AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು. ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ […]

ನಕಲಿ ಚಹಾ ಪುಡಿ ಮಾರಾಟ ಮಾಡ್ತಿದ್ದ ಆರೋಪಿಗಳು ಅಂದರ್​
ಸಾಧು ಶ್ರೀನಾಥ್​
|

Updated on:Sep 25, 2019 | 1:05 PM

Share

ಬೆಂಗಳೂರು: ಅಕ್ಕಿ, ಬೇಳೆ, ಉಪ್ಪು, ಮೊಟ್ಟೆ ಬಳಿಕ ಇದೀಗ ನಕಲಿ ಟೀ ಪುಡಿಯೂ ಬೆಂಗಳೂರಿಗೆ ಲಗ್ಗೆಯಿಟ್ಟಿದೆ. ಬೆಂಗಳೂರಿನ ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕಲಿ ಟೀ ಪುಡಿ ತಯಾರಿಸಿ ಮಾರಾಟ ಮಾಡ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಬವರ್ ಲಾಲ್ ಹಾಗೂ ಜಗರಾಮ್ ಬಂಧಿತ ಆರೋಪಿಗಳು.

ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಡಿಕೊಂಡಿದ್ದ ಆರೋಪಿಗಳು, ನಕಲಿ ಟೀ ಪುಡಿಯನ್ನು ತಯಾರು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಬ್ರೂ ಬಾಂಡ್, ರೆಡ್ ರೋಜ್​, ರೆಡ್ ಲೇಬಲ್ ಕಂಪನಿಯ ಲೇಬಲ್​ಗಳನ್ನು ತಯಾರು ಮಾಡಲು ಮಿಷನ್​ಗಳನ್ನು ಸಹ ಇಟ್ಟುಕೊಂಡಿದ್ದರು. ಸ್ಥಳೀಯ ಅಂಗಡಿಗಳಿಗೆ 280 ರೂ. ಮೌಲ್ಯದ ಟೀ ಪುಡಿಯನ್ನು 150 ರೂಪಾಯಿಗೆ ಮಾರಾಟ ಮಾಡ್ತಿದ್ರು.

ಕಡಿಮೆ ಬೆಲೆಯಿಂದ ಅನುಮಾನಗೊಂಡ ಅಂಗಡಿ ಮಾಲೀಕರು ಬಂಡೆಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಆಧರಿಸಿ ಟೀ ಪುಡಿ ಮಾರಾಟ ಮಾಡಲು ಬಂದಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 30 ಲಕ್ಷ ಮೌಲ್ಯದ 2,497 ಕೆಜಿ ನಕಲಿ ಟೀ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಪ್ರಮುಖ ಆರೋಪಿ ರಮೇಶ್​ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Published On - 1:00 pm, Wed, 25 September 19

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು