AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಸಿದ್ದರಾಗಿ: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ; ಕನಿಷ್ಠ ತಾಪಮಾನ ಎಷ್ಟು ಗೊತ್ತಾ?

ಬೆಂಗಳೂರಿನಲ್ಲಿ ಮುಂದಿನ ವಾರ ದಾಖಲೆಯ ಚಳಿ ಎದುರಾಗಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನಗರದ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಇದು 2016ರ ನಂತರ ಡಿಸೆಂಬರ್‌ನಲ್ಲಿ ದಾಖಲಾಗುವ ಅತ್ಯಂತ ಕಡಿಮೆ ತಾಪಮಾನವಾಗಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲೂ ಚಳಿಯ ತೀವ್ರತೆ ಹೆಚ್ಚಲಿದೆ.

ಬೆಂಗಳೂರಿಗರೇ ಸಿದ್ದರಾಗಿ: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ; ಕನಿಷ್ಠ ತಾಪಮಾನ ಎಷ್ಟು ಗೊತ್ತಾ?
ಚಳಿ
ಪ್ರಸನ್ನ ಹೆಗಡೆ
|

Updated on: Dec 11, 2025 | 11:56 AM

Share

ಬೆಂಗಳೂರು, ಡಿಸೆಂಬರ್​​ 11: ಸಿಲಿಕಾನ್​​ ಸಿಟಿ ನಿವಾಸಿಗಳೇ ಈಗ ಇರುವ ವಾತಾವರಣವೇ ನಿಮಗೆ ಚಳಿ ಚಳಿ ಅನ್ನಿಸುತ್ತಿದ್ಯಾ? ಹಾಗಿದ್ರೆ ಮತ್ತಷ್ಟು ಕೂಲ್​​ ಕೂಲ್​​ ವೆದರ್​​ ಎದುರಿಸಲು ನೀವು ಸಿದ್ಧರಾಗಿ. ರಾಜಧಾನಿ ಬೆಂಗಳೂರಲ್ಲಿ ಮುಂದಿನ ವಾರ ಚಳಿ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಳಾಖೆ ತಿಳಿಸಿದೆ. ನಗರದ ಕನಿಷ್ಠ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯುವ ನಿರೀಕ್ಷೆಯಿದ್ದು, ಇದು 2016ರ ನಂತರ ಡಿಸೆಂಬರ್‌ನಲ್ಲಿ ದಾಖಲಾಗುವ ಅತಿ ಕಡಿಮೆ ತಾಪಮಾನವಾಗಿದೆ.

ನಗರದಲ್ಲಿ ಚಳಿಗಾಲದ ತೀವ್ರತೆ ಕ್ರಮೇಣ ಹೆಚ್ಚುತ್ತಿದ್ದು, ಮುಂದಿನವಾರ ಬೆಳಗ್ಗಿನ ಹೊತ್ತು ಮತ್ತು ಸಂಜೆ ವೇಳೆ ಭರ್ಜರಿ ಚಳಿ ಇರಲಿದೆ. ಕಳೆದ ವಾರ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದ ಪರಿಣಾಮ ಬೆಂಗಳೂರಿಗರಿಗೆ ಚಳಿಯ ಅನುಭವ ಆಗಿತ್ತು. ಆದ್ರೆ ಮುಂದಿನ ವಾರ ನಗರದ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆ ಆಗಲಿರುವ ಕಾರಣ, ಚಳಿಯೂ ಹೆಚ್ಚಲಿದೆ. IMD ಪ್ರಕಾರ, ಕನಿಷ್ಠ ತಾಪಮಾನ 12ರಿಂದ 14 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ಡಿಸೆಂಬರ್‌ನ ಸರಾಸರಿ 16.4 ಡಿಗ್ರಿಗಿಂತ ಕಡಿಮೆಯಾಗಿದೆ. ಅಂದಾಜು ಪ್ರಕಾರ ತಾಪಮಾನ ಇಳಿಕೆ ಮುಂದುವರಿದರೆ, 2016ರ ಡಿಸೆಂಬರ್ 11ರ ನಂತರ ಅತ್ಯಂತ ಚಳಿಯನ್ನು ಬೆಂಗಳೂರು 2025ರ ಡಿಸೆಂಬರ್​​ನಲ್ಲಿ ದಾಖಲಿಸಲಿದೆ. ಆ ವೇಳೆ ಕೂಡ ನಗರದ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ತಲುಪಿತ್ತು.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ; ಬೆಂಗಳೂರು ಸೇರಿ ಹಲವೆಡೆ ಶೀತಗಾಳಿ ಹೆಚ್ಚಳ

ರಾಜ್ಯದ ಹಲವೆಡೆ ಚಳಿ ಹೆಚ್ಚಡ

ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಿರಲಿದೆ. ಬೀದರ್​​, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇಂದು ಮತ್ತು ನಾಳೆ ಚಳಿ ಹೆಚ್ಚಿರಲಿದೆ. ಕರಾವಳಿ ಜಿಲ್ಲೆಗಳು ಸೇರಿ ಉಳಿದೆಡೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ