AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೂ ಕಾಲಿಟ್ಟ ಚಿರತೆ: ಈ ಏರಿಯಾಕ್ಕೆ ಹೋಗಲು ಕ್ಯಾಬ್, ಆಟೋ, ಡೆಲಿವರಿ ಬಾಯ್ಸ್ ಹಿಂದೇಟು!

ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆಗಳು ಕಾಣಿಸಿಕೊಂಡು ನಿವಾಸಿಗಳು ಆತಂಕಗೊಂಡಿದ್ದಾರೆ. ಮೂರು ತಿಂಗಳಿಂದ ಹತ್ತುಕ್ಕೂ ಹೆಚ್ಚು ಪಶುಗಳನ್ನು ಚಿರತೆಗಳು ಕೊಂದಿವೆ. ಡೆಲಿವರಿ ಸೇವೆಗಳು ಸ್ಥಗಿತಗೊಂಡಿವೆ ಮತ್ತು ನೀರಿನ ಸಮಸ್ಯೆಯೂ ಎದುರಾಗಿದೆ. ಕೂಡಲೇ ಚಿರತೆಗಳನ್ನು ಸೆರೆಹಿಡಿಯುವಂತೆ ನಿವಾಸಿಗಳು ಒತ್ತಾಯಿಸುತ್ತಿದ್ದಾರೆ.

ಬೆಂಗಳೂರಿಗೂ ಕಾಲಿಟ್ಟ ಚಿರತೆ: ಈ ಏರಿಯಾಕ್ಕೆ ಹೋಗಲು ಕ್ಯಾಬ್, ಆಟೋ, ಡೆಲಿವರಿ ಬಾಯ್ಸ್ ಹಿಂದೇಟು!
ಬೆಂಗಳೂರಿಗೂ ಕಾಲಿಟ್ಟ ಚಿರತೆ: ಈ ಏರಿಯಾಕ್ಕೆ ಹೋಗಲು ಕ್ಯಾಬ್, ಆಟೋ, ಡೆಲಿವರಿ ಬಾಯ್ಸ್ ಹಿಂದೇಟು!
ಕಿರಣ್​ ಸೂರ್ಯ
| Edited By: |

Updated on: Jan 12, 2025 | 4:16 PM

Share

ಬೆಂಗಳೂರು, ಜನವರಿ 12: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಚಿರತೆ (leopard) ಪ್ರತ್ಯಕ್ಷವಾಗಿ ಈಗಾಗಲೇ ಸಾಕಷ್ಟು ಭಯ ಹುಟ್ಟಿಸಿದೆ. ಎಷ್ಟೇ ಹುಡುಕಾಡಿದರೂ ಚಿರತೆ ಮಾತ್ರ ಪತ್ತೆ ಆಗುತ್ತಿಲ್ಲ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. ಡೆಲಿವರಿ ಬಾಯ್ಸ್ ಯಾವುದೇ ವಸ್ತುಗಳನ್ನು ಸಪ್ಲೈ ಮಾಡುತ್ತಿಲ್ಲ.

ಇದನ್ನೂ ಓದಿ: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಇಂದೂ ಪತ್ತೆಯಾಗದ ಚಿರತೆ; 12 ತಂಡಗಳಿಂದ ಕಾರ್ಯಾಚರಣೆ

ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್‌ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.

ಇನ್ನು ನಿವಾಸಿಯೊಬ್ಬರು ಈ ಬಗ್ಗೆ ಸೊಶೀಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಮ್ಮ ಅಪಾರ್ಟ್‌ಮೆಂಟ್‌ನ ಪಕ್ಕದಲ್ಲಿರುವ ತುರಹಳ್ಳಿ ಅರಣ್ಯದೊಳಗಿನ ಬಂಡೆಯೊಂದರ ಮೇಲೆ ಚಿರತೆ ಮಲಗಿಕೊಂಡಿರುವುದು ಕಂಡುಬಂತು. ಸಂಜೆ 5.30ರ ಸುಮಾರಿಗೆ ತಮ್ಮ ಅಪಾರ್ಟ್‌ಮೆಂಟ್‌ ಬಾಲ್ಕನಿಯಿಂದ ನೋಡಿರುವುದಾಗಿ ಹೇಳಿದ್ದಾರೆ.

ಕೋಲಾರದಲ್ಲಿ ಕೂಡ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ

ಇನ್ನು ಕೋಲಾರದಲ್ಲಿ ಕೂಡ ಚಿರತೆ ಪ್ರತ್ಯಕ್ಷವಾಗಿದ್ದು, ಜನರು ಭಯಭೀತರಾಗಿದ್ದಾರೆ. ಕೋಲಾರ ತಾಲ್ಲೂಕಿನ ಬುಸನಹಳ್ಳಿ ಗ್ರಾಮದ ಸಮೀಪ ರಸ್ತೆ ದಾಟುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ. ಚಿರತೆ ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಇದನ್ನೂ ಓದಿ: Viral: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌

ಗ್ರಾಮಸ್ಥರಿಂದ ಕೋಲಾರ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕಳೆದ ವಾರ ಅಂತರಗಂಗೆ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಮತ್ತೊಮ್ಮೆ ಚಿರತೆ ಕಂಡು ಗ್ರಾಮಸ್ಥರಿಗೆ ಭೀತಿ ಎದುರಾಗಿದೆ. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ