AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ನಿರಾಕರಿಸಿದಕ್ಕೆ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗನಿಗೆ ವಿಧಿ ಶಿಕ್ಷೆ: ಕಾಲಲ್ಲಿ ಗ್ಯಾಂಗ್ರೀನ್​ ಲಕ್ಷಣ

ಆರೋಪಿ ಪತ್ತೆ ವೇಳೆ ಪೊಲೀಸರು ಕಾಲಿಗೆ ಗುಂಡು ಹಾಕಿಸಿದ್ದರು. ಆದ್ರೆ ಈಗ ಆರೋಪಿ ನಾಗೇಶ್ ಗುಂಡೇಟು ತಗುಲಿದ್ದ ಸ್ಥಳದಲ್ಲಿ ರಾಡ್ ಹಾಕಿ ಬ್ಯಾಂಡೇಜ್ ಹಾಕಿದ್ರೂ ನೋವು ಹೆಚ್ಚಾಗಿದೆ. ಚಿಕಿತ್ಸೆ ಕೊಡಿಸುತ್ತಿದ್ದರೂ ಌಸಿಡ್ ನಾಗನ ಗಾಯದ ತೀವ್ರತೆ ಕಡಿಮೆಯಾಗಿಲ್ಲ.

ಪ್ರೀತಿ ನಿರಾಕರಿಸಿದಕ್ಕೆ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗನಿಗೆ ವಿಧಿ ಶಿಕ್ಷೆ: ಕಾಲಲ್ಲಿ ಗ್ಯಾಂಗ್ರೀನ್​ ಲಕ್ಷಣ
ಆ್ಯಸಿಡ್ ದಾಳಿ ಆರೋಪಿ ನಾಗೇಶ್
TV9 Web
| Edited By: |

Updated on:Nov 06, 2022 | 8:24 AM

Share

ಬೆಂಗಳೂರು: ನಗರದ ಹೆಗ್ಗನಹಳ್ಳಿಯಲ್ಲಿ ಯುವತಿ ಮೇಲೆ ಆ್ಯಸಿಡ್(Acid Attack) ಹಾಕಿದ್ದ ಆರೋಪಿ ನಾಗೇಶ್​ನಿಗೆ ವಿಧಿಯೇ ಶಿಕ್ಷೆ ಕೊಟ್ಟಿದೆ. ನಾಗೇಶ್ ಅಲಿಯಾಸ್ ನಾಗ ಕಳೆದ 6 ತಿಂಗಳಿಂದ ನಿರಂತರವಾಗಿ ಬಲಗಾಲಿನ ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದು ಗ್ಯಾಂಗ್ರೀನ್​ ಲಕ್ಷಣಗಳು(Gangrene Disease Symptoms) ಕಂಡು ಬಂದಿವೆ.

ಆರೋಪಿ ನಾಗೇಶ್ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂದು ತಾನು ಪ್ರೀತಿಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಇದಾದ ಬಳಿಕ ಸನ್ಯಾಸಿ ವೇಶ ಧರಿಸಿ ಆಶ್ರಮದಲ್ಲಿ ತಲೆ ಮರೆಸಿಕೊಂಡಿದ್ದ. ಆರೋಪಿ ಪತ್ತೆ ವೇಳೆ ಪೊಲೀಸರು ಕಾಲಿಗೆ ಗುಂಡು ಹಾಕಿಸಿದ್ದರು. ಆದ್ರೆ ಈಗ ಆರೋಪಿ ನಾಗೇಶ್ ಗುಂಡೇಟು ತಗುಲಿದ್ದ ಸ್ಥಳದಲ್ಲಿ ರಾಡ್ ಹಾಕಿ ಬ್ಯಾಂಡೇಜ್ ಹಾಕಿದ್ರೂ ನೋವು ಹೆಚ್ಚಾಗಿದೆ. ಚಿಕಿತ್ಸೆ ಕೊಡಿಸುತ್ತಿದ್ದರೂ ಌಸಿಡ್ ನಾಗನ ಗಾಯದ ತೀವ್ರತೆ ಕಡಿಮೆಯಾಗಿಲ್ಲ. ನಡೆದಾಡಲು ಆಗದೆ ವಿಕ್ಟೋರಿಯಾ ಆಸ್ಪತ್ರೆಗೆ ಜೈಲಿನ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ಬಲಗಾಲಿನ ಗಾಯದ ಸಮಸ್ಯೆ ಕಾಡುತ್ತಿದೆ. ಸದ್ಯ ನಾಗನ ಕಾಲಲ್ಲಿ ಗ್ಯಾಂಗ್ರಿನ್ ಲಕ್ಷಣ ಕಾಣ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಿದ್ದತೆ ನಡೆದಿದೆ.

ಇದೇ ವರ್ಷ ಏಪ್ರಿಲ್ 28ರಂದು ಮುತ್ತೂಟ್​ ಫೈನಾನ್ಸ್​ ಕಚೇರಿ ಬಳಿ ಯುವತಿ ಮೇಲೆ ಌಸಿಡ್​ ಹಾಕಿ ನಾಗೇಶ್ ಪರಾರಿಯಾಗಿದ್ದ. ಬಳಿಕ ಬೆಂಗಳೂರು ಪೊಲೀಸರು ತಮಿಳುನಾಡಿನ ಆಶ್ರಮದಲ್ಲಿ ಬಂಧಿಸಿ ಕರೆತಂದಿದ್ದರು. ಌಸಿಡ್ ನಾಗನಿಗೆ ಸೂಕ್ತ ಚಿಕಿತ್ಸೆ ಕೊಡಿಸುಂತೆ ಪರಪ್ಪನ ಅಗ್ರಹ ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಘನಘೋರ ತಪ್ಪನ್ನು ಒಪ್ಪಿಕೊಂಡ ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ 

ಬೆಂಗಳೂರಿನಲ್ಲಿ ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಕೆ ಹಾಕಿದ ಬಿಲ್ಡರ್

ಬೆಂಗಳೂರಿನಲ್ಲಿ ತಡರಾತ್ರಿ ಪಿಸ್ತೂಲ್ ಹಿಡಿದು ಬಿಲ್ಡರೊಬ್ಬರು ಬೆದರಿಸಿ ಅಟ್ಟಹಾಸ ಮೆರೆದಿದ್ದಾರೆ. ಅಕ್ಟೋಬರ್ 28 ರ ತಡರಾತ್ರಿ 1:30 ರ ವೇಳೆಗೆ ಕೆ.ಆರ್.ಪುರಂನ ಚಿಕ್ಕಬಸವನಪುರದಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಕಾರಿನಿಂದ ಗುದ್ದಿ ಜಖಂ ಮಾಡಿ ಬಳಿಕ ಕೆ.ಆರ್.ಪುರಂ ಚಿಕ್ಕಬಸವನಪುರ ನಿವಾಸಿ ನಾರಾಯಣ್ ಗೆ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಬಿಲ್ಡರ್ ಕಾರ್ತೀಕ್‌ ರೆಡ್ಡಿ ಅಂಡ್ ಗ್ಯಾಂಗ್ ನಾರಾಯಣ್ ಅವರ ಮನೆ ಮುಂದೆ ಬಿಯರ್ ಬಾಟಲ್ ಹೊಡೆದು ದಾಂದಲೇ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಮನೆ ಮುಂಭಾಗದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಈ ಆರೋಪಿಗಳು ಪ್ರಭಾವಿ ರಾಜಾಕಾರಣಿಯ ಜೊತೆ ಗುರುತಿಸಿಕೊಂಡಿದ್ದಾರೆ. ಸರ್ಕಾರಿ ಜಮೀನು ಮಾರಾಟಕ್ಕೆ ಯತ್ನಿಸಿದ್ದರ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ದೂರುದಾರ ನಾರಾಯಣ ಮನೆ ಸಮೀಪ ಇರುವ ಜಮೀನು ಮಾರಾಟಕ್ಕೆ ಬಿಲ್ಡರ್ ಕಾರ್ತೀಕ್‌ ರೆಡ್ಡಿ ಯತ್ನಿಸಿದ್ದ. ಈ ವೇಳೆ ನಾರಾಯಣ್, ಕಾರ್ತೀಕ್‌ ರೆಡ್ಡಿ ಮಾರಾಟಕ್ಕೆ ಯತ್ನಿಸಿದ್ದ ಜಮೀನನಲ್ಲಿ ಒಂದು ಎಕರೆ ಸರ್ಕಾರಿ ಜಮೀನಿನ ಮಾಹಿತಿ ನೀಡಿದ್ದರು. ಹೀಗಾಗಿ ಕಾರ್ತೀಕ್ ರೆಡ್ಡಿ ಅಂಡ್ ಗ್ಯಾಂಗ್ ಅವರ ಮನೆಯ ಮುಂದೆ ದಾಂದಲೆ ನಡೆಸಿದ್ದಾರೆ. ಕಾರ್ತೀಕ್ ರೆಡ್ಡಿ ಅಂಡ್ ಗ್ಯಾಂಗ್ ವಿರುದ್ಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 8:22 am, Sun, 6 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ