AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು

ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು
ಮೃತ ರೌಡಿಶೀಟರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on:Apr 10, 2023 | 12:15 PM

Share

ಬೆಂಗಳೂರು: ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಹೌದು ನಿನ್ನೆ(ಏ.9) ರಾತ್ರಿ ಕಂಠಪೂರ್ತಿ ಎಣ್ಣೆ ಕುಡಿದು ಇಬ್ಬರು ರೌಡಿಶೀಟರ್​​ಗಳಾದ ಮಂಜ ಅಲಿಯಾಸ್ ಪೋಲಾರ್​​​ ಹಾಗೂ ಶಿವರಾಜ್ ನಡುವೆ ಗಲಾಟೆಯಾಗಿದ್ದು, ರೌಡಿಶೀಟರ್ ಮಂಜ ಎಂಬುವವನು ಬಿಯರ್ ಬಾಟಲ್​ನಿಂದ ಶಿವರಾಜ್​ ತಲೆಗೆ ಹೊಡೆದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಬಳಿಕ ಶಿವರಾಜ್​ನನ್ನ ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದು, ಈ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ರೌಡಿಶೀಟರ್​ ಹತ್ಯೆ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ

ಬೆಂಗಳೂರು: ರೌಡಿಶೀಟರ್​ ಬರ್ಬರ ಹತ್ಯೆ ಕುರಿತು ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ‘ನಿನ್ನೆ (ಏ.9) ಕೊಲೆ ಪ್ರಕರಣ ದಾಖಲಾಗಿದೆ. ರಾತ್ರಿ10.30ಕ್ಕೆ ಸ್ಪೈಸ್ ಬಾರ್​ನಲ್ಲಿ ಗಲಾಟೆಯಾಗಿದ್ದು, 12.00 ಗಂಟೆಗೆ ಕೊಲೆಯಾದ ಬಗ್ಗೆ ಮಾಹಿತಿ ಬಂದಿದೆ. ಕೊಲೆಯಾದ ಶಿವರಾಜ್ ಸಿಕೆ ಅಚ್ಚುಕಟ್ಟು ಠಾಣೆಯ ರೌಡಿಶೀಟರ್ ಆಗಿದ್ದು, ವೃತ್ತಿಯಲ್ಲಿ ಪೇಂಟರ್​ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಆತನನ್ನ ಬಿಯರ್ ಬಾಟಲ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಂಜು ಸೇರಿದಂತೆ ಮೂರು ಜನ ಆರೋಪಿಗಳ ಬಗ್ಗೆ ಉಲ್ಲೇಖ ಮಾಡಲಾಗಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ ಎಂದರು.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ಮಗಳದ್ದು ಕೊಲೆ ಎಂದ ಕುಟುಂಬಸ್ಥರು

ಇನ್ನು ಮಂಜು ಮತ್ತು ಮೃತ ಶಿವರಾಜ್​ ಜೊತೆ ಈ ಹಿಂದೆ ಸಣ್ಣಪುಟ್ಟ ಗಲಾಟೆ ಇತ್ತು ಎನ್ನಲಾಗಿದೆ. ನಿನ್ನೆ ರಾತ್ರಿ ರೌಡಿ ಶೀಟರ್ ಶಿವರಾಜ್ ತನ್ನ ಮೂವರು ಗೆಳೆಯರ ಜೊತೆಗೆ ಇಟ್ಟಮಾಡು ರೋಡ್​ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್​ಗೆ ಹೋಗಿದ್ದ. ಕುಡಿದ ನಂತರ ಸಿಕೆ ಅಚ್ಚುಕಟ್ಟು ಮಂಜನ ಜೊತೆಗೆ ಗಲಾಟೆ ಆಗಿದೆ. ಮಾತು ಮಾತಿಗೆ ಶುರುವಾದ ಗಲಾಟೆಯಲ್ಲಿ ಅರೋಪಿ ಮಂಜುಗೆ ಶಿವರಾಜ್ ಅಂಡ್ ಟೀಮ್ ಹಲ್ಲೆ ಮಾಡಿದ್ದು, ಹೊಡೆದು ಬಾರ್ ನಿಂದ ಹೊರಕ್ಕೆ ಕಳುಸಿದ್ದಾರೆ.

ಬಾರ್​​ನಿಂದ ಹೊರ ಬಂದು ನಿಂತ ಮಂಜು ಜೊತೆ ಮತ್ತೆ ಗಲಾಟೆ ಶುರುವಾಗಿದೆ. ಬಳಿಕ ಮಂಜನ ಜೊತೆಗೆ ಮತ್ತು ನಾಲ್ಕರಿಂದ ಐದು ಜನರು ಸೇರಿಕೊಂಡಿದ್ದಾರೆ. ಮೊದಲಿಗೆ ಬಿಯರ್ ಬಾಟಲ್​ನಿಂದ ಹೊಡೆದಾಡಿದ್ದಾರೆ. ನಂತರ ರಸ್ತೆ ಬದಿಯ ಕಲ್ಲಿನಿಂದ ತಲೆಗೆ ಹೊಡೆದಿದ್ದಾರೆ. ಪರಿಣಾಮ ರಸ್ತೆ ಬದಿಯಲ್ಲಿ ಶಿವರಾಜ್ ಬಿದ್ದಿದ್ದಾನೆ. ಘಟನೆ ಸಂಭಂದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದೇವೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Mon, 10 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್