AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ

ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಗ್ಗತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ; ಎರಡು ದಿನಗಳಿಂದ ನೋ ಕರೆಂಟ್, ರೋಗಿಗಳ ಪರದಾಟ
ಬೌರಿಂಗ್ ಆಸ್ಪತ್ರೆ
TV9 Web
| Updated By: ಆಯೇಷಾ ಬಾನು|

Updated on:Feb 06, 2023 | 11:37 AM

Share

ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಕಳೆದ 2 ದಿನಗಳಿಂದ ಕರೆಂಟ್ ಕಟ್ ಆಗಿದ್ದು ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಶಿವಾಜಿನಗರದ ಬ್ರಿಟಿಷರ ಕಾಲದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ಕರೆಂಟ್ ಇಲ್ಲದೆ ಕಗ್ಗತ್ತಲಲ್ಲಿ ಮುಳುಗಿದೆ. ಸರ್ಕಾರ, ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಬಡ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೌರಿಂಗ್ ಆಸ್ಪತ್ರೆಗೆ ನಿತ್ಯ ಸಾವಿರಾರು ರೋಗಿಗಳು ಆಗಮಿಸುತ್ತಾರೆ. ನಿತ್ಯ ಹತ್ತಾರು ಗರ್ಭಿಣಿಯರು ಹೆರಿಗೆಗಾಗಿ ಇದೇ ಆಸ್ಪತ್ರೆ ಮೇಲೆ ಅವಲಂಬಿತರಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್​ ಸಮಸ್ಯೆಯಿಂದಾಗಿ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು ಆಸ್ಪತ್ರೆ ಮುಂಭಾಗ ವೈಯರ್​ ಕಟ್ ಆಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಂದ ವಿದ್ಯುತ್​ ಬಿಲ್​ ಬಾಕಿ: ಅನುದಾನ ಕೋರಿ ಆರೋಗ್ಯ ಇಲಾಖೆ ಮುಖ್ಯ ಲೆಕ್ಕಾಧಿಕಾರಿಗೆ ಪತ್ರ

ಲಕ್ಷ ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಆಸ್ಪತ್ರೆಗಳು

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಇದ್ದರೆ, ವಿದ್ಯುತ್‌ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಹಾಗೂ ಜಯನಗರದ ಆಸ್ಪತ್ರೆ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಲೈಟ್, ಫ್ಯಾನ್, ಎಜಿಯ ಜೊತೆಗೆ ಆಕ್ಸಿಜನ್ ಘಟಕ, ವೆಂಟಿಲೇಟರ್, ಆಪರೇಷನ್ ಥಿಯೇಟರ್, ಲಿಫ್ಟ್ ಸೇರಿದಂತೆ ಇತರೆ ಬಳಕೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ಬಿಲ್ ಹಾಗೆ ಬಾಕಿ ಉಳಿದಿದೆ. ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುತ್ತಾರೆ. ಇಂತಹ ಸನ್ನಿವೇಶದಲ್ಲಿ ವಿದ್ಯುತ್ ಬಳಕೆ ಹೆಚ್ಚಳ ಸರ್ವೇ ಸಾಮಾನ್ಯವಾಗಿರುತ್ತೆ. ವಿದ್ಯುತ್ ಬಿಲ್ ಬಾಕಿ ಇರುವ ಪರಿಣಾಮ ಸರ್ಕಾರಕ್ಕೆ 40 ಲಕ್ಷ ಬಿಡುಗಡೆ ಕೋರಿ ಪತ್ರ ಬರೆಯಲಾಗಿದೆ‌. ಖಜಾನೆಯಿಂದ ಹಣ ಬಿಡುಗಡೆಯಾದ ಬಳಿಕ ಕೂಡಲೇ ಬಾಕಿ ವಿದ್ಯುತ್ ಬಿಲ್ ಪಾವತಿಗೊಳಿಸುವುದಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಯ ವೈಧ್ಯಾಧಿಕಾರಿ ರಾಮಕೃಷ್ಣ ತಿಳಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Mon, 6 February 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?