AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸೈಬರ್​ಗಳಲ್ಲೂ ಇ-ಖಾತಾ ಹಂಚಿಕೆಗೆ ಬಿಬಿಎಂಪಿ ಪ್ಲಾನ್

ಇ ಖಾತಾ ವಿತರಣೆಗೆ ಹಲವು ಸರ್ಕಸ್ ನಡೆಸುತ್ತಿರುವ ಬಿಬಿಎಂಪಿ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಈಗಾಗಲೇ ಬೆಂಗಳೂರು ವನ್, ಬಿಬಿಎಂಪಿ ಕಚೇರಿಗಳಲ್ಲಿ ಇ ಖಾತಾ ನೀಡಲಾಗುತ್ತಿದ್ದು, ಇದೀಗ ಖಾಸಗಿ ಸೈಬರ್​ ಕೇಂದ್ರಗಳಲ್ಲೂ ವಿತರಣೆ ಮಾಡುವ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.

ಖಾಸಗಿ ಸೈಬರ್​ಗಳಲ್ಲೂ ಇ-ಖಾತಾ ಹಂಚಿಕೆಗೆ ಬಿಬಿಎಂಪಿ ಪ್ಲಾನ್
ಖಾಸಗಿ ಸೈಬರ್​ಗಳಲ್ಲೂ ಇ-ಖಾತಾ ಹಂಚಿಕೆಗೆ ಬಿಬಿಎಂಪಿ ಪ್ಲಾನ್
ಶಾಂತಮೂರ್ತಿ
| Edited By: |

Updated on: Jan 31, 2025 | 7:14 AM

Share

ಬೆಂಗಳೂರು, ಜನವರಿ 29: ಬೆಂಗಳೂರಿನಲ್ಲಿ ಇ-ಖಾತಾ ಸಂಕಷ್ಟ ಬಗೆಹರಿಸಲು ಬಿಬಿಎಂಪಿ ನಿತ್ಯ ಒಂದಿಲ್ಲೊಂದು ಹೊಸ ತಂತ್ರ ಹುಡುಕುತ್ತಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದ ಪಾಲಿಕೆ, ಇದೀಗ ಇ-ಖಾತಾ ಹಂಚಿಕೆಗೆ ಮತ್ತೊಂದು ಯೋಜನೆ ಜಾರಿ ಮಾಡಲು ಹೊರಟಿದೆ. ಬುಧವಾರವಷ್ಟೇ ಇ-ಖಾತಾ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣ ಪತ್ರ ಬೇಡ ಎಂದು ಆದೇಶ ಹೊರಡಿಸಿದ್ದ ಪಾಲಿಕೆ, ಇತ್ತ ಇ-ಖಾತಾಗಳನ್ನು ಸಮರ್ಪಕವಾಗಿ ತಲುಪಿಸುವುದಕ್ಕಾಗಿ ಖಾಸಗಿ ಸೈಬರ್ ಕೆಫೆಗಳಿಗೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಲು ಹೊರಟಿದೆ.

ಸದ್ಯ ಬೆಂಗಳೂರಿನಲ್ಲಿ ಆಸ್ತಿಗಳಿಗೆ ಇ-ಖಾತಾ ಕಡ್ಡಾಯ ಎಂದಿರುವ ಪಾಲಿಕೆ, ಇತ್ತೀಚೆಗಷ್ಟೇ ಬರೀ ಬಿಬಿಎಂಪಿಯ ಕಚೇರಿಗಳಷ್ಟೇ ಅಲ್ಲದೇ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಿತ್ತು. ಇದೀಗ ಅಂದುಕೊಂಡಷ್ಟು ಇ-ಖಾತಾ ಹಂಚಿಕೆ ಆಗದ ಬೆನ್ನಲ್ಲೇ ಮತ್ತೊಂದು ಕ್ರಮಕ್ಕೆ ಮುಂದಾಗಿದೆ.

ಇ-ಖಾತಾ ಹಂಚಿಕೆಗೆ ಎಷ್ಟೇ ಯೋಜನೆ ರೂಪಿಸಿದರೂ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದುದರಿಂದ ಅಲರ್ಟ್ ಆಗಿರುವ ಪಾಲಿಕೆ, ಇದೀಗ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ಹಂಚಿಕೆಗೆ ಅವಕಾಶ ನೀಡಲು ಹೊರಟಿದೆ. ಸದ್ಯ ಬೆಂಗಳೂರು ಒನ್ ಸೆಂಟರ್ ಗಳಲ್ಲಿ ಇ-ಖಾತಾ ಪಡೆಯಲು 45 ರೂಪಾಯಿ ಶುಲ್ಕ ನಿಗದಿಪಡಿಸಿದ್ದ ಪಾಲಿಕೆ, ಇದೀಗ ಸೈಬರ್ ಕೆಫೆಗಳಲ್ಲೂ ಇದೇ ಮೊತ್ತದಲ್ಲಿ ಇ-ಖಾತಾ ಹಂಚಿಕೆಗೆ ಗ್ರೀನ್ ಸಿಗ್ನಲ್ ಕೊಡಲು ಹೊರಟಿದೆ.

ಇ-ಖಾತಾ ಮೇಳ ಆಯೋಜನೆಗೆ ಬಿಬಿಎಂಪಿ ನಿರ್ಧಾರ

ಬೆಂಗಳೂರಿನಲ್ಲಿ 22 ಲಕ್ಷ ಇ-ಖಾತಾಗಳ ಪೈಕಿ ಕೇವಲ 1 ಲಕ್ಷದಷ್ಟು ಹೆಚ್ಚು ಖಾತಾ ವಿತರಣೆಯಾಗಿದ್ದು, ಇದೀಗ ಅತಿಹೆಚ್ಚು ಜನವಸತಿಪ್ರದೇಶ, ಸಂಘ-ಸಂಸ್ಥೆಗಳ ಮೂಲಕ ಇ-ಖಾತಾ ಮೇಳವನ್ನು ಆಯೋಜಿಸಲು ಕೂಡ ಪಾಲಿಕೆ ತಯಾರಿ ನಡೆಸಿದೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಬಿಬಿಎಂಪಿ ಇ ಖಾತಾ ಪಡೆಯವುದು ಹೇಗೆ? ಇಲ್ಲಿದೆ ಸರಳ ಮಾರ್ಗ !

ಸದ್ಯ ಬೆಂಗಳೂರಿನಲ್ಲಿ ಹಲವು ಆಸ್ತಿ ಮಾಲೀಕರು ಇ-ಖಾತಾ ಪಡೆಯಲು ಆಸಕ್ತಿ ತೋರದೇ ಮೌನವಾಗಿದ್ದು, ಇದೀಗ ಇ-ಖಾತಾ ನೋಂದಣಿಗೆ ಮೇಳಗಳನ್ನು ಆಯೋಜಿಸುವ ಲೆಕ್ಕಾಚಾರ ಹಾಕುತ್ತಿರುವ ಪಾಲಿಕೆಯ ಪ್ಲಾನ್ ಎಷ್ಟರಮಟ್ಟಿಗೆ ಫಲ ಕೊಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?