AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Accident; ಬೆಂಗಳೂರು; ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಹರಿದು ಮಗು ಸಾವು

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪೂರ್ವಿ ರಾವ್ ತಂದೆ ಪ್ರಸನ್ನ ಸಿಸ್ಕೋ ಕಂಪನಿಯ ಉದ್ಯೋಗಿಯಾಗಿದ್ದಾರೆ. ಪ್ರತಿನಿತ್ಯ ಪ್ರಸನ್ನ ಅವರೇ ಮಗಳನ್ನು ಶಾಲೆಗೆ ಬಿಟ್ಟು ಕೆಲಸಕ್ಕೆ ತೆರಳುತ್ತಿದ್ದರು.

Bangalore Accident; ಬೆಂಗಳೂರು; ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಹರಿದು ಮಗು ಸಾವು
ಪೂರ್ವಿ ರಾವ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 17, 2023 | 11:09 PM

Share

ಬೆಂಗಳೂರು, ಆಗಸ್ಟ್ 16: ಬಿಎಂಟಿಸಿ ಬಸ್ (BMTC Bus) ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ (Uttarahalli) ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ ದುರ್ದೈವಿ. ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರಸನ್ನ ಬೈಕ್​ನ ಎಡಬದಿಗೆ ಬಿದ್ದರೆ ಪೂರ್ವಿ ಬೈಕ್​​ನ ಬಲಬದಿ ಬಿದ್ದಿದ್ದಾಳೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ. ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪೂರ್ವಿ ರಾವ್ ತಂದೆ ಪ್ರಸನ್ನ ಸಿಸ್ಕೋ ಕಂಪನಿಯ ಉದ್ಯೋಗಿಯಾಗಿದ್ದಾರೆ. ಪ್ರತಿನಿತ್ಯ ಪ್ರಸನ್ನ ಅವರೇ ಮಗಳನ್ನು ಶಾಲೆಗೆ ಬಿಟ್ಟು ಕೆಲಸಕ್ಕೆ ತೆರಳುತ್ತಿದ್ದರು. ಇಂದೂ ಕೂಡ ಅದೇ ರೀತಿ ಮಗಳನ್ನು ಶಾಲೆಗೆ ಬಿಡಲು ತೆರಳಿದ್ದಾಗ ಘಟನೆ ಸಂಭವಿಸಿದೆ.

ಮಾರುತಿನಗರ ಮುಖ್ಯರಸ್ತೆಯಲ್ಲಿ ಅಪಘಾತ; ಇಬ್ಬರ ಸಾವು

ಬೆಂಗಳೂರಿನ ಮಾರುತಿನಗರ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೈಕ್​ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕ ನರಸಪ್ಪ (51) ಹಾಗೂ ರಕ್ಷಾ (21) ಎಂಬ ಯುವತಿ ಮೃತಪಟ್ಟಿದ್ದಾರೆ. ರಕ್ಷಾ ಅವರು ತಮ್ಮ ಸ್ನೇಹಿತ ಚಂದನ್ ಜತೆ ಪಲ್ಸರ್ ಬೈಕ್ ನಲ್ಲಿ ವೇಗವಾಗಿ ಬಂದಿದ್ದಾರೆ. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಅಲ್ಲದೆ, ಚಂದನ್ ಅಜಾಗರೂಕತೆಯ ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಇವರಿದ್ದ ಬೈಕ್ ಮತ್ತೊಂದು ಬೈಕ್​​ನಲ್ಲಿ ಸಾಗುತಿದ್ದ ನರಸಪ್ಪಗೆ ಡಿಕ್ಕಿ ಹೊಡೆದಿದೆ. ನರಸಪ್ಪ ಸಹ ಹೆಲ್ಮೆಟ್ ಧರಿಸಿದ ಬೈಕ್ ನಲ್ಲಿ ತೆರಳುತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು ಚಾಲಕ, ಇಬ್ಬರು ಸಾವು

ಅಪಘಾತದ ತೀವ್ರತೆಗೆ ನರಸಪ್ಪ ಸ್ಥಳದಲ್ಲೇ ಮೃತಪಟ್ಟರೆ, ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದರು. ಚಂದನ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:36 pm, Wed, 16 August 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?