Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ಯಾಬ್​ಗಳು

ಬೆಂಗಳೂರಿನಲ್ಲಿ ಕ್ಯಾಬ್ ಅಗ್ರಿಗೇಟರ್‌ಗಳು ಟಿಪ್ಸ್‌ ಹೆಸರಿನಲ್ಲಿ ಅತಿಯಾದ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಓಲಾ, ಉಬರ್‌ ಸೇರಿದಂತೆ ಹಲವು ಕಂಪನಿಗಳು ಬುಕಿಂಗ್ ಶುಲ್ಕಕ್ಕೆ ಹೆಚ್ಚುವರಿಯಾಗಿ 30-50 ರೂಪಾಯಿಗಳನ್ನು ಟಿಪ್ಸ್‌ ಎಂದು ವಸೂಲಿ ಮಾಡುತ್ತಿವೆ ಎಂದು ಪ್ರಯಾಣಿಕರು ದೂರಿದ್ದಾರೆ. ಕ್ಯಾಬ್ ಚಾಲಕರಿಗೆ ಕಡಿಮೆ ದರ ನೀಡಿ, ಗ್ರಾಹಕರಿಂದ ಹೆಚ್ಚು ವಸೂಲಿ ಮಾಡುವುದನ್ನು ಖಾಸಗಿ ಸಾರಿಗೆ ಒಕ್ಕೂಟ ಖಂಡಿಸಿದೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಬೆಂಗಳೂರು ಬುಕಿಂಗ್ ಮಾಫಿಯಾ: ಟಿಪ್ಸ್ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ಯಾಬ್​ಗಳು
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on: Mar 27, 2025 | 10:27 AM

ಬೆಂಗಳೂರು, ಮಾರ್ಚ್ 27: ಅಧಿಕೃತವಾಗಿ ಬೇಕಾಬಿಟ್ಟಿ ಹಣ ವಸೂಲಿ ಮಾಡಲು ಸಾಧ್ಯವಾಗದೇ ಇರುವುದರಿಂದ ಕ್ಯಾಬ್ ಅಗ್ರಿಗೇಟರ್​​ಗಳು (Cab Aggregators) ಬೆಂಗಳೂರಿನಲ್ಲಿ ಟಿಪ್ಸ್ (Tips) ಹೆಸರಿನಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಬುಕಿಂಗ್ ದರ 40 ರೂಪಾಯಿ ಇದ್ದರೆ, ಟಿಪ್ಸ್ ಹೆಸರಿನಲ್ಲಿ ಮತ್ತೆ 30 ರಿಂದ 50 ರೂ. ವಸೂಲಿ ಮಾಡಲಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ. ಕ್ಯಾಬ್ ಅಗ್ರಿಗೇಟರ್​​ಗಳಾದ ಓಲಾ, ಊಬರ್, ನಮ್ಮ ಯಾತ್ರಿಗಳು ಈ ರೀತಿ ವಂಚನೆ ಎಸಗುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಕ್ಯಾಬ್ ಬುಕಿಂಗ್ ಮಾಡುವಾಗ ಹೆಚ್ಚುವರಿಯಾಗಿ 10 ರಿಂದ 15 ರೂಪಾಯಿ ಟಿಪ್ಸ್ ಆ್ಯಡ್ ಮಾಡದಿದ್ದರೆ ಬುಕಿಂಗ್ ಪರಿಗಣನೆಯಾಗುವುದೇ ಇಲ್ಲ ಎಂಬ ದೂರುಗಳು ಕೇಳಿಬಂದಿವೆ.

ಪೀಕ್ ಅವರ್​ನಲ್ಲಿ, ತುರ್ತು ಬೇಡಿಕೆ ಇರುವ ಸಂದರ್ಭಗಳಲ್ಲಿ ಟಿಪ್ಸ್ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಇಂತಹ ವಸೂಲಿಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಸಾರಿಗೆ ಒಕ್ಕೂಟ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ
Image
ಆಲೂಗಡ್ಡೆ ದರ ತೀವ್ರ ಕುಸಿತ: ಕೋಲ್ಡ್ ಸ್ಟೋರೇಜ್​ಗೆ ಭಾರಿ ಡಿಮ್ಯಾಂಡ್
Image
ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
Image
ಕೋವಿಡ್ ಹಗರಣದ ವಿಸ್ತೃತ ಮಾಹಿತಿಗೆ ಮತ್ತೊಂದು‌ ಸಮಿತಿ: ಅಧಿಕಾರಿಗಳಿಗೂ ಢವಢವ
Image
ದೇವೇಗೌಡ, ಹೆಚ್​ಡಿಕೆ ಆಯ್ತು, ಇನ್ನಿಬ್ಬರು ನಾಯಕರ ಭೇಟಿಗೆ ಮುಂದಾದ ಸತೀಶ್‌

ಚಾಲಕರಿಂದಲೂ ವ್ಯಕ್ತವಾಗಿತ್ತು ವಿರೋಧ

ಅಗ್ರಿಗೇಟರ್ ಕಂಪನಿಗಳು ಕ್ಯಾಬ್ ಚಾಲಕರಿಗೆ ಮೇಲೆ ಕಡಿಮೆ ದರ ನೀಡುತ್ತಿವೆ. ಇದರಿಂದ, ಅವರ ಜೀವನೋಪಾಯದ ಮೇಲೆ ನಿರಂತರವಾಗಿ ತೀವ್ರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಕರ್ನಾಟಕ ಆ್ಯಪ್ ಆಧಾರಿತ ಕಾರ್ಮಿಕರ ಒಕ್ಕೂಟ ವಿಮಾನ ನಿಲ್ದಾಣಕ್ಕೆ ಕ್ಯಾಬ್ ಸೇವೆ ಬಹಿಷ್ಕರಿಸುವ ಅಭಿಯಾನಕ್ಕೆ ಕರೆ ನೀಡಿತ್ತು.

ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ಅಗ್ರಿಗೇಟರ್ ಸೇವೆಗಳಿಗೆ ಏಕರೂಪ ಮತ್ತು ನ್ಯಾಯಯುತ ಬೆಲೆ ನಿಗದಿಗೆ ಒತ್ತಾಯಿಸಿ ಪದೇ ಪದೇ ಮನವಿ ಸಲ್ಲಿಸಿದರೂ ಯಾವುದೇ ನಿರ್ಣಾಯಕ ಕ್ರಮ ಕೈಗೊಂಡಿಲ್ಲ. ಗ್ರಾಹಕರಿಗೆ ಹೆಚ್ಚು ದರ ವಿಧಿಸಿದರೂ ಚಾಲಕರಿಗೆ ನ್ಯಾಯಯುತವಾದ ದರವನ್ನು ಕಂಪನಿಗಳು ನೀಡುತ್ತಿಲ್ಲ ಎಂದು ಒಕ್ಕೂಟ ಆರೋಪಿಸಿತ್ತು. ಅಲ್ಲದೆ, ಚಾಲಕರಿಗೆ ನ್ಯಾಯಯುತ ವೇತನ ಮತ್ತು ಸುಸ್ಥಿರ ಜೀವನೋಪಾಯ ಖಾತರಿಪಡಿಸಿಕೊಳ್ಳಲು ಸರ್ಕಾರವು ತಕ್ಷಣವೇ ಏಕರೂಪದ ಶುಲ್ಕ ಪ್ರಕಟಿಸಬೇಕು ಎಂದು ಆಗ್ರಹಿಸಿತ್ತು.

ಇದನ್ನೂ ಓದಿ: ಸಿಹಿ ಸುದ್ದಿ ನೀಡಿದ ಅಮಿತ್​​ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ಒಟ್ಟಿನಲ್ಲಿ ಒಂದೆಡೆ ಗ್ರಾಹಕರಿಂದ ಟಿಪ್ಟ್ ಹೆಸರಿನಲ್ಲಿಯೂ ದುಪ್ಪಟ್ಟು ಹಣ ವಸೂಲಿ ಮಾಡುವ ಕ್ಯಾಬ್ ಅಗ್ರಿಗೇಟರ್​​​ಗಳು ಚಾಲಕರಿಗೆ ಮಾತ್ರ ನ್ಯಾಯಯುತವಾದ ಮೊತ್ತ ನೀಡದೇ ಇರುವುದು ಬಯಲಾಗಿದೆ. ಸರ್ಕಾರ ಇನ್ನಾದರೂ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು