AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಯಶವಂತಪುರ ಮಾರುಕಟ್ಟೆಯ 32 ಅಂಗಡಿಗಳಿಗೆ ಬೀಗ

ಬೆಂಗಳೂರಿನಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿ ಮಾಲೀಕರಿಗೆ, ಸುಸ್ತಿದಾರರಿಗೆ ಬಿಬಿಎಂಪಿ ಬಿಸಿ ಮುಟ್ಟಿಸುತ್ತಾ ಇದೆ. ಅತಿ ಹೆಚ್ಚು ಟ್ಯಾಕ್ಸ್ ಬಾಕಿ ಉಳಿಸಿಕೊಂಡಿರುವ ಅಂಗಡಿಗಳಿಗೆ ಬೀಗ ಹಾಕಿ ಸೀಲ್ ಹೊಡೆದಿದೆ. ಬೆಂಗಳೂರಿನ ಎಲ್ಲಾ ವಲಯಗಳಲ್ಲೂ ಅಂಗಡಿಗಳಿಗೆ ಬೀಗ ಹಾಕುವ ಅಭಿಯಾನ ಮುಂದುವರೆಯಲಿದ್ದು, ಸೋಮವಾರ ಯಶವಂತಪುರದ ಆರ್‌ಟಿಒ ರಸ್ತೆಯಲ್ಲಿರುವ ಅಂಗಡಿಗಳಿಗೆ ಪಾಲಿಕೆ ಬೀಗ ಜಡಿದಿದೆ.

ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಯಶವಂತಪುರ ಮಾರುಕಟ್ಟೆಯ 32 ಅಂಗಡಿಗಳಿಗೆ ಬೀಗ
ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಯಶವಂತಪುರ ಮಾರುಕಟ್ಟೆಯ 32 ಅಂಗಡಿಗಳಿಗೆ ಬೀಗ
Vinayak Hanamant Gurav
| Edited By: |

Updated on: Nov 05, 2024 | 6:52 AM

Share

ಬೆಂಗಳೂರು, ನವೆಂಬರ್ 5: ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಅಂಗಡಿಗಳಿಗೆ ಬೀಗ ಹಾಕುವ ಕೆಲಸವನ್ನು ಬಿಬಿಎಂಪಿ ಚುರುಕುಗೊಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲೂ ಈ ಅಭಿಯಾನ ನಡೆಯುತ್ತಿದ್ದು ಸೋಮವಾರ ಪಶ್ಚಿಮ ವಲಯದ ಯಶವಂತಪುರ ಆರ್‌ಟಿಒ ಕಚೇರಿ ಮುಂಭಾಗದ ಮಾರ್ಕೆಟ್​ನಲ್ಲಿ ಇರುವ 32 ಅಂಗಡಿಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ.

ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್​ 32 ಅಂಗಡಿಗಳಿಗೆ ಬೀಗ

ಆರ್‌ಟಿಒ ಕಚೇರಿ ಮುಂಭಾಗದಲ್ಲಿ ಒಟ್ಟು 42 ಅಂಗಡಿಗಳು ಟ್ಯಾಕ್ಸ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದವು. ಈ ಪೈಕಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್​ಗೆ ಸೇರಿದ 32 ಅಂಗಡಿಗಳಿಗೆ ಸೇರಿದಂತೆ ಇನ್ನುಳಿದ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಆದರೆ ಟ್ಯಾಕ್ಸ್ ಪಾವತಿ ಮಾಡಿರಲಿಲ್ಲ. ಒಂದೂವರೆ ಕೋಟಿ ರೂಪಾಯಿ ಬಾಕಿ ಇದ್ದರೂ ತೆರಿಗೆ ಪಾವತಿಸಿರಲಿಲ್ಲ. ಹೀಗಾಗಿ ಸೆಂಟ್ರಲ್ ಮುಸ್ಲಿಂ ಅಸೊಸಿಯೇಷನ್‌ಗೆ ಸೇರಿದ 32 ಅಂಗಡಿಗಳಿಗೆ ಸೀಲ್ ಹಾಕಲಾಗಿದೆ. ಇನ್ನುಳಿದ ಅಂಗಡಿಗಳು ಖಾಸಗಿ ಒಡೆತನದ್ದಾಗಿರುವುದರಿಂದ ತೆರಿಗೆ ಪಾವತಿ ಮಾಡಿಸಿಕೊಳ್ಳಲಾಗಿದ್ದು, ಆ ಅಂಗಡಿಗಳಿಗೆ ಸೀಲ್ ಹಾಕಿಲ್ಲ.

ಆದರೆ ‌ಎಸ್‌ಎಂ‌ಎಗೆ ಸೇರಿದ ಅಂಗಡಿಗಳ ಮಾಲೀಕರು ಈ ನವೆಂಬರ್ ತಿಂಗಳೊಳಗಾಗಿ ತೆರಿಗೆ ಪಾವತಿಸದಿದ್ದರೆ ಮೂರು ಪಟ್ಟು ಹಣ ಕಟ್ಟಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತೆ ಅರ್ಚನಾ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಈ ಬಾರಿ ದೀಪಾವಳಿ ಪಟಾಕಿ ಸಂಭ್ರಮಕ್ಕೆ ಮನುಷ್ಯ ಮಾತ್ರವಲ್ಲ ಹದ್ದುಗಳು ವಿಲವಿಲ

ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್​ಗೆ ಸೇರಿದ ಅಂಗಡಿಯ ಬಾಡಿಗೆದಾರರು ತಿಂಗಳು, ತಿಂಗಳು ಬಾಡಿಗೆ ಕಟ್ಟಿಕೊಂಡು ಹೋಗುತ್ತಿದ್ದಾರಂತೆ. ಆದರು ಕೂಡ ಎಸ್‌ಎಂಎ ಟ್ಯಾಕ್ಸ್ ಕಟ್ಟದೇ ನಿರ್ಲಕ್ಷ ವಹಿಸಿರುವುದರಿಂದ 32 ಕುಟುಂಬಗಳು ಬೀದಿಗೆ ಬಿದ್ದಿವೆ.

ತೆರಿಗೆ ಕಟ್ಟದೇ ಇರುವ ಅಂಗಡಿಗಳಿಗೆ ಬೀಗ ಹಾಕುವ ಕೆಲಸವನ್ನು ಬಿಬಿಎಂಪಿ ಮಾಡುತ್ತಾ ಇದ್ದು ತೆರಿಗೆ ಪಾವತಿಸಿದ ಬಳಿಕ ಸೀಲ್ ಓಪನ್ ಮಾಡಲಿದೆ. ಪಶ್ಚಿಮ ವಲಯದಲ್ಲಿ ಸಾಕಷ್ಟು ಅಂಗಡಿಗಳಿಗೆ ಬೀಗ ಹಾಕಿ ಬಿಸಿ ಮುಟ್ಟಿಸಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?