AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್​ ಅಡ್ಡೆ ಮೇಲೆ ದಾಳಿ; 750ಕ್ಕೂ ಹೆಚ್ಚು ಸಿಲಿಂಡರ್​ ವಶ

ನಗರದ ಬಿಟಿಎಂ ಲೇಔಟ್​​​ನ 2ನೇ ಹಂತದಲ್ಲಿರುವ ಗ್ಯಾಸ್​​​ ಫಿಲ್ಲಿಂಗ್​ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ವಿವಿಧ ಕಂಪನಿಗಳಿಗೆ ಸೇರಿದ 750ಕ್ಕೂ ಹೆಚ್ಚು ಸಿಲಿಂಡರ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್​ ಅಡ್ಡೆ ಮೇಲೆ ದಾಳಿ; 750ಕ್ಕೂ ಹೆಚ್ಚು ಸಿಲಿಂಡರ್​ ವಶ
ಅಕ್ರಮ ಗ್ಯಾಸ್​ ಅಡ್ಡೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: Mar 22, 2023 | 8:34 AM

Share

ಬೆಂಗಳೂರು: ನಗರದ ಬಿಟಿಎಂ ಲೇಔಟ್​​​ನ 2ನೇ ಹಂತದಲ್ಲಿರುವ ಗ್ಯಾಸ್​​​ ಫಿಲ್ಲಿಂಗ್​ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ವಿವಿಧ ಕಂಪನಿಗಳಿಗೆ ಸೇರಿದ 750ಕ್ಕೂ ಹೆಚ್ಚು ಸಿಲಿಂಡರ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಅನಧಿಕೃತವಾಗಿ ಖಾಲಿ ನಿವೇಶನದಲ್ಲಿ ಶೆಡ್​​​ ಹಾಕಿಕೊಂಡು, ಕಳ್ಳತನ ಮಾಡಿಕೊಂಡು ತಂದ ಸಿಲಿಂಡರ್​​ಗಳಿಗೆ ಜ್ಯೋತಿ, ಗೋ ಗ್ಯಾಸ್ ಏಜೆನ್ಸಿಗಳು ಗ್ಯಾಸ್​​​​ ರೀ ಫಿಲ್ಲಿಂಗ್​ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು 750ಕ್ಕೂ ಅಧಿಕ ಸಿಲಿಂಡರ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಸ್ವಾಮ್ಯದ ವಿವಿಧ ಕಂಪನಿಯ 75 ಸಿಲಿಂಡರ್​, ಗೋಗ್ಯಾಸ್, ಜ್ಯೋತಿ ಸೇರಿದಂತೆ ಇತರೆ ಕಂಪನಿಯ 694 ಸಿಲಿಂಡರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕಾರ್ಯಾಚರಣೆ ವೇಳೆ 35 ಲಕ್ಷ ಮೌಲ್ಯದ 75 ರೀಫಿಲ್ಲಿಂಗ್ ರಾಡ್, ಕಂಪ್ರೆಸ್ಸರ್, ಪೈಪ್, ತೂಕದ ಯಂತ್ರಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಇಂಡಿಯನ್, ಭಾರತ್, ಹೆಚ್​.ಪಿ ಕಂಪನಿಯ ಸಿಲಿಂಡರ್​ಗಳೆಂದು ಜನರಿಗೆ ನಂಬಿಸಿ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ 2 ಪ್ರಕರಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ತಂಬಾಕು ಜಪ್ತಿ

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಕೊಪ್ಪಳ ರಸ್ತೆಯ ಚೆಕ್​ಪೋಸ್ಟ್​​ ಬಳಿ 1.84 ಲಕ್ಷ ಮೌಲ್ಯದ ತಂಬಾಕನ್ನ ಜಪ್ತಿ ಮಾಡಲಾಗಿದ್ದು ಶಿರಾಜ್ ನಾಗರಕಟ್ಟಿ ಎಂಬಾತನನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ಇತ ಗದಗದಿಂದ ಕೊಪ್ಪಳ ಕಡೆಗೆ ಹೊರಟ್ಟಿದ್ದ 407 ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುವ ವೇಳೆ ವಶಕ್ಕೆ ಪಡೆಯಲಾಗಿದೆ. ಇನ್ನು ಜಿಲ್ಲೆಯಲ್ಲಿ ಇದೇ ರೀತಿ ಮತ್ತೊಂದು ಪ್ರಕರಣವನ್ನ ಪೊಲೀಸರು ಹಿಡಿದಿದ್ದಾರೆ. ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಚಕ್ ಪೋಸ್ಟ್ ನಲ್ಲಿ 1 ಲಕ್ಷ 10 ಸಾವಿರ ಮೌಲ್ಯದ ತಂಬಾಕನ್ನ ಜಪ್ತಿ ಮಾಡಿದ್ದಾರೆ. ರಾಣೆಬೆನ್ನೂರಿನಿಂದ ಶಿರಹಟ್ಟಿ ಕಡೆಗೆ ಸಾಗಿಸಲಾಗುತ್ತಿದ್ದ ಅಕ್ರಮ ತಂಬಾಕನ್ನ ಜಪ್ತಿ ಮಾಡಿದ್ದು, ಶ್ಯಾಮ ನವಲೆ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್ ನೇಮಗೌಡ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶಿರಹಟ್ಟಿ ಹಾಗೂ ಮುಂಡರಗಿ ಠಾಣೆಗಳಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು ತಂದಿರಿಸಿದ್ದ ಫುಡ್ ಕಿಟ್ ಸೀಜ್ ಮಾಡಿದ ಪೊಲೀಸ್​

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?