AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು. ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ […]

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​
ಸಾಧು ಶ್ರೀನಾಥ್​
|

Updated on:Sep 25, 2019 | 1:05 PM

Share

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು.

ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಬ್ರೂ ಬಾಂಡ್, ರೆಡ್ ರೋಜ್​, ರೆಡ್ ಲೇಬಲ್ ಕಂಪನಿಯ ಲೇಬಲ್​ಗಳನ್ನು ತಯಾರು ಮಾಡಲು ಮಿಷನ್​ಗಳನ್ನು ಸಹ ಇಟ್ಟುಕೊಂಡಿದ್ದರು. ಸ್ಥಳೀಯ ಅಂಗಡಿಗಳಿಗೆ 280 ರೂ. ಮೌಲ್ಯದ ಟೀ ಪುಡಿಯನ್ನು 150 ರೂಪಾಯಿಗೆ ಮಾರಾಟ ಮಾಡ್ತಿದ್ರು.

ಕಡಿಮೆ ಬೆಲೆಯಿಂದ ಅನುಮಾನಗೊಂಡ ಅಂಗಡಿ ಮಾಲೀಕರು ಬಂಡೆಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ಟೀ ಪುಡಿ ಮಾರಾಟ ಮಾಡಲು ಬಂದಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 30 ಲಕ್ಷ ಮೌಲ್ಯದ 2,497 ಕೆಜಿ ನಕಲಿ ಟೀ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಮುಖ ಆರೋಪಿ ರಮೇಶ್​ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 1:00 pm, Wed, 25 September 19

Follow Us
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ