೇಂದ್ರೀಕೃತ ವ್ಯವಸ್ಥೆಯ ಪಾರದರ್ಶಕತೆಯನ್ನು ಪ್ರಶ್ನಿಸುವಂತೆ ಮಾಡಿದ್ದು, ವಿದ್ಯಾರ್ಥಿಗಳನ್ನು ಹತಾಶೆಗೆ ದೂಡಿದೆ.
  • ಸ್ಥಳೀಯರಿಗೆ ಸೀಟು ಕೊರತೆ: ದೇಶವ್ಯಾಪಿ ಪೈಪೋಟಿಯಿಂದ ಕರ್ನಾಟಕದ ಮಕ್ಕಳಿಗೆ ಕೈಗೆಟಕುವ ಶುಲ್ಕದ ಸೀಟುಗಳು ಸಿಗುತ್ತಿಲ್ಲ. ಜತೆಗೆ, ಕನ್ನಡ ಬಾರದ ವೈದ್ಯರಿಂದ ಗ್ರಾಮೀಣ ಆರೋಗ್ಯ ಸೇವೆಗೂ ಧಕ್ಕೆಯಾಗುತ್ತಿದೆ.

ಪ್ರಮುಖ ಬೇಡಿಕೆಗಳೇನು?

ದೇಶಾದ್ಯಂತ ಕಡ್ಡಾಯಗೊಳಿಸಿರುವ NEET ಅನ್ನು ತಕ್ಷಣವೇ ರದ್ದುಗೊಳಿಸಬೇಕು. ವೈದ್ಯಕೀಯ ಪ್ರವೇಶಾತಿ ಹಕ್ಕನ್ನು ರಾಜ್ಯಗಳಿಗೆ ಮರಳಿಸಿ, ಕರ್ನಾಟಕದಲ್ಲಿ KEA-CET ಮರುಸ್ಥಾಪಿಸಬೇಕು. ಶಿಕ್ಷಣವನ್ನು ಸಂಪೂರ್ಣವಾಗಿ ರಾಜ್ಯ ಪಟ್ಟಿಗೆ ಮರಳಿ ತರಬೇಕು ಮತ್ತು ಕೇಂದ್ರದ ಪಾತ್ರವನ್ನು ಕೇವಲ ಗುಣಮಟ್ಟದ ನಿಯಮ ರೂಪಿಸುವುದಕ್ಕೆ ಸೀಮಿತಗೊಳಿಸಬೇಕು ಎಂಬುದೆ ಅಭಿಯಾನದ ಹಿಂದಿನ ಪ್ರಮುಖ ಬೇಡಿಕೆಗಳಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Sun, 26 July 26

Follow Us
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!