AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ DHO ಡಾ. ಶ್ರೀನಿವಾಸ್ ವಿರುದ್ಧ ಲಂಚ ಆರೋಪ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಮುಖ್ಯ ಕಚೇರಿಯಲ್ಲಿ ಡಿಹೆಚ್ಓ ಡಾ. ಶ್ರೀ ನಿವಾಸ್ ವಿರುದ್ಧ ಲಂಚ ಪಡೆದ ಆರೋಪ ಮಾಡಲಾಗಿದೆ. ಈ ಕುರಿತಾಗಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಚೇರಿಯಲ್ಲಿ ಪ್ರತಿಭಟನೆ ಮಾಡಿದರು.

ಬೆಂಗಳೂರು ನಗರ DHO ಡಾ. ಶ್ರೀನಿವಾಸ್ ವಿರುದ್ಧ ಲಂಚ ಆರೋಪ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ
ಡಾ. ಶ್ರೀನಿವಾಸ್ ವಿರುದ್ಧ ಲಂಚ ಆರೋಪ
TV9 Web
| Edited By: |

Updated on: Jun 01, 2022 | 10:14 AM

Share

ಬೆಂಗಳೂರು: ನಗರದ ಡಿಎಚ್​​ಓ ಡಾ. ಶ್ರೀನಿವಾಸ್ ವಿರುದ್ಧ ಮುಖ್ಯ ಕಚೇರಿಯಲ್ಲೇ ಲಂಚ ಪಡೆದಿರುವುದಾಗಿ ಆರೋಪ ಮಾಡಲಾಗಿದ್ದು, ಬಿಳಿ ಬಣ್ಣದ ಕವರ್​ನಲ್ಲಿ ಡಾ. ಶ್ರೀನಿವಾಸ್​ಗೆ 500 ರೂಪಾಯಿ ನೋಟುಗಳಿದ್ದ 4 ಕವರ್​ನ್ನು ಅಪರಿಚಿತ ವ್ಯಕ್ತಿಗಳು ನೀಡಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ಮಧ್ಯಾಹ್ನ 3ರ ಸುಮಾರಿಗೆ ಡಿಎಚ್​​ಓ ಲಂಚ ಪಡೆದಿರುವುದಾಗಿ ಆರೋಪಿಸಿದ್ದು, ಡಾ. ಶ್ರೀನಿವಾಸ್​ಗೆ ಇಬ್ಬರು ಹಣ ನೀಡುವ ದೃಶ್ಯ ಟಿವಿ 9ಗೆ ಲಭ್ಯವಾಗಿದೆ. ಹಣದ ಕವರ್​ ನೀಡಿದ ಬಳಿಕ ಆಪ್​ ಕಾರ್ಯಕರ್ತರಿಂದ DHOಗೆ ಪ್ರಶ್ನೆ ಮಾಡಿದ್ದು, ಆನ್​ಲೈನ್ ಫೀಸ್ ಕಟ್ಟಲು ಹಣ ನೀಡಿದ್ದಾರೆ ಎಂದು ಡಿಹೆಚ್​ಒ ಉತ್ತರ  ನೀಡಿದ್ದಾರೆ. ಫೀಸ್ ಬಗ್ಗೆ ಪ್ರಶ್ನೆ ಮಾಡಿದಾಗ ಮತ್ತೊಂದು ಉತ್ತರ ನೀಡಿದ ಡಿಹೆಚ್​ಒ, ಹಣ ಕೊಟ್ಟವರು ಯಾರು ಎಂದು ನನಗೆ ಗೊತ್ತೇ ಇಲ್ಲ ಎಂದು ಡಾ. ಶ್ರೀನಿವಾಸ್ ಹೇಳಿದರು. ಈ ವೇಳೆ ಕಚೇರಿಯಿಂದ ತಪ್ಪಿಸಿಕೊಳ್ಳಲು ಡಿಹೆಚ್​ಒ ಡಾ. ಶ್ರೀನಿವಾಸ್​ ಯತ್ನಿಸಿದ್ದು, ಕಾರಿನ ಮುಂದೆ ಮಲಗಿ ಆಪ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಾರ್ ಬಿಟ್ಟು ನಡೆದುಕೊಂಡೇ ತೆರಳಿದರು.

ಪ್ರಕರಣ ಏನು ಅಂತ ನೋಡೋದಾದ್ರೆ:

ಯಲಹಂಕ ಭಾಗದಲ್ಲಿ ಕ್ಲೋಸ್ ಆಗಿದ್ದ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮತ್ತೆ ಓಪನ್ ಮಾಡುವಂತೆ ಮನವಿ ಮಾಡಲು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಕಾರ್ಯದರ್ಶಿ ಸುಹಾಸಿನಿ ಡಿಹೆಚ್ಓ ಡಾ. ಶ್ರೀನಿವಾಸ್​ರನ್ನು ಭೇಟಿ ಮಾಡಿ ಮನವಿ ನೀಡಲು ಬಂದಿದ್ದರು. ಈ ವೇಳೆ ಒಬ್ಬ ಮಹಿಳೆ ಮತ್ತು ಪುರುಷ ಐನೂರು ರುಪಾಯಿ ನೋಟುಗಳನ್ನು ಎಣಿಸಿ ಬಿಳಿ ಬಣ್ಣದ ಕವರ್ ನಲ್ಲಿ ಹಾಕುತ್ತಿದ್ದರು. ಆ ಕವರ್​ಗಳನ್ನು ತೆಗೆದುಕೊಂಡು ಡಿಹೆಚ್ಓ ರೂಮ್​ನೊಳಗೆ ಹೋದರು. ನಂತರ ರೂಮ್​ನೊಳಗೆ ಹೋಗಿ ನೋಡಿದರೆ ಹಣವಿದ್ದ ಬಿಳಿ ಬಣ್ಣದ ಕವರ್​ಗಳು ಡಿಹೆಚ್ಓ ಕುಳಿತಿದ್ದ ಟೇಬಲ್ ಮೇಲೆ ಕಂಡುಬಂದಿದೆ. ನಂತರ ಸುಹಾಸಿನಿ ಆಮ್ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಬಂದು, ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು, ಕೇಂದ್ರ ಸಚಿವ ಸಂಪುಟ ಮತ್ತೆ ಪುನರ್​ರಚನೆ ಸಾಧ್ಯತೆ

ಡಿಹೆಚ್ಓ ಡಾ. ಶ್ರೀನಿವಾಸ್ ಅವರು ನಾರಾಯಣ ಹೃದಯಲುದವರು. ಆನ್ಲೈನ್​ನಲ್ಲಿ ಫೀಸ್ ಕಟ್ಟಲು ಹಣ ನೀಡಿದರು ಅಂತ ಉತ್ತರಿಸಿದರು. ಯಾವುದಕ್ಕೆ ಈ ಫೀಸ್ ಎಂದು ಪ್ರಶ್ನೆ ಮಾಡಿದರೆ, ಅವರು ಯಾರು ಅಂತ ನನಗೆ ಗೊತ್ತಿಲ್ಲ ನನ್ನ ಟೇಬಲ್ ಮೇಲೆ ಹಣವಿಟ್ಟು ಹೋಗಿದ್ದಾರೆ ಎಂದು ಹೇಳಿದರು. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಚೇರಿಯಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದು, ಈ ವೇಳೆ ಡಾ. ಶ್ರೀ ನಿವಾಸ್ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕಾರಿನ ಮುಂದೆ ಮಲಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ ಬಿಟ್ಟು ಡಿಹೆಚ್ಓ ಡಾ. ಶ್ರೀನಿವಾಸ್ ನಡೆದುಕೊಂಡೆ ಹೋಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?