AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಸವನಗುಡಿ ಕಡಲೆಕಾಯಿ ಪರಿಷೆ ಇತಿಹಾಸ, ಕಾರ್ತಿಕ ಮಾಸದಲ್ಲೇ ನಡೆಯಲು ಕಾರಣವೇನು? ಇಲ್ಲಿದೆ ಮಾಹಿತಿ

ಬಸವನಗುಡಿಯ ದೊಡ್ಡ ಬಸವನ ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಕಡಲೆಕಾಯಿ ಪರಿಷೆ (ಜಾತ್ರೆ)ಯ ಇತಿಹಾಸ ಮತ್ತು ಈ ಬಾರಿಯ ವಿಶೇಷತೆ ಇಲ್ಲಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಯಲ್ಲಿ ವಿವಿಧ ಬಗೆಯ ಕಡಲೆಕಾಯಿಗಳು ದೊರೆಯುತ್ತವೆ. ಈ ವರ್ಷದ ಕಡಲೆಕಾಯಿ ಬೆಲೆಗಳು ಮತ್ತು ಜಾತ್ರೆಯ ಆರಂಭ ದಿನಾಂಕಗಳ ಬಗ್ಗೆಯೂ ಮಾಹಿತಿ ಇದೆ.ಜಾತ್ರೆಯ ಮೂಲ ಮತ್ತು ಅದರ ಸಂಪ್ರದಾಯಿಕ ಮಹತ್ವವನ್ನು ಸಹ ಲೇಖನ ತಿಳಿಸುತ್ತದೆ.

ಬೆಂಗಳೂರು ಬಸವನಗುಡಿ ಕಡಲೆಕಾಯಿ ಪರಿಷೆ ಇತಿಹಾಸ, ಕಾರ್ತಿಕ ಮಾಸದಲ್ಲೇ ನಡೆಯಲು ಕಾರಣವೇನು? ಇಲ್ಲಿದೆ ಮಾಹಿತಿ
ಕಡಲೆಕಾಯಿ ಪರಿಷೆ
Follow us
ವಿವೇಕ ಬಿರಾದಾರ
|

Updated on:Nov 25, 2024 | 11:30 AM

ಬೆಂಗಳೂರು, ನವೆಂಬರ್​ 25: ಪ್ರತಿವರ್ಷ ಕಾರ್ತಿಕ ಮಾಸದ (Kartika Masa) ಕೊನೆ ಸೋಮವಾರದಿಂದ ಎರಡು ದಿನಗಳ ಕಾಲ ಬಸವನಗುಡಿಯ (Basavangudi) ದೊಡ್ಡ ಬಸವನ ದೇವಸ್ಥಾನದ ಹತ್ತಿರ ಕಡಲೆಕಾಯಿ ಪರಿಷೆ (ಜಾತ್ರೆ) (Kadalekai Parishe) ನಡೆಯುತ್ತದೆ. ಬಸವನಗುಡಿಯಲ್ಲಿ ನೂರಾರು ವರ್ಷಗಳಿಂದ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಈ ಬಾರಿಯ ಕಡಲೆಕಾಯಿ ಪರಿಷೆ ಸೋಮವಾರ (ನ.25) ಇಂದಿನಿಂದ ಆರಂಭವಾಗಿದೆ. ಆದರೆ, ಎಂದಿನಂತೆ ಎರಡು ದಿನಕ್ಕೆ ಮುಂಚಿತವಾಗಿಯೇ ಸಡಗರ ಶುರುವಾಗಿದೆ.

ಈ ಬಾರಿಯ ಬಸವನಗುಡಿಯ ಕಡಿಲೆಕಾಯಿ ಪರಿಷೆಯಲ್ಲಿ 10 ಬಗೆಯ ಬಗೆಯ ಕಡಲೆಕಾಯಿಗಳು ಬಂದಿವೆ. ಕೋಲಾರ, ತಮಿಳುನಾಡು, ಚಿಕ್ಕಬಳ್ಳಾಪುರ, ಆಂಧ್ರ ಪ್ರದೇಶ, ಸೇರಿದಂತೆ ವಿವಿಧೆಡೆಯಿಂದ ರೈತರು ಬಂದಿದ್ದು, ನಾಟಿ, ಫಾರಂ, ಬೋಂಡಾ ಹಾಗೂ ಬಾದಮಿ ಕಡಲೆಕಾಯಿಗಳು ಪ್ರಮುಖ ಆಕರ್ಷಣೆಯಾಗಿವೆ.

ಆದರೆ, ಬೆಲೆ ಕೊಂಚ ಜಾಸ್ತಿಯಾಗಿದೆ. ಬಾದಾಮಿ ಕಡಲೆಕಾಯಿ – ಸೇರಿಗೆ 50 ರೂ., ಬೋಂಡಾಕಾಯಿ – 70 ರೂ., ನಾಟಿ ಕಡಲೆಕಾಯಿ – 60 ರೂ. ಫಾರಂ‌ಕಡಲೆಕಾಯಿ – 70 ರೂ. ಇದೆ.

ಕಡಲೆಕಾಯಿ ಪರಿಷೆಗೆ ಕಾರಣ

ಹಿಂದಿನ ಕಾಲದಲ್ಲಿ ಬಸವನಗುಡಿಯಲ್ಲಿ ಸಾಕಷ್ಟು ಕಡಲೆಕಾಯಿ (ಶೇಂಗಾ) ಬೆಳೆಯುತ್ತಿದ್ದರು. ಸಮೃದ್ಧವಾಗಿ ಬೆಳೆದು ಕಡಲೆಕಾಯಿ ಕಟಾವಿಗೆ ಸಿದ್ಧವಾದ ಸಂದರ್ಭದಲ್ಲಿ ತೋಟಕ್ಕೆ ಬಸವ (ನಂದಿ) ನುಗ್ಗಿ ಬೆಳೆ ನಾಶಪಡಿಸುತ್ತಿತ್ತು. ಇದರಿಂದ, ರೈತರಿಗೆ ಅಪಾರ ನಷ್ಟವಾಗುತ್ತಿತ್ತು. ಇದರಿಂದ ಪರಿಹಾರ ಕಂಡುಕೊಳ್ಳಲು ರೈತರು ನಂದಿ ದೇವ (ಬಸವಣ್ಣ)ನ ಮೊರೆ ಹೋದರು.

ಹೌದು, ರೈತರು ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಲು ಆರಂಭಿಸಿದರು. ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವಣ್ಣನಿಗೆ ಕಡಲೆಕಾಯಿ ಅರ್ಪಿಸಿ ಪ್ರಾರ್ಥಿಸಲು ಆರಂಭಿಸಿದರು. ಹೀಗೆ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬಸವನಗುಡಿಯಲ್ಲಿ ನಂದಿ ವಿಗ್ರಹವೊಂದು ದೊರಕಿತು.

ಇದನ್ನೂ ಓದಿ: ಕಳೆಗಟ್ಟಿದ ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆ, ಫೋಟೋಸ್​ ನೋಡಿ

ನಂತರ, ಈ ಸ್ಥಳದಲ್ಲಿ ನಾಡಪ್ರಭು ಕೆಂಪೇಗೌಡರು 16ನೇ ಶತಮಾನದಲ್ಲಿ ನಂದಿಯ ವಿಗ್ರಹದ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನಗುಡಿ ಅಥವಾ ಬಿಗ್​ ಬುಲ್​ ಟೆಂಪಲ್​​ ಎಂದು ಕರೆಯಲಾಗುತ್ತದೆ. ಬಳಿಕ ರೈತರು, ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ಅರ್ಪಿಸಲು ಆರಂಭಿಸಿದರು.

ಕಾರ್ತಿಕ ಮಾಸದಲ್ಲೇ ಪರಿಷೆ ಯಾಕೆ?

ಕಾರ್ತಿಕ ಮಾಸ ಶಿವನ ಆರಾಧನೆಗೆ ಸೂಕ್ತವಾದ ತಿಂಗಳು. ಕಾರ್ತಿಕ ಮಾಸದ ಸೋಮವಾರದಂದು ಶಿವನಿಗೆ ವಿಶೇಷ ಪೂಜೆಗಳು ನೆರವೇರುತ್ತವೆ. ಪ್ರತಿವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆಕಾಯಿ ಪರಿಷೆ ನಡೆಯುತ್ತದೆ. ಕಾರ್ತಿಕ ಮಾಸದ ಸೋಮವಾರವು ಭಗವಾನ್​ ಶಿವನ ನೆಚ್ಚಿನ ದಿನವಾಗಿದ್ದು, ನಂದಿಯು ಶಿವನ ವಾಹನವಾಗಿರುವುದರಿಂದ ನಂದಿಗೆ ಈ ದಿನ ಪ್ರಿಯವಾಗಿದೆ. ಆದ್ದರಿಂದ ಕಾರ್ತಿಕ ಮಾಸದಲ್ಲಿ ಸೋಮವಾರ ಕಡೆಲೆಕಾಯಿ ಪರಿಷೆ ನಡೆಯುತ್ತದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:25 am, Mon, 25 November 24

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ