AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎಂಎಎಲ್​ಸಿ ಚುನಾವಣೆ: 15 ಸದಸ್ಯರ ಮತದಾನಕ್ಕೆ ಹೈ ಅನುಮತಿ, ಆದರೆ ಫಲಿತಾಂಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ

ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ರಿಟ್ ಅರ್ಜಿ ಸಲ್ಲಿಸಿ, ಆನೇಕಲ್‌, ಅತ್ತಿಬೆಲೆ ಮತ್ತು ಮಹದೇವಪುರ ಪುರಸಭೆಯ 15 ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿದ್ದರು.

ಬೆಂಗಳೂರು ಎಂಎಎಲ್​ಸಿ ಚುನಾವಣೆ: 15 ಸದಸ್ಯರ ಮತದಾನಕ್ಕೆ ಹೈ ಅನುಮತಿ, ಆದರೆ ಫಲಿತಾಂಶಕ್ಕೆ ಕೋರ್ಟ್ ಅನುಮತಿ ಕಡ್ಡಾಯ
ಹೈಕೋರ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Dec 09, 2021 | 1:32 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಎಂಎಎಲ್​ಸಿ ಚುನಾವಣೆ ವಿಚಾರ (Bangalore City Legislative Council Elections Voting) ನಡೆಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಿಧಾನ ಪರಷತ್​ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ ಇಡಬೇಕು. ಕೋರ್ಟ್ ಅನುಮತಿಯಿಲ್ಲದೆ ಫಲಿತಾಂಶ ಪ್ರಕಟಿಸಬಾರದು ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಇನ್ನು ಚುನಾವಣೆಯಲ್ಲಿ 15 ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು ಎಂದೂ ಹೈ ನ್ಯಾಯ ಪೀಠ ಸೂಚಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ರಿಟ್ ಅರ್ಜಿ ಸಲ್ಲಿಸಿ, ಆನೇಕಲ್‌, ಅತ್ತಿಬೆಲೆ ಮತ್ತು ಮಹದೇವಪುರ ಪುರಸಭೆಯ 15 ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿದ್ದರು.

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದೆ. ನಾಳೆ ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ (Biennial elections) ಅಧಿಸೂಚನೆ ಪ್ರಕಟವಾಗಿದ್ದು,ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಡಿಸೆಂಬರ್ 10ರಂದು ರಾಜ್ಯ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಎಲೆಕ್ಷನ್ ನಡೆಯಲಿದೆ.

ಇದನ್ನು ಓದಿ:

ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

ನಾಳೆ ಶುಕ್ರವಾರ ವಿಧಾನ ಪರಿಷತ್ ದೈವಾರ್ಷಿಕ ಚುನಾವಣೆ: ಮತದಾನ ಹೇಗೆ ಮಾಡಬೇಕು? ವಿವರ ಇಲ್ಲಿದೆ

Published On - 1:23 pm, Thu, 9 December 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ