AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ!

ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರಗಳ್ಳತನ ಹೆಚ್ಚಾಗಿದೆ. ಬೈಕ್‌ನಲ್ಲಿ ಬಂದ ಹೆಲ್ಮೆಟ್‌ಧಾರಿ ಖದೀಮರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದಾರೆ. ಬಾಗಲಗುಂಟೆಯಲ್ಲಿ ಇಂದ್ರಾವತಿ ಎಂಬುವವರು 50 ಗ್ರಾಂ ಮಾಂಗಲ್ಯ ಕಳೆದುಕೊಂಡಿದ್ದು, ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಸಾರ್ವಜನಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.

ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ!
ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ
ಅಕ್ಷಯ್​ ಪಲ್ಲಮಜಲು​​
|

Updated on: Feb 21, 2026 | 6:58 PM

Share

ಬೆಂಗಳೂರು, ಫೆ.21: ರಾಜಧಾನಿಯಲ್ಲಿ (Bangalore chain snatching) ಬಂಗಾರದ ಬೆಲೆ ಗಗನಕ್ಕೇರುತ್ತಿದ್ದಂತೆ, ಇತ್ತ ಸರಗಳ್ಳರ ಹಾವಳಿಯೂ ಮಿತಿಮೀರಿದೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬರುವ ಖದೀಮರು, ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಆಗ್ಗಾಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದೀಗ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿಡಿಯೋ ಸ್ಟಾಪ್ ನಿವಾಸಿ ಇಂದ್ರಾವತಿ ಎಂಬುವವರೇ ಈ ಕೃತ್ಯಕ್ಕೆ ಬಲಿಯಾದ ಮಹಿಳೆ. ರಾತ್ರಿ ಸುಮಾರು 8:30ರ ವೇಳೆಗೆ ಇಂದ್ರಾವತಿ ಅವರು ದಿನಸಿ ಅಂಗಡಿಯಿಂದ ಸಾಮಾನು ತರಲು ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಹೊಂಚು ಹಾಕಿದ್ದ ಇಬ್ಬರು ಕಿರಾತಕರು ಬೈಕ್‌ನಲ್ಲಿ ಬಂದು, ಮೊದಲು ಇವರನ್ನು ದಾಟಿ ಮುಂದೆ ಹೋಗಿದ್ದಾರೆ. ಬಳಿಕ ಯಾರು ಇಲ್ಲದನ್ನು ಖಚಿತಪಡಿಸಿಕೊಂಡು ವಾಪಸ್ ತಿರುಗಿ ಬಂದು, ಇಂದ್ರಾವತಿ ಅವರ ಕುತ್ತಿಗೆಯಲ್ಲಿದ್ದ 50 ಗ್ರಾಂ ತೂಕದ ಮಾಂಗಲ್ಯ ಸರವನ್ನು ಬಲವಂತವಾಗಿ ಕಿತ್ತು ವೇಗವಾಗಿ ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಇಡೀ ಘಟನೆಯ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹೆಲ್ಮೆಟ್ ಧರಿಸಿದ್ದರಿಂದ ಆರೋಪಿಗಳ ಗುರುತು ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿದೆ. ಇಂದ್ರಾವತಿ ಅವರು ಗಾಬರಿಯಿಂದ ಕಿರುಚಾಡಿದರೂ, ಆರೋಪಿಗಳು ಕ್ಷಣಾರ್ಧದಲ್ಲಿ ಕಣ್ಮರೆಯಾಗಿದ್ದಾರೆ. ಬೈಕ್‌ನಲ್ಲಿ ಬಂದವರು ಏಕಾಏಕಿ ಸರಕ್ಕೆ ಕೈ ಹಾಕಿದರು. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸರ ಕಿತ್ತುಕೊಂಡು ವೇಗವಾಗಿ ಹೊರಟು ಹೋದರು ಎಂದು ಇಂದ್ರಾವತಿ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ

ನಗರದಲ್ಲಿ ಸರಗಳ್ಳರು ಮತ್ತೆ ಸಕ್ರಿಯರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ. ಬಂಗಾರದ ಬೆಲೆ ಏರಿಕೆಯಾಗಿರುವ ಈ ಸಂದರ್ಭದಲ್ಲಿ ಹಳೇ ಖದೀಮರೇ ಮತ್ತೆ ಆಕ್ಟಿವ್ ಆಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ವರದಿ:  ಮಂಜುನಾಥ್

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?