AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು

ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್​ ಬರ್ಬರ ಹತ್ಯೆ; ಡಿಸಿಪಿ ಹೇಳಿದ್ದೇನು
ಮೃತ ರೌಡಿಶೀಟರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on:Apr 10, 2023 | 12:15 PM

Share

ಬೆಂಗಳೂರು: ನಗರದ ಉತ್ತರಹಳ್ಳಿಯ ಸ್ಪೈಸ್ ಬಾರ್​ನಲ್ಲಿ, ಬಿಯರ್​ ಬಾಟಲ್​ನಿಂದ ಹೊಡೆದು ರೌಡಿಶೀಟರ್ ಶಿವರಾಜ್ ಎಂಬಾತ​ನನ್ನ ಕೊಲೆ ಮಾಡಲಾಗಿದೆ. ಹೌದು ನಿನ್ನೆ(ಏ.9) ರಾತ್ರಿ ಕಂಠಪೂರ್ತಿ ಎಣ್ಣೆ ಕುಡಿದು ಇಬ್ಬರು ರೌಡಿಶೀಟರ್​​ಗಳಾದ ಮಂಜ ಅಲಿಯಾಸ್ ಪೋಲಾರ್​​​ ಹಾಗೂ ಶಿವರಾಜ್ ನಡುವೆ ಗಲಾಟೆಯಾಗಿದ್ದು, ರೌಡಿಶೀಟರ್ ಮಂಜ ಎಂಬುವವನು ಬಿಯರ್ ಬಾಟಲ್​ನಿಂದ ಶಿವರಾಜ್​ ತಲೆಗೆ ಹೊಡೆದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಬಳಿಕ ಶಿವರಾಜ್​ನನ್ನ ಆಸ್ಪತ್ರೆಗೆ ಸೇರಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದು, ಈ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ರೌಡಿಶೀಟರ್​ ಹತ್ಯೆ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಸ್ಪಷ್ಟನೆ

ಬೆಂಗಳೂರು: ರೌಡಿಶೀಟರ್​ ಬರ್ಬರ ಹತ್ಯೆ ಕುರಿತು ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ‘ನಿನ್ನೆ (ಏ.9) ಕೊಲೆ ಪ್ರಕರಣ ದಾಖಲಾಗಿದೆ. ರಾತ್ರಿ10.30ಕ್ಕೆ ಸ್ಪೈಸ್ ಬಾರ್​ನಲ್ಲಿ ಗಲಾಟೆಯಾಗಿದ್ದು, 12.00 ಗಂಟೆಗೆ ಕೊಲೆಯಾದ ಬಗ್ಗೆ ಮಾಹಿತಿ ಬಂದಿದೆ. ಕೊಲೆಯಾದ ಶಿವರಾಜ್ ಸಿಕೆ ಅಚ್ಚುಕಟ್ಟು ಠಾಣೆಯ ರೌಡಿಶೀಟರ್ ಆಗಿದ್ದು, ವೃತ್ತಿಯಲ್ಲಿ ಪೇಂಟರ್​ ಆಗಿ ಕೆಲಸ ಮಾಡುತ್ತಿದ್ದ. ಇನ್ನು ಆತನನ್ನ ಬಿಯರ್ ಬಾಟಲ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಂಜು ಸೇರಿದಂತೆ ಮೂರು ಜನ ಆರೋಪಿಗಳ ಬಗ್ಗೆ ಉಲ್ಲೇಖ ಮಾಡಲಾಗಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ ಎಂದರು.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ಮಗಳದ್ದು ಕೊಲೆ ಎಂದ ಕುಟುಂಬಸ್ಥರು

ಇನ್ನು ಮಂಜು ಮತ್ತು ಮೃತ ಶಿವರಾಜ್​ ಜೊತೆ ಈ ಹಿಂದೆ ಸಣ್ಣಪುಟ್ಟ ಗಲಾಟೆ ಇತ್ತು ಎನ್ನಲಾಗಿದೆ. ನಿನ್ನೆ ರಾತ್ರಿ ರೌಡಿ ಶೀಟರ್ ಶಿವರಾಜ್ ತನ್ನ ಮೂವರು ಗೆಳೆಯರ ಜೊತೆಗೆ ಇಟ್ಟಮಾಡು ರೋಡ್​ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್​ಗೆ ಹೋಗಿದ್ದ. ಕುಡಿದ ನಂತರ ಸಿಕೆ ಅಚ್ಚುಕಟ್ಟು ಮಂಜನ ಜೊತೆಗೆ ಗಲಾಟೆ ಆಗಿದೆ. ಮಾತು ಮಾತಿಗೆ ಶುರುವಾದ ಗಲಾಟೆಯಲ್ಲಿ ಅರೋಪಿ ಮಂಜುಗೆ ಶಿವರಾಜ್ ಅಂಡ್ ಟೀಮ್ ಹಲ್ಲೆ ಮಾಡಿದ್ದು, ಹೊಡೆದು ಬಾರ್ ನಿಂದ ಹೊರಕ್ಕೆ ಕಳುಸಿದ್ದಾರೆ.

ಬಾರ್​​ನಿಂದ ಹೊರ ಬಂದು ನಿಂತ ಮಂಜು ಜೊತೆ ಮತ್ತೆ ಗಲಾಟೆ ಶುರುವಾಗಿದೆ. ಬಳಿಕ ಮಂಜನ ಜೊತೆಗೆ ಮತ್ತು ನಾಲ್ಕರಿಂದ ಐದು ಜನರು ಸೇರಿಕೊಂಡಿದ್ದಾರೆ. ಮೊದಲಿಗೆ ಬಿಯರ್ ಬಾಟಲ್​ನಿಂದ ಹೊಡೆದಾಡಿದ್ದಾರೆ. ನಂತರ ರಸ್ತೆ ಬದಿಯ ಕಲ್ಲಿನಿಂದ ತಲೆಗೆ ಹೊಡೆದಿದ್ದಾರೆ. ಪರಿಣಾಮ ರಸ್ತೆ ಬದಿಯಲ್ಲಿ ಶಿವರಾಜ್ ಬಿದ್ದಿದ್ದಾನೆ. ಘಟನೆ ಸಂಭಂದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದೇವೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Mon, 10 April 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ