AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 196ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿದ್ದು, ಮನೆಯಿಂದ ಹೊರಬರುವ ಮೊದಲು ಮುಂಜಾಗೃತಾ ಕ್ರಮ ವಹಿಸುವಂತೆ ತಜ್ಞರು ಹೇಳಿದ್ದಾರೆ.

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ!
ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ!
ಭಾವನಾ ಹೆಗಡೆ
|

Updated on: Dec 21, 2025 | 8:16 AM

Share

ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ ಗಾಳಿ

ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 112ಕ್ಕೆ ತಲುಪಿದ್ದು, PM10 ಪ್ರಮಾಣ 155ಕ್ಕೆ ಇಳಿದಿದೆ. ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಕಳೆದ ನಾಲ್ಕು ವರ್ಷದಲ್ಲಿ ಈ ವರ್ಷವೇ ಬೆಂಗಳೂರಿನ ಹವೆ ಇಷ್ಟರ ಮಟ್ಟಿಗೆ ಹದಗೆಟ್ಟಿದೆ.

ಮುನ್ನೆಚ್ಚರಿಕೆ ವಹಿಸಲು ಸೂಚನೆ

ನಿನ್ನೆ ಬೆಳಗ್ಗೆ 7 ಗಂಟೆಯ ಹೊತ್ತಿಗೆ 200 ರಷ್ಟಿದ್ದ ಏರ್ ಕ್ವಾಲಿಟಿ ಸಧ್ಯಕ್ಕೆ 190ಕ್ಕಿಳಿದಿದೆ. ಈ ಎರಡು ದಿನಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಹೆಚ್ಚಿನ ಏರಿಳಿತವಾಗುತ್ತಿದ್ದು, ಪರಿಸ್ಥಿತಿ ಇನ್ನೂ ಹದಗೆಡುವ ಸಾಧ್ಯತೆ ಇದೆ. 150ಕ್ಕಿಂತ ಜಾಸ್ತಿ ಹದಗೆಟ್ಟ ಗಾಳಿಯ ಸೇವನೆಯಿಂದ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಎದುರಾಗಲಿದ್ದು, ಮನೆಯಿಂದ ಹೊರ ಬೀಳುವಾಗ ಆದಷ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index):

  • ಬೆಂಗಳೂರು –196
  • ಮಂಗಳೂರು – 157
  • ಮೈಸೂರು – 112
  • ಬೆಳಗಾವಿ – 163
  • ಕಲಬುರ್ಗಿ – 137
  • ಶಿವಮೊಗ್ಗ – 84
  • ಬಳ್ಳಾರಿ – 196
  • ಹುಬ್ಬಳ್ಳಿ- 97
  • ಉಡುಪಿ – 124
  • ವಿಜಯಪುರ –96

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ