AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ

ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ
ಬೌರಿಂಗ್ ಆಸ್ಪತ್ರೆ
TV9 Web
| Edited By: ಆಯೇಷಾ ಬಾನು|

Updated on:Feb 06, 2023 | 11:37 AM

Share

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಕಳೆದ 2 ದಿನಗಳಿಂದ ಕರೆಂಟ್ ಕಟ್ ಆಗಿದ್ದು ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಶಿವಾಜಿನಗರದ ಬ್ರಿಟಿಷರ ಕಾಲದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ಕರೆಂಟ್ ಇಲ್ಲದೆ ಕಗ್ಗತ್ತಲಲ್ಲಿ ಮುಳುಗಿದೆ. ಸರ್ಕಾರ, ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಬಡ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೌರಿಂಗ್ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಆಗಮಿಸುತ್ತಾರೆ. ನಿತ್ಯ ಹತ್ತಾರು ಗರ್ಭಿಣಿಯರು ಹೆರಿಗೆಗಾಗಿ ಇದೇ ಆಸ್ಪತ್ರೆ ಮೇಲೆ ಅವಲಂಬಿತರಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಂದ ವಿದ್ಯುತ್​ ಬಿಲ್​ ಬಾಕಿ: ಅನುದಾನ ಕೋರಿ ಆರೋಗ್ಯ ಇಲಾಖೆ ಮುಖ್ಯ ಲೆಕ್ಕಾಧಿಕಾರಿಗೆ ಪತ್ರ

ಲಕ್ಷ ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಆಸ್ಪತ್ರೆಗಳು

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಇದ್ದರೆ, ವಿದ್ಯುತ್‌ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಹಾಗೂ ಜಯನಗರದ ಆಸ್ಪತ್ರೆ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಲೈಟ್, ಫ್ಯಾನ್, ಎಜಿಯ ಜೊತೆಗೆ ಆಕ್ಸಿಜನ್ ಘಟಕ, ವೆಂಟಿಲೇಟರ್, ಆಪರೇಷನ್ ಥಿಯೇಟರ್, ಲಿಫ್ಟ್ ಸೇರಿದಂತೆ ಇತರೆ ಬಳಕೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ಬಿಲ್ ಹಾಗೆ ಬಾಕಿ ಉಳಿದಿದೆ. ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಾರೆ. ಇಂತಹ ಸನ್ನಿವೇಶದಲ್ಲಿ ವಿದ್ಯುತ್ ಬಳಕೆ ಹೆಚ್ಚಳ ಸರ್ವೇ ಸಾಮಾನ್ಯವಾಗಿರುತ್ತೆ. ವಿದ್ಯುತ್ ಬಿಲ್ ಬಾಕಿ ಇರುವ ಪರಿಣಾಮ ಸರ್ಕಾರಕ್ಕೆ 40 ಲಕ್ಷ ಬಿಡುಗಡೆ ಕೋರಿ ಪತ್ರ ಬರೆಯಲಾಗಿದೆ‌. ಖಜಾನೆಯಿಂದ ಹಣ ಬಿಡುಗಡೆಯಾದ ಬಳಿಕ ಕೂಡಲೇ ಬಾಕಿ ವಿದ್ಯುತ್ ಬಿಲ್ ಪಾವತಿಗೊಳಿಸುವುದಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಯ ವೈಧ್ಯಾಧಿಕಾರಿ ರಾಮಕೃಷ್ಣ ತಿಳಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Mon, 6 February 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!