AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂಕಕಾರಿ ಹಂತದಲ್ಲಿಯೇ ಇದ್ದು, ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ಸಲಹೆ ನೀಡಿದ್ದಾರೆ.

Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!
ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ!
ಭಾವನಾ ಹೆಗಡೆ
|

Updated on: Jan 25, 2026 | 8:14 AM

Share

ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ.

ಬೆಂಗಳೂರಿನ ಏರ್ ಕ್ವಾಲಿಟಿ 144 ಇದ್ದು, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಂದಿನ ಮಟ್ಟಿಗೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಆದರೂ ಇಂದಿಗೂ ಗಾಳಿಯು ಕಲುಷಿತವಾಗಿಯೇ ಇದ್ದು, ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –144
  • ಮಂಗಳೂರು-157
  • ಮೈಸೂರು –127
  • ಬೆಳಗಾವಿ – 96
  • ಕಲಬುರ್ಗಿ-136
  • ಶಿವಮೊಗ್ಗ – 162
  • ಬಳ್ಳಾರಿ – 164
  • ಹುಬ್ಬಳ್ಳಿ- 154
  • ಉಡುಪಿ –150
  • ವಿಜಯಪುರ –141

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ