ಬೆಂಗಳೂರು: ರಕ್ತಪಾತ ತಡೆದ ಬಾಣಸವಾಡಿ ಪೊಲೀಸರು, ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

ರೌಡಿಶೀಟರ್ ಗಳ ಮತ್ಸರಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಗ್ಗಾಗೆ ಗುಂಡಿನ ಶಬ್ದ ಕೇಳಿಸುತ್ತಿರುತ್ತದೆ. ಅದರಂತೆ ಗುಂಡಿಕ್ಕಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಾಣಸವಡಿ ಠಾಣಾ ಪೊಲೀಸರು ಭೀಕರ ರಕ್ತಪಾತವನ್ನು ತಪ್ಪಿಸಿದ್ದಾರೆ. ಒಂದು ತಿಂಗಳಿಂದ ಹತ್ಯೆಗೆ ಸಂಚು ಮಾಡಿ ಆರೋಪಿಗಳು ಓಡಾಟ ನಡೆಸುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರು: ರಕ್ತಪಾತ ತಡೆದ ಬಾಣಸವಾಡಿ ಪೊಲೀಸರು, ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ
ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಬಂಧಿಸಿದ ಬೆಂಗಳೂರು ನಗರದ ಬಾಣಸವಾಡಿ ಪೊಲೀಸರು
Follow us
| Updated By: Rakesh Nayak Manchi

Updated on: Sep 17, 2023 | 6:47 AM

ಬೆಂಗಳೂರು, ಸೆ.17: ರೌಡಿಶೀಟರ್​ಗಳ ಮತ್ಸರಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಅಗ್ಗಾಗೆ ಗುಂಡಿನ ಶಬ್ದ ಕೇಳಿಸುತ್ತಿರುತ್ತದೆ. ಅದರಂತೆ ಗುಂಡಿಕ್ಕಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಾಣಸವಡಿ ಠಾಣಾ ಪೊಲೀಸರು ಭೀಕರ ರಕ್ತಪಾತವನ್ನು ತಪ್ಪಿಸಿದ್ದಾರೆ. ರೌಡಿಶೀಟರ್ ಮಹಮದ್ ಜುಬೇರ್ (37) ಮತ್ತು ಫುರ್ಕನ್ ಅಲಿಖಾನ್ ಬಂಧಿತ ಆರೋಪಿಗಳು.

ರೌಡಿಶೀಟರ್ ಮಹಮದ್ ಜುಬೇರ್ ಮತ್ತೊಬ್ಬ ರೌಡಿಶೀಟರ್ ಅನೀಸ್ ಹತ್ಯೆಗೆ ಸಂಚು ರೂಪಿಸಿದ್ದನು. ಈತನ ಈ ಸಂಚಿನ ಜೊತೆಗೆ ಫುರ್ಕನ್ ಅಲಿಖಾನ್ ಕೂಡ ಇದ್ದನು. ಗುಂಡಿಕ್ಕಿ ಹತ್ಯೆ ಮಾಡಲು ಮಹಾರಾಷ್ಟ್ರದಿಂದ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಜುಬೇರ್ ತರಿಸಿದ್ದನು.

ಅದರಂತೆ ಆರೋಪಿಗಳಿಬ್ಬರು ಕಳೆದ ಒಂದು ತಿಂಗಳಿಂದ ಹತ್ಯೆಗೆ ಸಂಚು ಮಾಡಿ ಓಡಾಟ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಬಾಣಸವಾಡಿ ಠಾಣಾ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ನಡೆಯುತ್ತಿದ್ದ ರಕ್ತಪಾತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಳಿ ಇದ್ದ ಒಂದು ಪಿಸ್ತೂಲ್ ಹಾಗೂ ಎರಡು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮಹಿಳೆ, ಮಕ್ಕಳ ಅನುಮಾನಾಸ್ಪದ ಸಾವು; ಕೊಲೆ ಮಾಡಿ ಆತ್ಮಹತ್ಯೆ ಕಥೆ ಕಟ್ಟಿದನೇ ಪತಿ?

ಈ ಹಿಂದೆ ಹಣಕಾಸಿನ ವಿಚಾರಕ್ಕೆ ಮೂವರು ಗೆಳೆಯರ ನಡೆವೆ ಗಲಾಟೆ ನಡೆದಿತ್ತು. ಮೂವರಲ್ಲೊಬ್ಬನ ಕೊಲೆ ಬಳಿಕ ಜೊತೆಯಲ್ಲಿದ್ದವರ ನಡುವೆ ಒಳಗೊಳಗೆ ಹತ್ಯೆಗೆ ಸಂಚು ನಡೆಸಲಾಗಿದೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

2021 ರಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಅನೀಸ್, ಜೈಲಿನಲ್ಲಿದ್ದಾಗಲೇ ತನ್ನ ಗೆಳೆಯ ಅಲಿ ಕೊಲೆ ಮಾಡಿಸಿದ್ದ. ಇದಾದ ಬಳಿಕ ಅನೀಸ್​ ಮತ್ತೊಬ್ಬ ಗೆಳೆಯ ಜುಬೇರ್​ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಪ್ರತಿಯಾಗಿ ಜುಬೇರ್ ಹತ್ಯೆಗೆ ಸಂಚು ರೂಪಿಸಿದ್ದನು.

ಅದರಂತೆ ಮಹಾರಾಷ್ಟ್ರದಿಂದ ಪಿಸ್ತೂಲ್, ಬುಲೆಟ್ ತರಿಸಿಕೊಂಡಿದ್ದ ಜುಬೇರ್, ಮತ್ತಷ್ಟು ಗುಂಡುಗಳನ್ನು ತರಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದನು. ಈ ನಡುವೆ ಬಾಣಸವಾಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ