AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್​ ಅಡ್ಡೆ ಮೇಲೆ ದಾಳಿ; 750ಕ್ಕೂ ಹೆಚ್ಚು ಸಿಲಿಂಡರ್​ ವಶ

ನಗರದ ಬಿಟಿಎಂ ಲೇಔಟ್​​​ನ 2ನೇ ಹಂತದಲ್ಲಿರುವ ಗ್ಯಾಸ್​​​ ಫಿಲ್ಲಿಂಗ್​ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ವಿವಿಧ ಕಂಪನಿಗಳಿಗೆ ಸೇರಿದ 750ಕ್ಕೂ ಹೆಚ್ಚು ಸಿಲಿಂಡರ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್​ ಅಡ್ಡೆ ಮೇಲೆ ದಾಳಿ; 750ಕ್ಕೂ ಹೆಚ್ಚು ಸಿಲಿಂಡರ್​ ವಶ
ಅಕ್ರಮ ಗ್ಯಾಸ್​ ಅಡ್ಡೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: Mar 22, 2023 | 8:34 AM

Share

ಬೆಂಗಳೂರು: ನಗರದ ಬಿಟಿಎಂ ಲೇಔಟ್​​​ನ 2ನೇ ಹಂತದಲ್ಲಿರುವ ಗ್ಯಾಸ್​​​ ಫಿಲ್ಲಿಂಗ್​ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ವಿವಿಧ ಕಂಪನಿಗಳಿಗೆ ಸೇರಿದ 750ಕ್ಕೂ ಹೆಚ್ಚು ಸಿಲಿಂಡರ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಅನಧಿಕೃತವಾಗಿ ಖಾಲಿ ನಿವೇಶನದಲ್ಲಿ ಶೆಡ್​​​ ಹಾಕಿಕೊಂಡು, ಕಳ್ಳತನ ಮಾಡಿಕೊಂಡು ತಂದ ಸಿಲಿಂಡರ್​​ಗಳಿಗೆ ಜ್ಯೋತಿ, ಗೋ ಗ್ಯಾಸ್ ಏಜೆನ್ಸಿಗಳು ಗ್ಯಾಸ್​​​​ ರೀ ಫಿಲ್ಲಿಂಗ್​ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು 750ಕ್ಕೂ ಅಧಿಕ ಸಿಲಿಂಡರ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಸ್ವಾಮ್ಯದ ವಿವಿಧ ಕಂಪನಿಯ 75 ಸಿಲಿಂಡರ್​, ಗೋಗ್ಯಾಸ್, ಜ್ಯೋತಿ ಸೇರಿದಂತೆ ಇತರೆ ಕಂಪನಿಯ 694 ಸಿಲಿಂಡರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕಾರ್ಯಾಚರಣೆ ವೇಳೆ 35 ಲಕ್ಷ ಮೌಲ್ಯದ 75 ರೀಫಿಲ್ಲಿಂಗ್ ರಾಡ್, ಕಂಪ್ರೆಸ್ಸರ್, ಪೈಪ್, ತೂಕದ ಯಂತ್ರಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಇಂಡಿಯನ್, ಭಾರತ್, ಹೆಚ್​.ಪಿ ಕಂಪನಿಯ ಸಿಲಿಂಡರ್​ಗಳೆಂದು ಜನರಿಗೆ ನಂಬಿಸಿ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ 2 ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ತಂಬಾಕು ಜಪ್ತಿ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಕೊಪ್ಪಳ ರಸ್ತೆಯ ಚೆಕ್​ಪೋಸ್ಟ್​​ ಬಳಿ 1.84 ಲಕ್ಷ ಮೌಲ್ಯದ ತಂಬಾಕನ್ನ ಜಪ್ತಿ ಮಾಡಲಾಗಿದ್ದು ಶಿರಾಜ್ ನಾಗರಕಟ್ಟಿ ಎಂಬಾತನನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಇತ ಗದಗದಿಂದ ಕೊಪ್ಪಳ ಕಡೆಗೆ ಹೊರಟ್ಟಿದ್ದ 407 ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುವ ವೇಳೆ ವಶಕ್ಕೆ ಪಡೆಯಲಾಗಿದೆ. ಇನ್ನು ಜಿಲ್ಲೆಯಲ್ಲಿ ಇದೇ ರೀತಿ ಮತ್ತೊಂದು ಪ್ರಕರಣವನ್ನ ಪೊಲೀಸರು ಹಿಡಿದಿದ್ದಾರೆ. ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚಕ್ ಪೋಸ್ಟ್ ನಲ್ಲಿ 1 ಲಕ್ಷ 10 ಸಾವಿರ ಮೌಲ್ಯದ ತಂಬಾಕನ್ನ ಜಪ್ತಿ ಮಾಡಿದ್ದಾರೆ. ರಾಣೆಬೆನ್ನೂರಿನಿಂದ ಶಿರಹಟ್ಟಿ ಕಡೆಗೆ ಸಾಗಿಸಲಾಗುತ್ತಿದ್ದ ಅಕ್ರಮ ತಂಬಾಕನ್ನ ಜಪ್ತಿ ಮಾಡಿದ್ದು, ಶ್ಯಾಮ ನವಲೆ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್ ನೇಮಗೌಡ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶಿರಹಟ್ಟಿ ಹಾಗೂ ಮುಂಡರಗಿ ಠಾಣೆಗಳಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು ತಂದಿರಿಸಿದ್ದ ಫುಡ್ ಕಿಟ್ ಸೀಜ್ ಮಾಡಿದ ಪೊಲೀಸ್​

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ