AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ

ಬೆಂಗಳೂರಿನ ಟೆಕ್ಕಿ ಪಂಕಜ್ ತನ್ವರ್ ಅವರು ಕೃತಕ ಬುದ್ಧಿಮತ್ತೆ (AI) ಆಧಾರಿತ ಹೆಲ್ಮೆಟ್ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಂಚಾರ ನಿಯಮ ಉಲ್ಲಂಘಿಸುವವರನ್ನು ನೈಜ ಸಮಯದಲ್ಲಿ ಪತ್ತೆಹಚ್ಚಿ, ಅವರ ವಾಹನ ವಿವರಗಳನ್ನು ಪೊಲೀಸರಿಗೆ ತಕ್ಷಣವೇ ರವಾನಿಸುತ್ತದೆ. ಈ ವೈರಲ್ ಆವಿಷ್ಕಾರವು ನಗರದ ಸಂಚಾರ ಶಿಸ್ತು ಸುಧಾರಿಸಲು ಸಹಾಯಕವಾಗಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ಗಳಿಸಿದೆ. ಸರ್ಕಾರ ಇದನ್ನು ಅಳವಡಿಸಿಕೊಳ್ಳುವಂತೆ ಹಲವರು ಸಲಹೆ ನೀಡಿದ್ದಾರೆ.

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ
ವೈರಲ್​​ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on: Jan 05, 2026 | 10:19 AM

Share

ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು  ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್​​ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್​​ನ್ನು (AI helmet) ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ನಾನು ಪ್ರತಿದಿನ ಕೆಲವೊಂದು ಜನ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚಾರ ಮಾಡುವುದನ್ನು ನೋಡಿದ್ದೇನೆ. ಇದನ್ನು ನೋಡಿ ನೋಡಿ ಸಾಕಾಗಿದೆ. ಅದಕ್ಕಾಗಿ ನನ್ನ ಹೆಲ್ಮೆಟ್​​ನ್ನು ಎಐ ಸಾಧನವಾಗಿ ಪರಿವರ್ತನೆ ಮಾಡಿ, ಈ ಮೂಲಕ ಪೊಲೀಸರಿಗೆ ಸಂಚಾರ ನಿಯಮ ಉಲ್ಲಂಘಿಸಿದವರ ಮಾಹಿತಿ ನೀಡಲು ಸಹಾಯವಾಗುತ್ತದೆ ಎಂದು ಪಂಕಜ್ ತನ್ವರ್ ತನ್ನ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಎಐ ತಂತ್ರಜ್ಞಾನ ನೈಜ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಹಾಗೂ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದವರ ವಾಹನ ಹಾಗೂ ಮುಖವನ್ನು ಸೆರೆಹಿಡಿಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ?

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

ಈ ಸಾಧನವೂ ಸ್ಥಳ ಮತ್ತು ನಂಬರ್ ಪ್ಲೇಟ್‌ನೊಂದಿಗೆ ನೇರವಾಗಿ ಪೊಲೀಸರಿಗೆ ಸಂಪರ್ಕವನ್ನು ಸಾಧಿಸುತ್ತದೆ. ಬೆಂಗಳೂರಿನ ಜನರೇ, ಈಗ ಸುರಕ್ಷಿತವಾಗಿ ಸವಾರಿ ಮಾಡಿ ಎಂದು ಈ ಪೋಸ್ಟ್​​ನಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್​​ ಓಡಿಸುವವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಕೂಡ ಕಮೆಂಟ್​ ಮಾಡಿದ್ದಾರೆ. ಈ ಪೋಸ್ಟ್​ 1.5 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಇದೊಂದು ಉತ್ತಮ ತಂತ್ರಜ್ಞಾನ ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ಇಂತಹ ತಂತ್ರಜ್ಞಾನಗಳು ಬರಬೇಕು. ಇದನ್ನು ಸರ್ಕಾರ ಬಳಸಿಕೊಂಡು ಸಂಚಾರ ನಿಮಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಶಬರಿಮಲೆಗೆ ಮಹಿಳೆಯರ ಪ್ರವೇಶ: ಏ. 7ರಿಂದ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ
ಬಾಯ್ಕಾಟ್ ಮಾಡಿದ್ರೆ ಇಷ್ಟೊಂದು ಅವಮಾನ ಆಗ್ತಿರಲಿಲ್ಲ: ಪಾಕ್ ಕ್ರಿಕೆಟಿಗ