AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ

ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ವೀರಶೈವ ಲಿಂಗಾಯದ ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಣೆ ನೀಡಲಿದ್ದಾರೆ.

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ
ಬಂಡೆಮಠದ ಬಸವಲಿಂಗ ಸ್ವಾಮೀಜಿ
TV9 Web
| Edited By: |

Updated on:Oct 27, 2022 | 8:09 AM

Share

ಬೆಂಗಳೂರು: ನೆಲಮಂಗಲ ತಾಲ್ಲೂಕು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಕುದೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ವಾಮೀಜಿಗೆ ಹೆಚ್ಚು ಆಪ್ತರಾಗಿದ್ದವರು ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಡಿಯೊ ಕಾಲ್ ಮಾಡಿದ ಯುವತಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸ್ವಾಮೀಜಿ ಸಾವಿನ ಪ್ರಕರಣವು ಮುಖ್ಯಮಂತ್ರಿ ಕಚೇರಿ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು (ಅ 27) ವೀರಶೈವ ‌ಸಮಾಜದ ಮುಖಂಡ ಪರಶಿವಯ್ಯ ನೇತೃತ್ವದ ತಂಡವೊಂದು ‌ಭೇಟಿ ಮಾಡಲು ಸಿದ್ಧತೆ ನಡೆಸಿದೆ. ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ಈ ತಂಡವು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ವಿವರಿಸಲಿದ್ದಾರೆ.

ಸಿಡಿಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಶಂಕೆ

ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀ ‌ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಸ್ವಾಮೀಜಿ ಬರೆದಿಟ್ಟಿರುವ ಡೆತ್ ನೋಟ್ ಸಂಪೂರ್ಣ ಮಾಹಿತಿ ಟಿವಿ9 ಗೆ ದೊರೆತಿದೆ. ಡೆತ್​ನೋಟ್​ನ ಐದು ಪುಟಗಳು ನಾಪತ್ತೆಯಾಗಿವೆ. ಪ್ರಕರಣ ಸಂಬಂಧ ರಾಮನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ‘ಟಿವಿ9’ಗೆ ಹೇಳಿಕೆ ನೀಡಿದ್ದು, ಆತ್ಮಹತ್ಯೆ ಸ್ಥಳದಲ್ಲಿ 3 ಪುಟಗಳ ಡೆತ್​ನೋಟ್​​ ಪತ್ತೆಯಾಗಿದೆ. ಡೆತ್​ನೋಟ್​ನಲ್ಲಿ ಕೆಲವು ವ್ಯಕ್ತಿಗಳ ಹೆಸರು ಉಲ್ಲೇಖ ಆಗಿದೆ. ತನಿಖೆಯ ದೃಷ್ಟಿಯಿಂದ ಅವರ ಹೆಸರನ್ನು ಬಹಿರಂಗಪಡಿಸಲ್ಲ. ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿರುವ ಎರಡೂ ಮೊಬೈಲ್​ಗಳು ಕೂಡ ಲಾಕ್ ಆಗಿವೆ. ನಮಗೆ ಸಿಕ್ಕ ಡೆತ್​ನೋಟ್, ವೈರಲ್​ ಆದ ಫೋಟೋಗೂ ವ್ಯತ್ಯಾಸವಿದೆ. ಡೆತ್​ನೋಟ್​ ಸಿಕ್ಕಿ ನಮ್ಮ ಗಮನಕ್ಕೆ ತರದಿದ್ರೆ ಕೇಸ್​ ಹಾಕ್ತೇವೆ. ಡೆತ್​ನೋಟ್​, ಮೊಬೈಲ್ ಫೋನ್​ FSLಗೆ ಕಳುಹಿಸಲಾಗುವುದು. ಮಠದ ಮೇಲೆ ಯಾರೂ ಸಂಶಯ ವ್ಯಕ್ತಪಡಿಸುತ್ತಿಲ್ಲ’ ಎಂದು ಹೇಳಿದ್ದಾರೆ.

ಶ್ರೀಗಳಿಗೆ ಇದ್ದ ಬೆದರಿಕೆ ಕರೆಗಳ ಬಗ್ಗೆ ಜನರು ಮಾತಾಡ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸ್ವಾಮೀಜಿ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ರಾಮನಗರದಲ್ಲಿ ಎಸ್​ಪಿ ಸಂತೋಷ್ ಬಾಬು ಹೇಳಿದ್ದಾರೆ.

Published On - 8:09 am, Thu, 27 October 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್