ಬೆಂಗಳೂರು ವಾಯು ಮಾಲಿನ್ಯಕ್ಕೆ ಇದುವೇ ಮುಖ್ಯ ಕಾರಣ! ಸಂಶೋಧನೆಯಲ್ಲಿ ತಿಳಿದುಬಂದಿದ್ದೇನು ನೋಡಿ

ಬೆಂಗಳೂರಿನ ವಾಯುಮಾಲಿನ್ಯದಲ್ಲಿ ಸಾರಿಗೆ ವಲಯದ ಪ್ರಮುಖ ಪಾತ್ರವನ್ನು ಇತ್ತೀಚಿನ ಅಧ್ಯಯನ ಬಹಿರಂಗಪಡಿಸಿದೆ. ಟ್ರಕ್‌ಗಳು ಮತ್ತು ವಾಣಿಜ್ಯ ವಾಹನಗಳು ಹೆಚ್ಚಿನ PM 2.5 ಕಣಗಳನ್ನು ಹೊರಸೂಸುತ್ತಿವೆ ಎಂದು ಕಂಡುಬಂದಿದೆ. ಕೈಗಾರಿಕೆಗಳಿಂದಲೂ ಮರ ಮತ್ತು ಕಲ್ಲಿದ್ದಲು ಸುಡುವಿಕೆಯಿಂದ ಮಾಲಿನ್ಯ ಉಂಟಾಗುತ್ತಿದೆ. ಅಧ್ಯಯನವು 80 ಮಾಲಿನ್ಯ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿದೆ.

ಬೆಂಗಳೂರು ವಾಯು ಮಾಲಿನ್ಯಕ್ಕೆ ಇದುವೇ ಮುಖ್ಯ ಕಾರಣ! ಸಂಶೋಧನೆಯಲ್ಲಿ ತಿಳಿದುಬಂದಿದ್ದೇನು ನೋಡಿ
ಸಾಂದರ್ಭಿಕ ಚಿತ್ರImage Credit source: Getty Images
Follow us
|

Updated on: Oct 26, 2024 | 9:35 AM

ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನಲ್ಲಿ ಒಟ್ಟು ವಾಯು ಮಾಲಿನ್ಯ ಪ್ರಮಾಣದಲ್ಲಿ ಹೆಚ್ಚಿನ ಪಾಲು ಸಾರಿಗೆ ಕ್ಷೇತ್ರದ್ದೇ ಇರುವುದು ತಿಳಿದುಬಂದಿದೆ. ಟ್ರಕ್‌ಗಳು ಮತ್ತು ವಾಣಿಜ್ಯ ವಾಹನಗಳು ಬೆಂಗಳೂರಿನಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯಕಾರಕಗಳಾಗಿವೆ. ಇವುಗಳಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ 39 ರಷ್ಟು PM 2.5 ಕಣಗಳ ಹೊರಸೂಸುವಿಕೆ ಆಗುತ್ತಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 48 ರಷ್ಟು ಮಾಲಿನ್ಯವಾಗುತ್ತಿದೆ.

ಕಡಿಮೆ ಮಾಲಿನ್ಯಕಾರಕ ಪರ್ಯಾಯ ಇಂಧನಗಳ ಲಭ್ಯತೆಯ ಹೊರತಾಗಿಯೂ ಮರ ಮತ್ತು ಕಲ್ಲಿದ್ದಲನ್ನು ಸುಡುವ ಮೂಲಕ ಕೈಗಾರಿಕೆಗಳು ಕೂಡ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿವೆ ಎಂಬುದು ಅಧ್ಯಯನ ವರದಿಯೊಂದರಿಂದ ಬಹಿರಂಗವಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್‌ನ ಸ್ಕೂಲ್ ಆಫ್ ನ್ಯಾಚುರಲ್ ಸೈನ್ಸಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರೊ. ಗುಫ್ರಾನ್ ಬೀಗ್ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸಲಾಗಿತ್ತು. PM 2.5 ಕಣಗಳ ಹೊರಸೂಸುವಿಕೆ ಬಗ್ಗೆ ಸಂಶೋಧಕರು ಹಲವಾರು ತಿಂಗಳುಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದ್ದಾರೆ.

ಮೊದಲ ಬಾರಿಗೆ, ನಾವು ಅಲ್ಟ್ರಾ ಫೈನ್ ರೆಸಲ್ಯೂಶನ್​ನ (200 ಚದರ ಮೀಟರ್ ಗ್ರಿಡ್‌ಗಳು) 80 ಮಾಲಿನ್ಯ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿದ್ದೇವೆ. ಈ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮುಖ ಮೂಲಗಳ ಪತ್ತೆ ಮಾಡಲಾಗಿದೆ. ಸಾರಿಗೆ ವಲಯವು ಅತಿದೊಡ್ಡ ಮಾಲಿನ್ಯಕಾರಕವಾಗಿದೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ ಎಂದು ಬೀಗ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ತಿಳಿಸಿದೆ. ಅಧ್ಯಯನಕ್ಕೆ ಸಂಶೋಧಕರು ಹೈಬ್ರಿಡ್ ಮಾದರಿಯನ್ನು ಅಳವಡಿಸಿಕೊಂಡಿದ್ದರು.

ವಾಯು ಮಾಲಿನ್ಯದ ಅಧ್ಯಯನ ಹೇಗೆ?

ಮಾಲಿನ್ಯಕಾರಕ ಅಂಶಗಳ ಬಗ್ಗೆ ಸಿಸಿಟಿವಿ ಕ್ಯಾಮರಾ ದೃಶ್ಯಗಳು, ಡ್ರೋನ್‌ಗಳ ಫೋಟೋ, ವೀಡಿಯೊ ಕ್ಲಿಪ್‌ಗಳನ್ನು ಬಳಸಿಕೊಂಡು ಅವುಗಳನ್ನು ಕೃತಕ ಬುದ್ಧಿಮತ್ತೆ ಮತ್ತು ತಾಂತ್ರಿಕ ಸಾಧನಗಳೊಂದಿಗೆ ವಿಶ್ಲೇಷಿಸಲಾಗಿದೆ. ಫಲಿತಾಂಶಗಳು ಬೆಂಗಳೂರಿನ ಗಾಳಿಯ ಗುಣಮಟ್ಟದ ಬಗ್ಗೆ ಸಂಪೂರ್ಣ ಚಿತ್ರಣವನ್ನು ನೀಡಿವೆ ಎಂದು ವರದಿ ಉಲ್ಲೇಖಿಸಿದೆ.

ಅವಧಿ ಮೀರಿದ ವಾಹನ, ಕಳಪೆ ನಿರ್ವಹಣೆ ಕಾರಣ

ಒಟ್ಟು ವಾಯು ಮಾಲಿನ್ಯದ ಅರ್ಧದಷ್ಟು ಸಾರಿಗೆ ವಲಯದ PM 2.5 ಹೊರಸೂಸುವಿಕೆಯಿಂದಲೇ ಆಗುತ್ತಿದೆ. ಇದಕ್ಕೆ ವಾಹನಗಳ ಕಳಪೆ ನಿರ್ವಹಣೆ ಅಥವಾ ಅವಧಿ ಮೀರಿದ ವಾಹನಗಳ ಬಳಕೆಯೂ ಕಾರಣದಿಂದಾಗಿರಬಹುದು. ಕಾರುಗಳು ಮತ್ತು ಎಸ್​​ಯುವಿಗಳಿಂದ ಹೆಚ್ಚು ಮಾಲಿನ್ಯ ಸಂಭವಿಸುತ್ತಿದೆ ಶೇ 22 ರಷ್ಟು ಪಾಲು ದ್ವಿಚಕ್ರ ವಾಹನಗಳದ್ದಾಗಿದೆ. ಆದರೆ, PM 2.5 ಕಣಗಳ ಸೂಸುವಿಕೆಗೆ ಅವುಗಳ ನೇರ ಕೊಡುಗೆ ಕಡಿಮೆಯಾಗಿದೆ. ಆದರೆ, ಇವುಗಳು ಸಂಚಾರ ದಟ್ಟಣೆಯನ್ನು ಉಂಟುಮಾಡುತ್ತವೆ. ಪರಿಣಾಮವಾಗಿ ಇತರ ವಾಹನಗಳಿಂದ ಹೊರಸೂಸುವಿಕೆ ಹೆಚ್ಚಾಗುತ್ತಿದೆ ಎಂದು ಬೀಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲಿ ಬೆಂಗಳೂರಿನಲ್ಲೂ ಉಬರ್​ ಷಟಲ್​ ಬಸ್​ ಸೇವೆ ಆರಂಭ!

ಬಾಯ್ಲರ್​​ಗಳಲ್ಲಿನ ಇಂಧನದ ಆಯ್ಕೆಯಿಂದ ಕೈಗಾರಿಕಾ ಮಾಲಿನ್ಯ ಉಂಟಾಗುತ್ತದೆ ಎಂದು ಅಧ್ಯಯನ ಹೇಳಿದೆ. ಕೈಗಾರಿಕೆಗಳು ಒಟ್ಟಾರೆ PM 2.5 ರ ಶೇಕಡಾ 24 ರಷ್ಟು ಹೊರಸೂಸುತ್ತವೆ. ಮುಖ್ಯವಾಗಿ ಜಿಲ್ಲೆಯ 19 ಶೇಕಡಾ ಕೈಗಾರಿಕೆಗಳಿಂದ ಮರ ಮತ್ತು ಕಲ್ಲಿದ್ದಲು ಸುಡುವಿಕೆಯಿಂದಾಗಿ ಸಂಭವಿಸುತ್ತಿದೆ. ಇದು PM 10 ರ ಹೆಚ್ಚಿನ ಹೊರಸೂಸುವಿಕೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್