AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು

ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು
ಮೃತ ರೌಡಿಶೀಟರ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್| Edited By: |

Updated on:Apr 10, 2023 | 12:15 PM

Share

ಬೆಂಗಳೂರು: ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಹೌದು ನಿನ್ನೆ(ಏ.9) ರಾತ್ರಿ ಕಂಠಪೂರ್ತಿ ಎಣ್ಣೆ ಕುಡಿದು ಇಬ್ಬರು ರೌಡಿಶೀಟರ್​​ಗಳಾದ ಮಂಜ ಅಲಿಯಾಸ್ ಪೋಲಾರ್​​​ ಹಾಗೂ ಶಿವರಾಜ್ ನಡುವೆ ಗಲಾಟೆಯಾಗಿದ್ದು, ರೌಡಿಶೀಟರ್ ಮಂಜ ಎಂಬುವವನು ಬಿಯರ್ ಬಾಟಲ್​ನಿಂದ ಶಿವರಾಜ್​ ತಲೆಗೆ ಹೊಡೆದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಬಳಿಕ ಶಿವರಾಜ್​ನನ್ನ ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದು, ಈ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ರೌಡಿಶೀಟರ್​ ಹತ್ಯೆ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ

ಬೆಂಗಳೂರು: ರೌಡಿಶೀಟರ್​ ಬರ್ಬರ ಹತ್ಯೆ ಕುರಿತು ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ‘ನಿನ್ನೆ (ಏ.9) ಕೊಲೆ ಪ್ರಕರಣ ದಾಖಲಾಗಿದೆ. ರಾತ್ರಿ10.30ಕ್ಕೆ ಸ್ಪೈಸ್ ಬಾರ್​ನಲ್ಲಿ ಗಲಾಟೆಯಾಗಿದ್ದು, 12.00 ಗಂಟೆಗೆ ಕೊಲೆಯಾದ ಬಗ್ಗೆ ಮಾಹಿತಿ ಬಂದಿದೆ. ಕೊಲೆಯಾದ ಶಿವರಾಜ್ ಸಿಕೆ ಅಚ್ಚುಕಟ್ಟು ಠಾಣೆಯ ರೌಡಿಶೀಟರ್ ಆಗಿದ್ದು, ವೃತ್ತಿಯಲ್ಲಿ ಪೇಂಟರ್​ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಆತನನ್ನ ಬಿಯರ್ ಬಾಟಲ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಂಜು ಸೇರಿದಂತೆ ಮೂರು ಜನ ಆರೋಪಿಗಳ ಬಗ್ಗೆ ಉಲ್ಲೇಖ ಮಾಡಲಾಗಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ ಎಂದರು.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ಮಗಳದ್ದು ಕೊಲೆ ಎಂದ ಕುಟುಂಬಸ್ಥರು

ಇನ್ನು ಮಂಜು ಮತ್ತು ಮೃತ ಶಿವರಾಜ್​ ಜೊತೆ ಈ ಹಿಂದೆ ಸಣ್ಣಪುಟ್ಟ ಗಲಾಟೆ ಇತ್ತು ಎನ್ನಲಾಗಿದೆ. ನಿನ್ನೆ ರಾತ್ರಿ ರೌಡಿ ಶೀಟರ್ ಶಿವರಾಜ್ ತನ್ನ ಮೂವರು ಗೆಳೆಯರ ಜೊತೆಗೆ ಇಟ್ಟಮಾಡು ರೋಡ್​ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್​ಗೆ ಹೋಗಿದ್ದ. ಕುಡಿದ ನಂತರ ಸಿಕೆ ಅಚ್ಚುಕಟ್ಟು ಮಂಜನ ಜೊತೆಗೆ ಗಲಾಟೆ ಆಗಿದೆ. ಮಾತು ಮಾತಿಗೆ ಶುರುವಾದ ಗಲಾಟೆಯಲ್ಲಿ ಅರೋಪಿ ಮಂಜುಗೆ ಶಿವರಾಜ್ ಅಂಡ್ ಟೀಮ್ ಹಲ್ಲೆ ಮಾಡಿದ್ದು, ಹೊಡೆದು ಬಾರ್ ನಿಂದ ಹೊರಕ್ಕೆ ಕಳುಸಿದ್ದಾರೆ.

ಬಾರ್​​ನಿಂದ ಹೊರ ಬಂದು ನಿಂತ ಮಂಜು ಜೊತೆ ಮತ್ತೆ ಗಲಾಟೆ ಶುರುವಾಗಿದೆ. ಬಳಿಕ ಮಂಜನ ಜೊತೆಗೆ ಮತ್ತು ನಾಲ್ಕರಿಂದ ಐದು ಜನರು ಸೇರಿಕೊಂಡಿದ್ದಾರೆ. ಮೊದಲಿಗೆ ಬಿಯರ್ ಬಾಟಲ್​ನಿಂದ ಹೊಡೆದಾಡಿದ್ದಾರೆ. ನಂತರ ರಸ್ತೆ ಬದಿಯ ಕಲ್ಲಿನಿಂದ ತಲೆಗೆ ಹೊಡೆದಿದ್ದಾರೆ. ಪರಿಣಾಮ ರಸ್ತೆ ಬದಿಯಲ್ಲಿ ಶಿವರಾಜ್ ಬಿದ್ದಿದ್ದಾನೆ. ಘಟನೆ ಸಂಭಂದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದೇವೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Mon, 10 April 23

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ