AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ

ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ವೀರಶೈವ ಲಿಂಗಾಯದ ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಣೆ ನೀಡಲಿದ್ದಾರೆ.

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೊ ಕಾಲ್ ಮಾಡಿದ್ದ ಯುವತಿಗಾಗಿ ತೀವ್ರಗೊಂಡ ಹುಡುಕಾಟ
ಬಂಡೆಮಠದ ಬಸವಲಿಂಗ ಸ್ವಾಮೀಜಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 27, 2022 | 8:09 AM

Share

ಬೆಂಗಳೂರು: ನೆಲಮಂಗಲ ತಾಲ್ಲೂಕು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಕುದೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ವಾಮೀಜಿಗೆ ಹೆಚ್ಚು ಆಪ್ತರಾಗಿದ್ದವರು ಎಂದು ಹೇಳಲಾಗಿದೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ವಿಡಿಯೊ ಕಾಲ್ ಮಾಡಿದ ಯುವತಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸ್ವಾಮೀಜಿ ಸಾವಿನ ಪ್ರಕರಣವು ಮುಖ್ಯಮಂತ್ರಿ ಕಚೇರಿ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು (ಅ 27) ವೀರಶೈವ ‌ಸಮಾಜದ ಮುಖಂಡ ಪರಶಿವಯ್ಯ ನೇತೃತ್ವದ ತಂಡವೊಂದು ‌ಭೇಟಿ ಮಾಡಲು ಸಿದ್ಧತೆ ನಡೆಸಿದೆ. ಸ್ವಾಮೀಜಿ ‌ಆತ್ಮಹತ್ಯೆಗೆ ಸಂಬಂಧಿಸಿದ ಹಲವು ಬೆಳವಣಿಗೆಗಳ ಬಗ್ಗೆ ಈ ತಂಡವು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ವಿವರಿಸಲಿದ್ದಾರೆ.

ಸಿಡಿಗೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಶಂಕೆ

ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀ ‌ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಸ್ವಾಮೀಜಿ ಬರೆದಿಟ್ಟಿರುವ ಡೆತ್ ನೋಟ್ ಸಂಪೂರ್ಣ ಮಾಹಿತಿ ಟಿವಿ9 ಗೆ ದೊರೆತಿದೆ. ಡೆತ್​ನೋಟ್​ನ ಐದು ಪುಟಗಳು ನಾಪತ್ತೆಯಾಗಿವೆ. ಪ್ರಕರಣ ಸಂಬಂಧ ರಾಮನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ‘ಟಿವಿ9’ಗೆ ಹೇಳಿಕೆ ನೀಡಿದ್ದು, ಆತ್ಮಹತ್ಯೆ ಸ್ಥಳದಲ್ಲಿ 3 ಪುಟಗಳ ಡೆತ್​ನೋಟ್​​ ಪತ್ತೆಯಾಗಿದೆ. ಡೆತ್​ನೋಟ್​ನಲ್ಲಿ ಕೆಲವು ವ್ಯಕ್ತಿಗಳ ಹೆಸರು ಉಲ್ಲೇಖ ಆಗಿದೆ. ತನಿಖೆಯ ದೃಷ್ಟಿಯಿಂದ ಅವರ ಹೆಸರನ್ನು ಬಹಿರಂಗಪಡಿಸಲ್ಲ. ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿರುವ ಎರಡೂ ಮೊಬೈಲ್​ಗಳು ಕೂಡ ಲಾಕ್ ಆಗಿವೆ. ನಮಗೆ ಸಿಕ್ಕ ಡೆತ್​ನೋಟ್, ವೈರಲ್​ ಆದ ಫೋಟೋಗೂ ವ್ಯತ್ಯಾಸವಿದೆ. ಡೆತ್​ನೋಟ್​ ಸಿಕ್ಕಿ ನಮ್ಮ ಗಮನಕ್ಕೆ ತರದಿದ್ರೆ ಕೇಸ್​ ಹಾಕ್ತೇವೆ. ಡೆತ್​ನೋಟ್​, ಮೊಬೈಲ್ ಫೋನ್​ FSLಗೆ ಕಳುಹಿಸಲಾಗುವುದು. ಮಠದ ಮೇಲೆ ಯಾರೂ ಸಂಶಯ ವ್ಯಕ್ತಪಡಿಸುತ್ತಿಲ್ಲ’ ಎಂದು ಹೇಳಿದ್ದಾರೆ.

ಶ್ರೀಗಳಿಗೆ ಇದ್ದ ಬೆದರಿಕೆ ಕರೆಗಳ ಬಗ್ಗೆ ಜನರು ಮಾತಾಡ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸ್ವಾಮೀಜಿ ವಿಡಿಯೋ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ರಾಮನಗರದಲ್ಲಿ ಎಸ್​ಪಿ ಸಂತೋಷ್ ಬಾಬು ಹೇಳಿದ್ದಾರೆ.

Published On - 8:09 am, Thu, 27 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ