AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು. ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ […]

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​
ಸಾಧು ಶ್ರೀನಾಥ್​
|

Updated on:Sep 25, 2019 | 1:05 PM

Share

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು.

ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಬ್ರೂ ಬಾಂಡ್, ರೆಡ್ ರೋಜ್​, ರೆಡ್ ಲೇಬಲ್ ಕಂಪನಿಯ ಲೇಬಲ್​ಗಳನ್ನು ತಯಾರು ಮಾಡಲು ಮಿಷನ್​ಗಳನ್ನು ಸಹ ಇಟ್ಟುಕೊಂಡಿದ್ದರು. ಸ್ಥಳೀಯ ಅಂಗಡಿಗಳಿಗೆ 280 ರೂ. ಮೌಲ್ಯದ ಟೀ ಪುಡಿಯನ್ನು 150 ರೂಪಾಯಿಗೆ ಮಾರಾಟ ಮಾಡ್ತಿದ್ರು.

ಕಡಿಮೆ ಬೆಲೆಯಿಂದ ಅನುಮಾನಗೊಂಡ ಅಂಗಡಿ ಮಾಲೀಕರು ಬಂಡೆಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ಟೀ ಪುಡಿ ಮಾರಾಟ ಮಾಡಲು ಬಂದಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 30 ಲಕ್ಷ ಮೌಲ್ಯದ 2,497 ಕೆಜಿ ನಕಲಿ ಟೀ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಮುಖ ಆರೋಪಿ ರಮೇಶ್​ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 1:00 pm, Wed, 25 September 19

Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ