AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಕ್ತಪಾತ ತಡೆದ ಬಾಣಸವಾಡಿ ಪೊಲೀಸರು, ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

ರೌಡಿಶೀಟರ್ ಗಳ ಮತ್ಸರಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಗ್ಗಾಗೆ ಗುಂಡಿನ ಶಬ್ದ ಕೇಳಿಸುತ್ತಿರುತ್ತದೆ. ಅದರಂತೆ ಗುಂಡಿಕ್ಕಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಾಣಸವಡಿ ಠಾಣಾ ಪೊಲೀಸರು ಭೀಕರ ರಕ್ತಪಾತವನ್ನು ತಪ್ಪಿಸಿದ್ದಾರೆ. ಒಂದು ತಿಂಗಳಿಂದ ಹತ್ಯೆಗೆ ಸಂಚು ಮಾಡಿ ಆರೋಪಿಗಳು ಓಡಾಟ ನಡೆಸುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಬೆಂಗಳೂರು: ರಕ್ತಪಾತ ತಡೆದ ಬಾಣಸವಾಡಿ ಪೊಲೀಸರು, ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ
ಗುಂಡು ಹಾರಿಸಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಬಂಧಿಸಿದ ಬೆಂಗಳೂರು ನಗರದ ಬಾಣಸವಾಡಿ ಪೊಲೀಸರು
Jagadisha B
| Updated By: Rakesh Nayak Manchi|

Updated on: Sep 17, 2023 | 6:47 AM

Share

ಬೆಂಗಳೂರು, ಸೆ.17: ರೌಡಿಶೀಟರ್​ಗಳ ಮತ್ಸರಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಅಗ್ಗಾಗೆ ಗುಂಡಿನ ಶಬ್ದ ಕೇಳಿಸುತ್ತಿರುತ್ತದೆ. ಅದರಂತೆ ಗುಂಡಿಕ್ಕಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಾಣಸವಡಿ ಠಾಣಾ ಪೊಲೀಸರು ಭೀಕರ ರಕ್ತಪಾತವನ್ನು ತಪ್ಪಿಸಿದ್ದಾರೆ. ರೌಡಿಶೀಟರ್ ಮಹಮದ್ ಜುಬೇರ್ (37) ಮತ್ತು ಫುರ್ಕನ್ ಅಲಿಖಾನ್ ಬಂಧಿತ ಆರೋಪಿಗಳು.

ರೌಡಿಶೀಟರ್ ಮಹಮದ್ ಜುಬೇರ್ ಮತ್ತೊಬ್ಬ ರೌಡಿಶೀಟರ್ ಅನೀಸ್ ಹತ್ಯೆಗೆ ಸಂಚು ರೂಪಿಸಿದ್ದನು. ಈತನ ಈ ಸಂಚಿನ ಜೊತೆಗೆ ಫುರ್ಕನ್ ಅಲಿಖಾನ್ ಕೂಡ ಇದ್ದನು. ಗುಂಡಿಕ್ಕಿ ಹತ್ಯೆ ಮಾಡಲು ಮಹಾರಾಷ್ಟ್ರದಿಂದ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಜುಬೇರ್ ತರಿಸಿದ್ದನು.

ಅದರಂತೆ ಆರೋಪಿಗಳಿಬ್ಬರು ಕಳೆದ ಒಂದು ತಿಂಗಳಿಂದ ಹತ್ಯೆಗೆ ಸಂಚು ಮಾಡಿ ಓಡಾಟ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಬಾಣಸವಾಡಿ ಠಾಣಾ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ನಡೆಯುತ್ತಿದ್ದ ರಕ್ತಪಾತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಳಿ ಇದ್ದ ಒಂದು ಪಿಸ್ತೂಲ್ ಹಾಗೂ ಎರಡು ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮಹಿಳೆ, ಮಕ್ಕಳ ಅನುಮಾನಾಸ್ಪದ ಸಾವು; ಕೊಲೆ ಮಾಡಿ ಆತ್ಮಹತ್ಯೆ ಕಥೆ ಕಟ್ಟಿದನೇ ಪತಿ?

ಈ ಹಿಂದೆ ಹಣಕಾಸಿನ ವಿಚಾರಕ್ಕೆ ಮೂವರು ಗೆಳೆಯರ ನಡೆವೆ ಗಲಾಟೆ ನಡೆದಿತ್ತು. ಮೂವರಲ್ಲೊಬ್ಬನ ಕೊಲೆ ಬಳಿಕ ಜೊತೆಯಲ್ಲಿದ್ದವರ ನಡುವೆ ಒಳಗೊಳಗೆ ಹತ್ಯೆಗೆ ಸಂಚು ನಡೆಸಲಾಗಿದೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

2021 ರಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಅನೀಸ್, ಜೈಲಿನಲ್ಲಿದ್ದಾಗಲೇ ತನ್ನ ಗೆಳೆಯ ಅಲಿ ಕೊಲೆ ಮಾಡಿಸಿದ್ದ. ಇದಾದ ಬಳಿಕ ಅನೀಸ್​ ಮತ್ತೊಬ್ಬ ಗೆಳೆಯ ಜುಬೇರ್​ಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಪ್ರತಿಯಾಗಿ ಜುಬೇರ್ ಹತ್ಯೆಗೆ ಸಂಚು ರೂಪಿಸಿದ್ದನು.

ಅದರಂತೆ ಮಹಾರಾಷ್ಟ್ರದಿಂದ ಪಿಸ್ತೂಲ್, ಬುಲೆಟ್ ತರಿಸಿಕೊಂಡಿದ್ದ ಜುಬೇರ್, ಮತ್ತಷ್ಟು ಗುಂಡುಗಳನ್ನು ತರಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದನು. ಈ ನಡುವೆ ಬಾಣಸವಾಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್